ಧಾರವಾಡದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಮನೆಗೆ ಕಲ್ಲೆಸೆದು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ

Published : Apr 15, 2026, 11:05 AM IST
bike set fire by culprit

ಸಾರಾಂಶ

ಧಾರವಾಡದ ಮೆಹಬೂಬ್ ನಗರದಲ್ಲಿ ದುಷ್ಕರ್ಮಿಗಳು ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿ, ಹೊರಗೆ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.

ಮನೆಗೆ ಕಲ್ಲೆಸೆದು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಧಾರವಾಡ: ಮನೆಯ ಮೇಲೆ ಕಲ್ಲು ತೂರಾಟ ನಡೆಸಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ ಘಟನೆ ಧಾರವಾಡದ ಮೆಹಬೂಬ್ ನಗರದಲ್ಲಿ ನಡೆದಿದೆ. ದುಷ್ಕರ್ಮಿಗಳ ಕೃತ್ಯದಿಂದ ಎರಡು ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಸಾಧಿಕ್ ಶೇರೆವಾಡ ಎಂಬುವವರ ಮನೆಯ ಮುಂದೆ ಈ ಘಟನೆ ನಡೆದಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳು ಸುಟ್ಟು ಭಸ್ಮವಾಗಿದೆ. ದುಷ್ಕರ್ಮಿಗಳು ಮೊದಲು ಮನೆಗೆ ಕಲ್ಲು ತೂರಾಟ ಮಾಡಿ ನಂತರ ಬೈಕ್ ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಏಳೆಂಟು ಜನ ದುಷ್ಕರ್ಮಿಗಳು ಜೊತೆ ಸೇರಿ ಈ ಕೃತ್ಯ ನಡೆಸಿರುವ ಶಂಕೆ ಇದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ಎಸಿಪಿ ಸಿದ್ದನಗೌಡರ, ಇನ್ಸ್ಪೆಕ್ಟರ್ ಪ್ರಭು ಗಂಗೆನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮನೆ ಸುತ್ತಮುತ್ತಲ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡುತ್ತಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಕೃತ್ಯಕ್ಕೆ ಕಾರಣ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.

ಇದನ್ನೂ ಓದಿ: ವಿದ್ಯಾರಣ್ಯಪುರದ ಇಬ್ಬರು ವಿದ್ಯಾರ್ಥಿನಿಯರ ನಿಗೂಢ ನಾಪತ್ತೆ: 75 ದಿನ ಕಳೆದರೂ ಸಿಗದ ಸುಳಿವು, ಕಂಗಾಲಾದ ಪೋಷಕರು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಫೋನ್ ಇಲ್ಲ, ಎಟಿಎಂ ಬಳಸುತ್ತಿಲ್ಲ: 100ಕ್ಕೂ ಹೆಚ್ಚು ನಗರಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ತನಿಷ್ಕಾ-ತೇಜಸ್ವಿನಿ
₹7.50 ಲಕ್ಷ ಮೌಲ್ಯದ ₹2000 ಖೋಟಾ ನೋಟು ಬದಲಿಸಿಕೊಳ್ಳಲು ಬೆಂಗಳೂರಿನ RBIಗೆ ಬಂದ; ಮುಂದೇನಾಯ್ತು?