ಚಿಕ್ಕಮಗಳೂರು: ಮತ್ತೆ ಹಸುವಿನ ಕೆಚ್ಚಲು ಕತ್ತರಿಸಿದ ಕ್ರೂರಿಗಳು!

Published : May 13, 2025, 08:45 AM IST
ಚಿಕ್ಕಮಗಳೂರು: ಮತ್ತೆ ಹಸುವಿನ ಕೆಚ್ಚಲು ಕತ್ತರಿಸಿದ ಕ್ರೂರಿಗಳು!

ಸಾರಾಂಶ

 ತಾಲೂಕಿನ ಗಡಿ ಗ್ರಾಮವಾದ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಕಡೂರು (ಮೇ.13) ತಾಲೂಕಿನ ಗಡಿ ಗ್ರಾಮವಾದ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬುವರಿಗೆ ಸೇರಿದ ಸುಮಾರು 20 ದನಗಳನ್ನು ಕಳ್ಳರು ತಂತಿ ಬೇಲಿಯೊಳಗೆ ಹಿಡಿದು ಕೂಡಿ ಹಾಕಿ ಬೇರೆಡೆಗೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆ ಪ್ರಯತ್ನ ವಿಫಲಗೊಂಡಿದ್ದರಿಂದ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಬಳಿಕ ಈ ಹಸು ಸತ್ತಿದ್ದು ಈ ಕೃತ್ಯವನ್ನು ಗ್ರಾಮಸ್ಥರು ಖಂಡಿಸುವ ಮೂಲಕ ರೈತರು ಯಗಟಿ ಠಾಣೆಗೆ ದೂರು ನೀಡಿದ್ದಾರೆ.

ಬಳಿಕ ಬೀರೂರು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್, ಯಗಟಿ ಪಿಎಸ್‍ಐ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ರಾಸುಗಳ ಅಪಹರಣ: ಇತ್ತೀಚೆಗೆ ಚೌಳಹಿರಿಯೂರು ಭಾಗದಲ್ಲಿ ದನಗಳ್ಳರ ಹಾವಳಿ ಹೆಚ್ಚಾಗಿದೆ. ಕೊಟ್ಟಿಗೆಯೊಳಗೆ ಹಾಗೂ ಮನೆ ಮುಂಭಾಗದಲ್ಲಿ ಕಟ್ಟಿದ ದನಗಳನ್ನು ರಾತ್ರೋ ರಾತ್ರಿ ಅಪಹರಿಸುತ್ತಿರುವ ಪ್ರಕರಣಗಳು ನಡೆದಿವೆ.

ಇದನ್ನೂ ಓದಿ:  ಹಸುವಿನ ಕೆಚ್ಚಲು ಕತ್ತರಿಸುವ ರಾಕ್ಷಸರ ನಡುವೆ, ಕರುವಿನ ಮೊದಲ ವರ್ಷದ ಹುಟ್ಟುಹಬ್ಬ ಮಾಡಿದ ಬಾಗಲಕೋಟೆಯ ರೈತ!

ವೇದಾವತಿ ನದಿ ದಡದಲ್ಲಿ ಮೇಯುವ ದನಗಳನ್ನು ಹಿಡಿದು ಸಾಗಿಸಿದ ನಿದರ್ಶನಗಳೂ ಇವೆ. ಈವರೆಗೆ ಸುಮಾರು 50 ರಿಂದ 60 ರಾಸುಗಳ ಅಪಹರಣ ನಡೆದಿದೆ ಎಂದು ಗ್ರಾಮಸ್ಥರು ದೂರಿದರು.12ಕೆಕೆಡಿಯು2.ಕಡೂರು ತಾಲೂಕು ಚೌಳಹಿರಿಯೂರು ಗ್ರಾಮದ ಸಮೀಪದ ರೈತರ ಹಸುವಿನ ಕೆಚ್ಚಲು ಕತ್ತರಿಸಿರುವುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ