'ಕೇಸಲ್ಲಿ ಜಾರಕಿಹೊಳಿಯೇ ಸಂತ್ರಸ್ತ: ಎಸ್‌ಐಟಿ ದಿಕ್ಕುತಪ್ಪಿಸಲು ಸೀಡಿ ಟೀಂ ಯತ್ನ'

Published : Apr 05, 2021, 09:50 AM ISTUpdated : Apr 05, 2021, 11:05 AM IST
'ಕೇಸಲ್ಲಿ ಜಾರಕಿಹೊಳಿಯೇ ಸಂತ್ರಸ್ತ: ಎಸ್‌ಐಟಿ ದಿಕ್ಕುತಪ್ಪಿಸಲು ಸೀಡಿ ಟೀಂ ಯತ್ನ'

ಸಾರಾಂಶ

ಎಸ್‌ಐಟಿ ದಿಕ್ಕುತಪ್ಪಿಸಲು ಸೀಡಿ ಟೀಂ ಯತ್ನ| ಕೇಸಲ್ಲಿ ಜಾರಕಿಹೊಳಿಯೇ ಸಂತ್ರಸ್ತ| ಕಿಡಿಕಾರಿದ ವಕೀಲ ಶ್ಯಾಮ ಸುಂದರ್‌

ಬೆಂಗಳೂರು(ಏ.05): ಸಿ.ಡಿ. ಪ್ರಕರಣದಲ್ಲಿ ಸಂಘಟಿತ ಅಪರಾಧ ಕೃತ್ಯವೆಸಗಿ ಸುಳ್ಳು ದೂರು ದಾಖಲಿಸಿರುವ ತಪ್ಪಿತಸ್ಥರು ವಿಶೇಷ ತನಿಖಾ ದಳ (ಎಸ್‌ಐಟಿ)ದ ಮೇಲೆ ಅನಗತ್ಯ ಒತ್ತಡ ಸೃಷ್ಟಿಸಿ ತನಿಖೆಯ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಪರ ವಕೀಲ ಎಂ.ಎಸ್‌. ಶ್ಯಾಮಸುಂದರ್‌ ಕಿಡಿಕಾರಿದ್ದಾರೆ.

ನನ್ನ ಕಕ್ಷಿದಾರರ ವಿರುದ್ಧ ಸುಳ್ಳು ದೂರು ದಾಖಲಿಸಿರುವ ಆರೋಪಿಗಳು, ತಾವು ಮಾಡಿರುವ ಅಪರಾಧ ಕೃತ್ಯದಿಂದ ಪಾರಾಗಲು ತನಿಖಾಧಿಕಾರಿಗಳ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.

"

ಪ್ರಕರಣದ ಸಂತ್ರಸ್ತೆ ಎನ್ನಲಾದ ಯುವತಿಯು ಆರೋಪಿಯನ್ನು ನಾಲ್ಕು ಗಂಟೆ ವಿಚಾರಣೆ ನಡೆಸಿ, ತನ್ನನ್ನು ಮೂರು ದಿನಗಳಿಂದ ವಿಚಾರಣೆ ನಡೆಸಲಾಗುತ್ತಿದೆ. ತಾನು ಸಂತ್ರಸ್ತೆಯೋ ಅಥವಾ ಪ್ರಕರಣದ ಆರೋಪಿಯೋ ಎಂಬ ಅನುಮಾನ ಮೂಡುತ್ತಿದೆ ಎಂದು ವಿಶೇಷ ತನಿಖಾ ದಳದ ತನಿಖೆ ಬಗ್ಗೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದ್ದು, ವಿಶೇಷ ತನಿಖಾ ದಳದ ಕಾರ್ಯವೈಖರಿಯನ್ನೇ ಪ್ರಶ್ನಿಸಿದ್ದಾರೆ ಎಂದು ತಿಳಿಸಿದ್ದಾರೆ.

ದೂರುದಾರರು ತಾವು ಮಾಡಿರುವ ಸಂಘಟಿತ ಅಪರಾಧಕ್ಕೆ ತಮ್ಮ ಮೇಲೆ ಆಗಬಹುದಾದ ಶಿಕ್ಷೆಯಿಂದ ಪಾರಾಗಲು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಸಮಾಜದಲ್ಲಿ ಘನತೆಯುಳ್ಳ ವ್ಯಕ್ತಿಯ ಸುಲಿಗೆ, ತೇಜೋವಧೆಗೆ ಯತ್ನಿಸಿದ ತಂಡವು ಇದೀಗ ತನಿಖೆಯ ದಾರಿ ತಪ್ಪಿಸಲು ಸುಳ್ಳು ದೂರುಗಳನ್ನು ನೀಡುತ್ತಿದೆ. ನನ್ನ ಕಕ್ಷಿದಾರ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳು ಸುಳ್ಳು. ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿ ಅವರೇ ನಿಜವಾದ ಸಂತ್ರಸ್ತರು. ಸಂಘಟಿತ ಅಪರಾಧ ಹಾಗೂ ನಕಲಿ ದೃಶ್ಯಾವಳಿಗಳನ್ನು ಬಳಸಿ ತಮ್ಮ ವೈಯಕ್ತಿಕ ಹಿತಾಸಕ್ತಿಗಳು ಹಾಗೂ ಏಕಾಏಕಿ ಬೆಳೆಯಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ಶ್ಯಾಮಸುಂದರ್‌ ಪ್ರಕಟಣೆ ಮೂಲಕ ಆಪಾದಿಸಿದ್ದಾರೆ.

ಇದೀಗ ತನಿಖೆ ಪ್ರಗತಿಯಲ್ಲಿದ್ದಾಗ ತನಿಖಾಧಿಕಾರಿಗಳು ಹಾಗೂ ವಿಶೇಷ ತನಿಖಾ ದಳದ ಮೇಲೆ ಅನಗತ್ಯ ಒತ್ತಡ ಹೇರಲು ಮತ್ತು ತನಿಖೆಯನ್ನು ತಪ್ಪು ದಾರಿಗೆ ಎಳೆಯಲು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇಂತಹ ಕೃತ್ಯಗಳು ಖಂಡನೀಯ. ಸುಳ್ಳು ದೂರು ದಾಖಲಾಗಲು ಕಾರಣವಾದ ಎಲ್ಲರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮಾತ್ರವಲ್ಲ ತನಿಖೆಯಲ್ಲಿ ದಿಕ್ಕು ತಪ್ಪಿಸಲು ಯತ್ನಿಸುವವರಿಗೆ ಶಿಕ್ಷೆಯಾಗುವ ಭರವಸೆ ಇದೆ ಎಂದಿದ್ದಾರೆ.

ಪ್ರಕರಣ ತನಿಖೆಯ ಹಂತದಲ್ಲಿದ್ದಾಗ ಕಾನೂನು ಮತ್ತು ನ್ಯಾಯಾಲಯ ಪ್ರಕ್ರಿಯೆಯನ್ನು ದಿಕ್ಕು ತಪ್ಪಿಸಲು ಇಂತಹ ಕೀಳು ತಂತ್ರ ಹೂಡುವುದು ಖಂಡನೀಯ. ಸುಳ್ಳು ಸೂರು ದಾಖಲಿಸಿದವರು ಹಾಗೂ ಕಾನೂನಿನ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಮಾಡಿದವರ ವಿರುದ್ಧ ಮತ್ತಷ್ಟುಕಠಿಣ ಕಾನೂನು ಕ್ರಮ ಜರುಗಿಸಲು ಅಗತ್ಯ ಪ್ರಕ್ರಿಯೆ ನಡೆಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!