
ಬೆಂಗಳೂರು (ಏ.12): ಬೆಂಗಳೂರಿನಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರು ಈ ಬಗ್ಗೆ ಸ್ಪಷ್ಟಪಡಿಸಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಸಿಬಿ ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ ನಡೆಸಿ ಮಕ್ಕಳನ್ನು ರಕ್ಷಿಸಲಾಗಿದೆ.
ಪುಲಕೇಶಿ ನಗರದಲ್ಲಿ ಅಪ್ರಾಪ್ತ ಮಕ್ಕಳನ್ನ ಬಳಸಿ ಭಿಕ್ಷಾಟನೆ ನಡೆಸುತ್ತಿದ್ರು ಈ ಸಂಬಂಧ 36 ಜನ ಮಹಿಳೆಯರನ್ನ ವಶಕ್ಕೆ ಪಡೆಯಲಾಗಿದೆ. ಮಸೀದಿಗಳ ಮುಂದೆ ಬೇರೆ ಬೇರೆ ಸ್ಥಳದಲ್ಲಿ ಭಿಕ್ಷಾಟನೆ ಮಾಡಲಾಗುತ್ತಿದ್ದು, ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ 6 ಜನ ಮಕ್ಕಳಿದ್ದರು. 19 ಗಂಡು 28 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 47 ಮಕ್ಕಳ ರಕ್ಷಣೆಯಾಗಿದೆ.
Rameshwaram Cafe Blast case: ಕೆಫೆ ಬಾಂಬ್ ಇಟ್ಟ ಮಾಸ್ಟರ್ ಮೈಂಡ್ ಉಗ್ರ ಸೇರಿ ಇಬ್ಬರು ಅರೆಸ್ಟ್
1-3 ವರ್ಷದ ಮಕ್ಕಳು 12
3-6 ವರ್ಷ ದ ಮಕ್ಕಳು 6
6-10ವರ್ಷದ ಮಕ್ಕಳು 16
10 ವರ್ಷ ಮೇಲ್ಪಟ್ಟು 7
ಇದು ಯಾರ ಮಕ್ಕಳು ಎಂದು ಪರಿಶೀಲನೆ ನಡೆಸುತ್ತಿದ್ದೇವೆ. ಒಂದುವೇಳೆ ಭಿಕ್ಷಾಟನೆ ನಡೆಸುತ್ತಿರುವವರ ಮಕ್ಕಳೇ ಅಥವಾ ಬೇರೆಯವರ ಮಕ್ಕಳೇ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ದಯಾನಂದ್ ಸ್ಪಷ್ಟಪಡಿಸಿದ್ದಾರೆ.
ನಿಮ್ಮ ನೂರಾರು ವಿಷಯಗಳು ನನ್ನ ಬಳಿ ಇವೆ: ಕೂಡಲ ಶ್ರೀಗಳಿಗೆ ಎಚ್ಚರಿಕೆ ಕೊಟ್ಟ ನಿರಾಣಿ..!
ಫ್ರೇಜರ್ ಟೌನ್, ಕೋರಮಂಗಲ, ಕೆ.ಜಿ.ಹಳ್ಳಿ ಮತ್ತಿತರ ಕಡೆಗಳಲ್ಲಿ ಬಡ ಕುಟುಂಬದ ಮಕ್ಕಳನ್ನು ಬಲವಂತವಾಗಿ ಭಿಕ್ಷಾಟನೆಗೆ ತಳ್ಳುತ್ತಿದ್ದ ಟ್ರಾಫಿಕ್ ಸಿಗ್ನಲ್ ಗಳ ಮೇಲೆ ಪೊಲೀಸರು ದಾಳಿ ನಡೆಸಿ ರಕ್ಷಣೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ