ಕಂಠಿ ಬಸವೇಶ್ವರ ದೇವಸ್ಥಾನದ ನಂದಿಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳು

Published : Oct 17, 2023, 01:01 PM IST
ಕಂಠಿ ಬಸವೇಶ್ವರ ದೇವಸ್ಥಾನದ ನಂದಿಮೂರ್ತಿ ಭಗ್ನಗೊಳಿಸಿದ ದುಷ್ಕರ್ಮಿಗಳು

ಸಾರಾಂಶ

ದೇವಸ್ತಾನವೊಂದರ ನಂದಿ ಮೂರ್ತಿಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಶಹಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಡೆದಿದೆ. 

ಕಲಬುರಗಿ (ಅ.17): ದೇವಸ್ತಾನವೊಂದರ ನಂದಿ ಮೂರ್ತಿಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಶಹಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಡೆದಿದೆ. 

ಮುತ್ತಗಾ ಗ್ರಾಮದ ಹೊರವಲಯದಲ್ಲಿರುವ ಕಂಠಿ ಬಸವೇಶ್ವರ ದೇವಾಲಯ. ದೇವಸ್ಥಾನದೊಳಗೆ ನಂದಿ ಮೂರ್ತಿ ಇದೆ. ಭಕ್ತರು ದಿನನಿತ್ಯ ಪೂಜೆ ಸಲ್ಲಿಸುತ್ತಾರೆ.  ಆದರೆ ನಿನ್ನೆ ರಾತ್ರಿವೇಳೆ ದೇವಸ್ತಾನದೊಳಗೆ ನುಗ್ಗಿ ನಂದಿ ಮೂರ್ತಿ ವಿರೂಪಗೊಳಿಸಿದ್ದಾರೆ. ಅಲ್ಲದೇ ದೇವರ ಮೂರ್ತಿಗಳನ್ನು ಗರ್ಭಗುಡಿಯಿಂದ ಕಿತ್ತು ಹೊರಗಡೆ ಬಿಸಾಡಿರುವ ಕಿಡಿಗೇಡಿಗಳು.

 

ಕಿಡಿಗೇಡಿಗಳಿಂದ ದೇವರ ಮೂರ್ತಿ ಧ್ವಂಸ: ಭಜರಂಗದಳ, ಹಿಂದೂ ಕಾರ್ಯಕರ್ತರ ಆಕ್ರೋಶ

ಎಂದಿನಂತೆ ಇಂದು ಮುಂಜಾನೆ ದೇವರ ಪೂಜೆಗೆ ಹೋಗಿರುವ ಗ್ರಾಮಸ್ಥರು. ಪೂಜೆಗೆ ಹೋಗಿದ್ದ ವೇಳೆ ದೇವಾಲಯದೊಳಗೆ ನಂದಿಮೂರ್ತಿ ವಿರೂಪಗೊಳಿಸಿರುವ ಕೃತ್ಯ ಬಯಲಾಗಿದೆ. ಘಟನೆ ತಿಳಿದು ದೇವಾಲಯ ಸುತ್ತ ಜಮಾಯಿಸಿದ ಭಕ್ತರು. ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.

ದೇವಸ್ಥಾನ ದೇವರ ಮೂರ್ತಿಗಳನ್ನು ಭಗ್ನಗೊಳಿಸುವ ಕೃತ್ಯಗಳು ಪದೇಪದೆ ಮರುಕಳಿಸುತ್ತಿದ್ದು, ಇಂಥ ಕೃತ್ಯಗಳ ಜರುಗದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕಿದೆ. ಬಹಳಷ್ಟು ದೇವಾಲಯಗಳು ಹೊರವಲಯದಲ್ಲಿರುವುದು, ಸಿಸಿಟಿವಿ ಅಳವಡಿಸದೇ ಇರುವುದು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಹಿನ್ನಡೆಯಾಗುತ್ತದೆ ಹೀಗಾಗಿ ದೇವಸ್ಥಾನದೊಳಗೆ ಸಿಸಿಟಿವಿ ಅಳವಡಿಸಬೇಕು. ಇದು ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಪೊಲೀಸರಿಗೆ ಸಹಾಯಕ್ಕೆ ಬರುತ್ತದೆ. 

ಇದೆಂಥಾ ದಾರ್ಷ್ಟ್ಯ? ಕೇದಾರನಾಥನ ಮೇಲೆ ಹಣ ಊದಿದ ಮಹಿಳೆ; ಎಫ್ಐಆರ್ ದಾಖಲು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್