ಜೂನ್‌ ವೇಳೆಗೆ ಮನೆ ನಿರ್ಮಾಣ ಆಗದಿದ್ದರೆ ಸಚಿವ ಸ್ಥಾನದಲ್ಲಿ ಇರಲ್ಲ: ಸೋಮಣ್ಣ

Kannadaprabha News   | Asianet News
Published : Sep 10, 2020, 08:45 AM IST
ಜೂನ್‌ ವೇಳೆಗೆ ಮನೆ ನಿರ್ಮಾಣ ಆಗದಿದ್ದರೆ ಸಚಿವ ಸ್ಥಾನದಲ್ಲಿ ಇರಲ್ಲ: ಸೋಮಣ್ಣ

ಸಾರಾಂಶ

ಜೂನ್‌ ವೇಳೆಗೆ 43 ಸಾವಿರ ಮನೆ ನಿರ್ಮಾಣ: ಸಚಿವ ವಿ.ಸೋಮಣ್ಣ| ಮನೆ ನಿರ್ಮಾಣಕ್ಕೆ 900 ಎಕರೆ ಭೂಮಿ ದೊರೆತಿದೆ| ಕಂದಾಯ ಸಚಿವರ ಜೊತೆಗೂ ಈ ಸಂಬಂಧ ಮಾತುಕತೆ ನಡೆಸಲಾಗಿದೆ| ಬಡವರು, ಗುಡಿಸಲಿನಲ್ಲಿ ಇರುವವರಿಗೆ ಮನೆ ನೀಡಲಾಗುವುದು ಎಂದು ತಿಳಿಸಿದ ಸಚಿವರು| 

ಬೆಂಗಳೂರು(ಸೆ.10): ನಗರ ಜಿಲ್ಲಾ ವ್ಯಾಪ್ತಿಯಲ್ಲಿನ ಬಡವರಿಗೆ ಮನೆ ನೀಡುವ ಒಂದು ಲಕ್ಷ ಮನೆ ನಿರ್ಮಾಣ ಯೋಜನೆಯಡಿ 43 ಸಾವಿರ ಮನೆ ನಿರ್ಮಾಣ ನಡೆಯುತ್ತಿದ್ದು, ಜೂನ್‌ ಒಳಗಾಗಿ 25 ಸಾವಿರ ಮನೆ ವಿತರಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಬುಧವಾರ ಮನೆ ನಿರ್ಮಿಸಲಿರುವ ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ಸರ್ಕಾರಿ ಭೂಮಿ ಮಂಜೂರಾತಿ ಹಾಗೂ ಹಸ್ತಾಂತರ ಕುರಿತು ಆಗಿರುವ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಒಟ್ಟಾರೆ ಮನೆ ನಿರ್ಮಾಣಕ್ಕೆ 900 ಎಕರೆ ಭೂಮಿ ದೊರೆತಿದೆ, ಕಂದಾಯ ಸಚಿವರ ಜೊತೆಗೂ ಈ ಸಂಬಂಧ ಮಾತುಕತೆ ನಡೆಸಲಾಗಿದೆ, ಬಡವರು, ಗುಡಿಸಲಿನಲ್ಲಿ ಇರುವವರಿಗೆ ಮನೆ ನೀಡಲಾಗುವುದು ಎಂದರು.

ಶೀಘ್ರ 35 ಸಾವಿರ ಮನೆ ಫಲಾನುಭವಿಗಳಿಗೆ ಹಸ್ತಾಂತರ: ಸೋಮಣ್ಣ

ಇಚ್ಛಾಶಕ್ತಿ ಇದ್ದರೆ ಮಾತ್ರ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮನೆ ನಿರ್ಮಾಣ ಮಾಡಲು ಸಾಧ್ಯ, ಜೂನ್‌ ಒಳಗೆ 25 ಸಾವಿರ ಮನೆಗಳನ್ನು ನಿರ್ಮಾಣ ಮಾಡದಿದ್ದರೆ ಸಚಿವ ಸ್ಥಾನದಲ್ಲಿ ಇರುವುದಿಲ್ಲ. ಅಧಿಕಾರಿಗಳು ಈ ಕೆಲಸ ಮಾಡದಿದ್ದರೆ ಅದರ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಸಚಿವ ಸೋಮಣ್ಣ ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: BBK 12 - ಬಿಗ್‌ಬಾಸ್ ಕೊಟ್ಟ ಚೆಕ್‌ಮೆಟ್‌ಗೆ ಮಕ್ಕರ್ ಆದ ಗಿಲ್ಲಿ; ಚಮಕ್ ಕೊಟ್ಟ ರಕ್ಷಿತಾ, ಇತ್ತ ಕಾವ್ಯಾಗೆ ತಳಮಳ
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ