ಹಳಿಯಲ್ಲಿ ಮರ, ಕಬ್ಬಿಣದ ಪಟ್ಟಿ: ಮೈಸೂರು ಬಳಿ ತಪ್ಪಿದ ದುರಂತ

Published : Nov 16, 2023, 04:18 AM ISTUpdated : Nov 16, 2023, 01:09 PM IST
ಹಳಿಯಲ್ಲಿ ಮರ, ಕಬ್ಬಿಣದ ಪಟ್ಟಿ: ಮೈಸೂರು ಬಳಿ ತಪ್ಪಿದ ದುರಂತ

ಸಾರಾಂಶ

ನ.12ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಸೋಮಯ್ ಮರಾಂಡಿ, ಭಜನು ಮುರ್ಮು ಮತ್ತು ದಸಮತ್ ಮರಾಂಡಿ ಎಂಬುವರನ್ನು ಬಂಧಿಸಲಾಗಿದೆ. ಈ ಮೂವರು ಉದ್ದೇಶಪೂರ್ವಕವಾಗಿ ಹಳಿಗಳ ಮೇಲೆ ಕಬ್ಬಿಣದ ಸ್ಲೀಪರ್ (ಪಟ್ಟಿ) ಮತ್ತು ಮರದ ದಿಮ್ಮಿಗಳನ್ನು ದುರುದ್ದೇಶದಿಂದ ಇರಿಸಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.

ಮೈಸೂರು(ನ.16):  ನಂಜನಗೂಡು-ಕಡಕೊಳ ನಡುವೆ ರೈಲು ಹಳಿಗೆ ಅಡ್ಡಲಾಗಿ ಮರದ ದಿಮ್ಮಿ, ಕಬ್ಬಿಣದ ಪಟ್ಟಿಗಳನ್ನು ಇರಿಸಿ ರೈಲು ಹಳಿ ತಪ್ಪುವಂತೆ ರೂಪಿಸಿದ್ದ ವಿಧ್ವಂಸಕ ಸಂಚೊಂದು ಲೋಕೋ ಪೈಲಟ್‌ ಸಮಯ ಪ್ರಜ್ಞೆಯಿಂದ ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಒಡಿಶಾ ಮೂಲದ ಮೂವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.

ನ.12ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಸೋಮಯ್ ಮರಾಂಡಿ, ಭಜನು ಮುರ್ಮು ಮತ್ತು ದಸಮತ್ ಮರಾಂಡಿ ಎಂಬುವರನ್ನು ಬಂಧಿಸಲಾಗಿದೆ. ಈ ಮೂವರು ಉದ್ದೇಶಪೂರ್ವಕವಾಗಿ ಹಳಿಗಳ ಮೇಲೆ ಕಬ್ಬಿಣದ ಸ್ಲೀಪರ್ (ಪಟ್ಟಿ) ಮತ್ತು ಮರದ ದಿಮ್ಮಿಗಳನ್ನು ದುರುದ್ದೇಶದಿಂದ ಇರಿಸಿದ್ದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.

ನಂಜನಗೂಡು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

ಚಾಮರಾಜನಗರದಿಂದ ಮೈಸೂರಿಗೆ ಎಕ್ಸ್‌ಪ್ರೆಸ್‌ ರೈಲು(ಸಂಖ್ಯೆ-06275) ಬರುತ್ತಿದ್ದಾಗ ಹಳಿಗಳಿಗೆ ಅಡ್ಡಲಾಗಿ ಮರದ ದಿಮ್ಮಿಗಳನ್ನಿಟ್ಟಿರುವುದನ್ನು ದೂರದಿಂದಲೇ ಗಮನಿಸಿದ ಲೋಕೋ ಪೈಲಟ್‌ ತಕ್ಷಣ ರೈಲು ನಿಲ್ಲಿಸಿದ್ದಾರೆ. ನಂತರ ತಕ್ಷಣ ಅಧಿಕಾರಿಗಳಿಗೆ ಈ ಕುರಿತು ಮಾಹಿತಿ ರವಾನಿಸಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ರೈಲ್ವೆ ಸಂರಕ್ಷಣಾ ದಳದ ಸಹಾಯಕ ರಕ್ಷಣಾ ಆಯುಕ್ತ ಎಂ.ಎನ್.ಎ. ಖಾನ್, ಪೋಸ್ಟ್ ಕಮಾಂಡರ್ ಕೆ.ವಿ.ವೆಂಕಟೇಶ್‌ ಮತ್ತು ಅವರ ತಂಡ, ಆರ್‌ಪಿಎಫ್‌ನ ಶ್ವಾನ ದಳ ಘಟನಾ ಸ್ಥಳಕ್ಕೆ ಕ್ಷಿಪ್ರವಾಗಿ ತೆರಳಿ ಸ್ಪಂದಿಸಿದೆ. ಈ ವೇಳೆ ಒಡಿಶಾದ ಮಯೂರ್ ಗಂಜ್‌ನ ಸೋಮಯ್ ಮರಾಂಡಿ ಎಂಬಾತ ಸ್ಥಳದಲ್ಲಿ ಪತ್ತೆಯಾಗಿದ್ದು, ವಿಚಾರಣೆ ನಡೆಸಿದಾಗ ತನ್ನ ಸಹಚರರೊಂದಿಗೆ ಈ ಕೃತ್ಯ ಎಸಗಿದ್ದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಮೈಸೂರಿನ ಸರ್ಕಾರಿ ರೈಲ್ವೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಎಕ್ಸ್‌ಪ್ರೆಸ್‌ ರೈಲು ಸಂಚಾರ ಕೆಲ ನಿಮಿಷಗಳ ಕಾಲ ವ್ಯತ್ಯಯಗೊಂಡಿದೆ.

ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್ ಅವರು ರೈಲಿನ ಚಾಲಕನ ಸಮಯೋಚಿತ ಕ್ರಮ ಮತ್ತು ಭದ್ರತಾ ಪಡೆಗಳ ತ್ವರಿತ ಪ್ರತಿಕ್ರಿಯೆ ಶ್ಲಾಘಿಸಿ, ಪ್ರಯಾಣಿಕರ ಯೋಗಕ್ಷೇಮ ವಿಚಾರಿಸಿ, ಕೃತಜ್ಞತೆ ಸಲ್ಲಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ