ರೈಲಿನಲ್ಲಿ ಪ್ರಯಾಣಿಸುವವರಿಗೆ ಹೊಸ ಮಾರ್ಗಸೂಚಿ: ಸಚಿವ ಸುರೇಶ್ ಅಂಗಡಿ ಹೇಳಿದ್ರು ಬಿಡಿಸಿ-ಬಿಡಿಸಿ

Published : May 11, 2020, 03:36 PM IST
ರೈಲಿನಲ್ಲಿ ಪ್ರಯಾಣಿಸುವವರಿಗೆ ಹೊಸ ಮಾರ್ಗಸೂಚಿ: ಸಚಿವ ಸುರೇಶ್ ಅಂಗಡಿ ಹೇಳಿದ್ರು ಬಿಡಿಸಿ-ಬಿಡಿಸಿ

ಸಾರಾಂಶ

ಲಾಕ್‌ಡೌನ್ ಮಧ್ಯೆಯೂ ರೈಲು ಸಂಚಾರಕ್ಕೆ ಅನುಮತಿ ನೀಡಿರುವ ಬಗ್ಗೆ ಪರ-ವಿರೋಧಗಳ ಚರ್ಚೆಗಳಾಗುತ್ತಿವೆ. ಇದೀಗ ಇದಕ್ಕೆ ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತೆರೆ ಎಳೆದಿದ್ದಾರೆ.

ಬೆಳಗಾವಿ, (ಮೇ.11): ಕೊರೋನಾ ಕಾರಣಕ್ಕೆ ದೇಶದ ಕೆಲ ರೈಲುಗಳು 50 ದಿನಗಳ ಬಳಿಕ ಸಂಚರಿಸಲು ಸಿದ್ಧವಾಗಿವೆ. ನಾಳೆಯಿಂದ (ಮಂಗಳವಾರ) ದೆಹಲಿ ಸೇರಿದಂತೆ ಕೆಲವು ನಗರಗಳಲ್ಲಿ 15 ಪ್ಯಾಸೆಂಜರ್ ರೈಲುಗಳನ್ನು ಓಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 

ಲಾಕ್‌ಡೌನ್ ಮಧ್ಯೆಯೂ ರೈಲು ಸಂಚಾರಕ್ಕೆ ಅನುಮತಿ ನೀಡಿರುವ ಬಗ್ಗೆ ಪರ-ವಿರೋಧಗಳ ಚರ್ಚೆಗಳಾಗುತ್ತಿವೆ. ಇದೀಗ ಇದಕ್ಕೆ ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತೆರೆ ಎಳೆದಿದ್ದಾರೆ.

ಚುಕುಬುಕು ರೈಲು ಸಂಚಾರಕ್ಕೆ ಲಾಕ್‌ ಓಪನ್:ಆನ್‌ಲೈನ್ ಬುಕ್ಕಿಂಗ್ ಸೇವೆಯೂ ಆರಂಭ

ಇಂದು (ಸೋಮವಾರ) ಬೆಳಗಾವಿಯಲ್ಲಿ ಮಾತನಾಡಿದ ಸುರೇಶ್ ಅಂಗಡಿ, ಲಾಕ್‌ಡೌನ್ ಸಂಕಷ್ಟದಲ್ಲಿರುವವರಿಗೆ 15 ವಿಶೇಷ ರೇಲ್ವೆಗಳ ಸಂಚಾರಿಸಲಿವೆ ಎಂದು ಸ್ಪಷ್ಟಪಡಿಸಿದರು.

ಇನ್ನು ಇದೇ ವೇಳೆ ಈ ರೈಲುಗಳಲ್ಲಿ ಸಂಚರಿಸಲು ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಮಾರ್ಗ ಸೂಚಿಗಳನ್ನು ಸಚಿವರು ಮಾಧ್ಯಮಗಳ ಜತೆ ಹಂಚಿಕೊಂಡು. ಅವು ಈ ಕೆಳಗಿನಂತಿವೆ ನೋಡಿ.

* ಗೃಹ ಸಚಿವಾಲಯ ಹೊರಡಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ, ದೃಢಪಡಿಸಿದ ಇ-ಟಿಕೆಟ್ ಹೊಂದಿರುವ ಜನರು ಮಾತ್ರ ಈ ರೈಲುಗಳಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತದೆ.

* ಆರೋಗ್ಯ ತಪಾಸಣೆ ಮತ್ತು ಪ್ಲಾಟ್‌ಫಾರ್ಮ್‌ನ ಸ್ಕ್ರೀನಿಂಗ್ ನಲ್ಲಿ ಹಾದುಹೋಗುವ ಪ್ರಯಾಣಿಕರಿಗೆ ಮಾತ್ರ ಈ ರೈಲುಗಳಲ್ಲಿ ಪ್ರಯಾಣಿಸಲು ಅನುಮತಿ ಸಿಗುತ್ತದೆ. 

* ಯಾವುದೇ ವ್ಯಕ್ತಿಗೆ ಕೊರೋನಾದ ಯಾವುದೇ ಸೌಮ್ಯ ಲಕ್ಷಣಗಳು ಕಂಡುಬಂದರೆ ರೈಲು ಹತ್ತಲು ಅವಕಾಶವಿರುವುದಿಲ್ಲ.

* ರೈಲು ಪ್ರಯಾಣದ ಸಮಯದಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯ. ಸ್ಯಾನಿಟೈಜರ್ ಬಳಸಬೇಕಾಗುತ್ತದೆ. ಕಸ ತುಂಬಲು ಚೀಲ ತೆಗೆದುಕೊಂಡು ಹೋಗಬೇಕು.

* ರೈಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರಯಾಣಿಕರು ಬೋರ್ಡಿಂಗ್, ಲ್ಯಾಂಡಿಂಗ್ ಮತ್ತು ಪ್ರಯಾಣದುದ್ದಕ್ಕೂ ಆರೋಗ್ಯ ಸಚಿವಾಲಯ ಹೊರಡಿಸಿದ ನೈರ್ಮಲ್ಯ ನಿಯಮಗಳನ್ನು ಪಾಲಿಸುವುದು ಅವಶ್ಯಕ.

* ರೈಲಿನ ಸಮಯಕ್ಕಿಂತ 2 ಗಂಟೆಗಳ ಮೊದಲು ಪ್ರಯಾಣಿಕರು ನಿಲ್ದಾಣವನ್ನು ತಲುಪಬೇಕು. ಎಲ್ಲಾ ರೈಲುಗಳು ಸೀಮಿತ ನಿಲ್ದಾಣಗಳೊಂದಿಗೆ ಮಾತ್ರ ಚಲಿಸುತ್ತವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: BBK 12 - ಸ್ಪಂದನಾ ಸೋಮಣ್ಣ ಮುಂದೆ ರಜತ್‌ ಅಸಭ್ಯ ವರ್ತನೆ ಮಾಡಿದ್ರು - ಧ್ರುವಂತ್‌ ವಿರುದ್ಧ ರಜತ್‌ ಆರೋಪ