ಬೆಂಗಳೂರು: ತಮಿಳುನಾಡು ನಾಲ್ಕುಬಸ್‌ಗಳ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು!

Published : Sep 13, 2023, 05:48 AM IST
ಬೆಂಗಳೂರು: ತಮಿಳುನಾಡು ನಾಲ್ಕುಬಸ್‌ಗಳ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು!

ಸಾರಾಂಶ

ಬಾಗಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ(ಕೆ.ಆರ್‌.ಮಾರ್ಕೆಟ್‌ ಫ್ಲೈ ಓವರ್‌) ಡೌನ್‌ ರ್‍ಯಾಂಪ್‌ ಮೇಲೆ ಕಿಡಿಗೇಡಿಗಳು ತಮಿಳುನಾಡು ಸಾರಿಗೆ ಸಂಸ್ಥೆಯ ನಾಲ್ಕು ಬಸ್‌ಗಳ ಮೇಲೆ ಕಲ್ಲು ತೂರಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ.

ಬೆಂಗಳೂರು (ಸೆ.13) :  ಬಾಗಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ(ಕೆ.ಆರ್‌.ಮಾರ್ಕೆಟ್‌ ಫ್ಲೈ ಓವರ್‌) ಡೌನ್‌ ರ್‍ಯಾಂಪ್‌ ಮೇಲೆ ಕಿಡಿಗೇಡಿಗಳು ತಮಿಳುನಾಡು ಸಾರಿಗೆ ಸಂಸ್ಥೆಯ ನಾಲ್ಕು ಬಸ್‌ಗಳ ಮೇಲೆ ಕಲ್ಲು ತೂರಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ.

ಘಟನೆಯಲ್ಲಿ ತಮಿಳುನಾಡು ಸಾರಿಗೆಯ ನಾಲ್ಕು ಬಸ್‌ಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಯಾಣಿಕರಿಗೂ ತೊಂದರೆಯಾಗಿಲ್ಲ. ಈ ಸಂಬಂಧ ಬಸ್‌ಗಳ ಚಾಲಕರು ನೀಡಿದ ದೂರಿನ ಮೇರೆಗೆ ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಕೆಲಸದ ಕೊನೆ ದಿನ ಭಾವುಕರಾಗಿ ಬಸ್‌ನ್ನು ತಬ್ಬಿ ಮುತ್ತಿಕ್ಕಿದ ಚಾಲಕ: ವಿಡಿಯೋ ವೈರಲ್

ಸೋಮವಾರ ಮುಂಜಾನೆ 2.45ರ ಸುಮಾರಿಗೆ ಕೆ.ಆರ್‌.ಮಾರ್ಕೆಟ್‌ ಕಡೆಯಿಂದ ಮೇಲ್ಸೇತುವೆಯಲ್ಲಿ ಮೈಸೂರು ರಸ್ತೆಯ ಸ್ಯಾಟಲೆಟ್‌ ಬಸ್‌ ನಿಲ್ದಾಣಕ್ಕೆ ತಮಿಳುನಾಡು ಸಾರಿಗೆ ಬಸ್‌ಗಳು ಹೋಗುತ್ತಿದ್ದವು. ಈ ವೇಳೆ ಎದುರಿನಿಂದ ದ್ವಿಚಕ್ರ ವಾಹನದಲ್ಲಿ ಬಂದಿರುವ ಇಬ್ಬರು ದುಷ್ಕರ್ಮಿಗಳು ನಾಲ್ಕು ಬಸ್‌ಗಳ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಒಂದು ಬಸ್‌ನ ಕಿಟಕಿ ಗಾಜು, ಕನ್ನಡಿ ಸೇರಿದಂತೆ ಸಣ್ಣಪುಟ್ಟ ಹಾನಿಯಾಗಿದೆ.

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು, ರಾಜ್ಯಕ್ಕೆ ತೀವ್ರ ಹಿನ್ನಡೆ ಬೆನ್ನಲ್ಲೇ ಸಿಎಂ ಸಿದ್ದು ತುರ್ತು ಸಭೆ!

ಇದು ಕಾವೇರಿ ನೀರಿನ ವಿಚಾರವಾಗಿ ನಡೆದ ಘಟನೆಯಲ್ಲ. ಸೋಮವಾರ ಖಾಸಗಿ ವಾಹನಗಳ ಸಂಘಟನೆಗಳ ಒಕ್ಕೂಟ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ತಮಿಳುನಾಡು ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಿರುವ ಸಾಧ್ಯತೆಯಿದೆ. ದುಷ್ಕರ್ಮಿಗಳ ಬಂಧನದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ