ಅನಂತ ಪದ್ಮನಾಭ ದೇವಸ್ಥಾನದ 'ಬಬಿಯಾ' ಇನ್ನಿಲ್ಲ!

Published : Oct 10, 2022, 08:58 AM ISTUpdated : Oct 10, 2022, 09:28 AM IST
ಅನಂತ ಪದ್ಮನಾಭ ದೇವಸ್ಥಾನದ 'ಬಬಿಯಾ' ಇನ್ನಿಲ್ಲ!

ಸಾರಾಂಶ

ಕರ್ನಾಟಕ ಗಡಿ‌ಭಾಗ ಕಾಸರಗೋಡಿನ ಅನಂತ ಪದ್ಮನಾಭ ದೇವಸ್ಥಾನದ 'ಬಬಿಯಾ' ಹೆಸರಿನ ಮೊಸಳೆ ಇಹಲೋಕ ತ್ಯಜಿಸಿದೆ. ಹಲವು ವರ್ಷಗಳ ಕಾಲ ದೇವಸ್ಥಾನದ ಭಕ್ತರ ಕೇಂದ್ರ ಬಿಂದುವಾಗಿದ್ದ ಮೊಸಳೆ ಅಕಾಲಿಕ ಮರಣವು ಭಕ್ತ ವಲಯದಲ್ಲಿ ನೋವು ತಂದಿದೆ.

ಮಂಗಳೂರು (ಅ.10): ಕರ್ನಾಟಕ ಗಡಿ‌ಭಾಗ ಕಾಸರಗೋಡಿನ ಅನಂತ ಪದ್ಮನಾಭ ದೇವಸ್ಥಾನದ 'ಬಬಿಯಾ' ಹೆಸರಿನ ಮೊಸಳೆ ಇಹಲೋಕ ತ್ಯಜಿಸಿದೆ. ಹಲವು ವರ್ಷಗಳ ಕಾಲ ದೇವಸ್ಥಾನದ ಭಕ್ತರ ಕೇಂದ್ರ ಬಿಂದುವಾಗಿದ್ದ ಮೊಸಳೆ ಅಕಾಲಿಕ ಮರಣವು ಭಕ್ತ ವಲಯದಲ್ಲಿ ನೋವು ತಂದಿದೆ.

ಮಂಗಳೂರು(Mangaluru) ಗಡಿಭಾಗದ ಕಾಸರಗೋಡು(Kasaragodu) ಜಿಲ್ಲೆಯ ಕುಂಬಳೆ(Kumbale)ಯ ಅನಂತ ಪದ್ಮನಾಭ ದೇವಸ್ಥಾನ(Anantha Padmanabha Swamy Temple)ದಲ್ಲಿ ಸಸ್ಯಹಾರಿ ಮೊಸಳೆ ಎಂದೇ ಬಬಿಯಾ(Babiya) ಪ್ರಖ್ಯಾತಿ ಪಡೆದಿತ್ತು.ಕಳೆದ 70 ವರ್ಷಗಳಿಂದ ಈ ಮೊಸಳೆ(Babiya crocodile) ದೇವಸ್ಥಾನದ ಕೆರೆಯಲ್ಲಿದೆ ಎಂಬ ನಂಬಿಕೆಯಿತ್ತು. ತಿರುವನಂತಪುರಂ(Tiruvananthapuram)ನಲ್ಲಿರುವ ಅನಂತಪದ್ಮನಾಭ ಸ್ವಾಮಿಯ ಮೂಲ ಕ್ಷೇತ್ರ ಎನ್ನಲಾದ ಕುಂಬಳೆ ಅನಂತ ಪದ್ಮನಾಭ ದೇವಸ್ಥಾನದ ಕಲ್ಯಾಣಿಯಲ್ಲಿ ಬಬಿಯಾ ವಾಸವಾಗಿತ್ತು. 

ದೇವಸ್ಥಾನದ ಆವರಣದಲ್ಲಿ ಬಬಿಯಾ ಮೊಸಳೆಯ ಅಂತಿಮ ವಿಧಿ ವಿಧಾನ ನಡೆಯಲಿದೆ. ನಿತ್ಯ ಎರಡು ಬಾರಿ ಪೂಜೆ ಬಳಿಕ ನೈವೇದ್ಯ ಸ್ವೀಕರಿಸುತ್ತಿದ್ದ ಮೊಸಳೆ, ದೇವರ ಮೊಸಳೆ ಎಂದೇ ಪ್ರಖ್ಯಾತಿ ‌ಪಡೆದಿತ್ತು.‌ ಎರಡು ವರ್ಷಗಳ ಹಿಂದೆ ನೀರಿನಿಂದ ಹೊರ ಬಂದು ದೇಗುಲ ಪ್ರವೇಶಿಸಿದ್ದ ಬಬಿಯಾ,‌ ಮೊದಲ ಬಾರಿಗೆ ದೇಗುಲದ ಆವರಣಕ್ಕೆ ಬಂದಿದ್ದು ಭಕ್ತರ ಅಚ್ಚರಿಗೆ ಕಾರಣವಾಗಿತ್ತು.

ಕೇರಳ(Kerala)ದ ಕಾಸರಗೋಡು ಜಿಲ್ಲೆಯ ಕುಂಬಳೆಯ ಅನಂತಪುರ ಎನ್ನುವ ವಿಶಾಲವಾದ ಪ್ರದೇಶದಲ್ಲಿ ಕೆರೆ ಮಧ್ಯೆ ಇರುವ ದೇವಸ್ಥಾನ ಅನಂತಪುರ ತುಳುನಾಡಿ(Tulunadu)ನ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದು. ಇದನ್ನು ಜನರು ಸರೋವರ ಕ್ಷೇತ್ರ ಅನಂತಪುರ(Anantapura) ಎಂದೂ ಕರೆಯುತ್ತಾರೆ. ಇಲ್ಲಿ 5 ಹೆಡೆ ಸರ್ಪದ ಮೇಲೆ ಕುಳಿತ ಅನಂತಪದ್ಮನಾಭ ಸ್ವಾಮಿ ಮೂರ್ತಿ ಇದೆ. ಈ ಕ್ಷೇತ್ರದ ಇನ್ನೊಂದು ವೈಶಿಷ್ಟ್ಯವಾಗಿದ್ದಿದ್ದು ಕೆರೆಯಲ್ಲಿದ್ದ ಬಬಿಯ ಎನ್ನುವ ಮೊಸಳೆ. 

ಕರೆದರೆ ಸಾಕು ಪ್ರಸಾದ ತಿಂದು ಹೋಗೋ ಮೊಸಳೆ!

ಮೊಸಳೆ ಮಾಂಸಹಾರಿಯಾದರೂ, ಇಲ್ಲಿರುವ ಬಬಿಯ ಸಸ್ಯಹಾರಿ ಎನ್ನುವುದು ವಿಶೇಷ. ಹಿಂದೆ ಬ್ರಿಟಿಷರು ಈ ಜಾಗದಲ್ಲಿ ಟೆಂಟ್ ಹಾಕಿದ್ದಾಗ ಕೆರೆಯಲ್ಲಿ ಮೊಸಳೆಯನ್ನು ಕೊಲ್ಲಲು ಸಂಚು ರೂಪಿಸಿದ್ದರು. ಬಬಿಯಾ ಎಂದು ಕರೆದಾಗ ಮೊಸಳೆ ಹೊರ ಬಂದಿತ್ತು. ಆಗ ಗುಂಡು ಹಾರಿಸಿ, ಮೊಸಳೆಯನ್ನು ಕೊಂದಿದ್ದರು. ಆ ಮೊಸಳೆ ಕೊಂದ ಬ್ರಿಟಿಷ್ ಅಧಿಕಾರಿ ಸ್ವಲ್ಪ ದಿವಸಗಳಲ್ಲಿಯೇ ವಿಷ ಹಾವು ಕಚ್ಚಿ ಅಸುನೀಗಿದ ಎಂದು ಹೇಳಲಾಗಿದೆ. 

Crocodile Park: ದಾಂಡೇಲಿಯಲ್ಲಿ ರಾಜ್ಯದ ಮೊದಲ ಮೊಸಳೆ ಪಾರ್ಕ್

ಅಚ್ಚರಿ ಎಂಬಂತೆ ಆ ಕೆರೆಯಲ್ಲಿ ಮತ್ತೊಂದು ಮೊಸಳೆ ಕಾಣಿಸಿಕೊಳ್ಳುತ್ತದೆ. ಅದಕ್ಕೆ ಅಲ್ಲಿಯ ಪೂಜಾರಿ ಬಬಿಯಾ ಎಂಬ ಹೆಸರಿನಿಂದ ಕರೆಯುತ್ತಾರೆ. ಆ ಮೊಸಳೆಗೆ ಪ್ರತಿದಿನ ಮಧ್ಯಾಹ್ನ ಮಹಾಪೂಜೆ ಆದ್ಮೇಲೆ ನೈವೇದ್ಯ ಕೊಡುವ ಸಮಯಕ್ಕೆ ಬಬಿಯಾ ಎಂದು ಕರೆಯುತ್ತಾರೆ. ಆಗ ಸುರಂಗದಿಂದ ಹೊರಗೆ ಬಂದು ನೈವೇದ್ಯ ಸ್ವೀಕರಿಸುತ್ತಿತ್ತು ಈ ಮೊಸಳೆ. ಮೊಸಳೆಗೆ ಜನರು ಹರಕೆ ರೂಪದಲ್ಲಿಯೂ ನೈವೇದ್ಯ ಸಮರ್ಪಿಸುವ ಪದ್ಧತಿ ಇಲ್ಲಿದೆ. ಮೊಸಳೆ ಮಾಂಸಹಾರಿಯಾದರೂ, ಈ ಬಬಿಯಾ ಯಾರಿಗೂ ತೊಂದರೆಯೇ ಕೊಡುವುದಿಲ್ಲ. ಕೆರೆಯಲ್ಲಿರುವ ಮೀನುಗಳನ್ನೂ ಈ ಮೊಸಳೆ ತಿಂದಿದ್ದೇ ಇಲ್ಲ. ಅದರೆ ಇದೀಗ ಬಬಿಯಾ ಇಹಲೋಕ ತ್ಯಜಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬೀದಿ ನಾಯಿಗಳಿಗೆ ಪ್ರತಿನಿತ್ಯ 2 ಬಾರಿ ಚಿಕನ್‌ ರೈಸ್‌ !
ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!