ಗದಗ: ನೂಕು ನುಗ್ಗಲಿನಲ್ಲಿ ಬಸ್ ಹತ್ತಲು ಹೋಗಿ ಅಸ್ವಸ್ಥಗೊಂಡ ಬಾಲಕಿ!

Published : Oct 21, 2024, 07:03 PM IST
ಗದಗ: ನೂಕು ನುಗ್ಗಲಿನಲ್ಲಿ ಬಸ್ ಹತ್ತಲು ಹೋಗಿ ಅಸ್ವಸ್ಥಗೊಂಡ ಬಾಲಕಿ!

ಸಾರಾಂಶ

ನೂಕು ನುಗ್ಗಲಿನಲ್ಲಿ ಬಸ್ ಹತ್ತಲು ಹೋಗಿ ಬಾಲಕಿಯೋರ್ವಳು ಅಸ್ವಸ್ಥಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ನಡೆದಿದೆ. 

ಗದಗ (ಅ.21): ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿದ ಬಳಿಕ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಪ್ರಯಾಣ ಹೆಚ್ಚಾಗಿದೆ.  ಪ್ರತಿಯೊಂದು ಸಾರಿಗೆ ಬಸ್ ಮಹಿಳೆಯರಿಂದ ತುಂಬಿತುಳುಕುತ್ತಿವೆ, ವಿದ್ಯಾರ್ಥಿಗಳು, ಮಕ್ಕಳು, ಗರ್ಭಿಣಿಯರು ಬಸ್‌ನಲ್ಲಿ ಪ್ರಯಾಣಿಸುವುದು ಅಸಾಧ್ಯವಾಗಿದೆ. ನೂಕುನುಗ್ಗಲಿನ ಬಸ್‌ಗಳಲ್ಲಿ ದಿನನಿತ್ಯ ಗಲಾಟೆ, ಕಳ್ಳತನದಂತ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಅಂತಹದ್ದೆ ಮತ್ತೊಂದು ಘಟನೆ ನಡೆದುಹೋಗಿದೆ. 

ನೂಕು ನುಗ್ಗಲಿನಲ್ಲಿ ಬಸ್ ಹತ್ತಲು ಹೋಗಿ ಬಾಲಕಿಯೋರ್ವಳು ಅಸ್ವಸ್ಥಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರಿಂದ ಲಕ್ಷ್ಮೇಶ್ವರ ಮೂಲಕ ಗದಗ ತಲುಪುವ ಬಸ್. ಗದಗ ಹೋಗಲು ಬಸ್‌ ನಿಲ್ದಾಣದಲ್ಲಿ ಜಮಾವಣೆಗೊಂಡಿದ್ದ ಪ್ರಯಾಣಿಕರು. ಬಸ್ ಬರುತ್ತಿದ್ದಂತೆ ಸೀಟು ಹಿಡಿಯಲು ನೂಕುನುಗ್ಗಲಾಗಿದೆ. 

ಉಗುಳಲು ಹೋಗಿ ಬಸ್ ಕಿಟಕಿಯೊಳಗೆ ಗೃಹಲಕ್ಷ್ಮೀ ತಲೆ ಲಾಕ್, ಇದು ನಿನಗೆ ಬೇಕಿತ್ತಾ ಎಂದ ನೆಟ್ಟಿಗರು

ಜನರ ಮಧ್ಯೆ ತೂರಿಕೊಂಡು ಬಸ್ ಹತ್ತಲು ಮುಂದಾಗಿದ್ದ ಬಾಲಕಿ. ಆದರೆ ಜನರ ನೂಕುನುಗ್ಗಲಿಗೆ ಬಸ್ ಹತ್ತಲಾಗದೆ, ಹೊರಬರಲಾಗದೆ ಉಸಿರಾಟ ತೊಂದರೆ ಅನುಭವಿಸಿ ಅಸ್ವಸ್ಥಗೊಂಡ ಬಾಲಕಿ. ಬಾಲಕಿ ಅಸ್ವಸ್ಥಗೊಂಡು ಕುಸಿದು ಬಿಳುತ್ತಿದ್ದಂತೆ ಮಗುವನ್ನು ಎತ್ತಿ ಗಾಳಿ ಬೀಸಿ ಆರೈಕೆ ಮಾಡಿದ ಸಹಪ್ರಯಾಣಿಕರು. ಕೆಲ ಹೊತ್ತು ಬಸ್ ನಿಲ್ದಾಣದಲ್ಲಿ ಕೂರಿಸಿ ಸಾವರಿಸಿಕೊಂಡ ಬಳಿಕ ಬಸ್‌ಗೆ ಹೋಗಿರುವ ಬಾಲಕಿ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!