ಮಾನ್ವಿ: ಎಸ್‌ಸಿ ಮೀಸಲು ಹಣ ದುರುಪಯೋಗ ಆರೋಪ, ಅಧಿಕಾರಿಗಳ ವಿರುದ್ಡ ಬಿಜೆಪಿ ಕಾರ್ಯಕರ್ತರು ಜಟಾಪಟಿ !

Published : Nov 19, 2024, 01:21 PM ISTUpdated : Nov 19, 2024, 01:24 PM IST
ಮಾನ್ವಿ: ಎಸ್‌ಸಿ ಮೀಸಲು ಹಣ ದುರುಪಯೋಗ ಆರೋಪ, ಅಧಿಕಾರಿಗಳ ವಿರುದ್ಡ ಬಿಜೆಪಿ ಕಾರ್ಯಕರ್ತರು ಜಟಾಪಟಿ !

ಸಾರಾಂಶ

ರಸ್ತೆ ಕಾಮಗಾರಿಯಲ್ಲಿ ಎಸ್‌ಸಿ ಸಮುದಾಯದ ಮೀಸಲು ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ ಸಂಬಂಧ ಬಿಜೆಪಿ ಕಾರ್ಯಕರ್ತರು ಅಧಿಕಾರಿಗಳು, ಗುತ್ತಿಗೆದಾರರ ನಡುವೆ ಜಟಾಪಟಿ ನಡೆದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಬಸವ ವೃತ್ತದ ಬಳಿ ನಡೆದಿದೆ.

ರಾಯಚೂರು (ನ.19): ರಸ್ತೆ ಕಾಮಗಾರಿಯಲ್ಲಿ ಎಸ್‌ಸಿ ಸಮುದಾಯದ ಮೀಸಲು ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ ಸಂಬಂಧ ಬಿಜೆಪಿ ಕಾರ್ಯಕರ್ತರು ಅಧಿಕಾರಿಗಳು, ಗುತ್ತಿಗೆದಾರರ ನಡುವೆ ಜಟಾಪಟಿ ನಡೆದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಬಸವ ವೃತ್ತದ ಬಳಿ ನಡೆದಿದೆ.

ಮಾನ್ವಿ ಪಟ್ಟಣದ ಬಸವೇಶ್ವರ ವೃತ್ತದಿಂದ ಪುರಸಭೆ ಕಾರ್ಯಾಲಯದವರೆಗೆ ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಸಿ.ಸಿ. ರಸ್ತೆ ಕಾಮಗಾರಿ ನಡೆದಿದೆ. ಆದರೆ ಈ ಅನುದಾನ ಎಸ್‌ಸಿ ಸಮುದಾಯಕ್ಕೆ ಮೀಸಲಾಗಿದ್ದು ಇದನ್ನುಅಧಿಕಾರ ದುರುಪಯೋಗ ಮಾಡಿಕೊಂಡು ಬೇರೆಯವರಿಗೆ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಮಾನ್ವಿ ಪಟ್ಟಣ ಬಿಜೆಪಿ ಘಟಕದ ಕಾರ್ಯಕರ್ತರು ಹಿಂದೆಯೇ ದೂರು ನೀಡಿದ್ದರೂ  PWD ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ನಿನ್ನೆ ರಾತ್ರಿ ಕಾಮಗಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಸ್ಥಳದಲ್ಲಿ ಎರಡು ಗುಂಪುಗಳಿಂದ ಮಾತಿನ ಚಕಮಕಿ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಘಟನೆ ಮಾಹಿತಿ ಸ್ಥಳಕ್ಕೆ ಬಂದ ಮಾನ್ವಿ ಇನ್ಸ್ ಪೆಕ್ಟರ್ ವೀರಭದ್ರಯ್ಯ ಹಿರೇಮಠ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದ್ದಾರೆ. ಆದರೆ ಪಟ್ಟು ಬಿಡದ ಬಿಜೆಪಿ ಕಾರ್ಯಕರ್ತರು.

ಎಸ್‌ಸಿಗೆ ಮೀಸಲಾದ ಹಣ ಬೇರೆಯವರು ಹೇಗೆ ಮಾಡಿದ್ದು ಕಾಮಗಾರಿ ನಡೆಯಲು ಬಿಡುವುದಿಲ್ಲ ಎಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ತಡರಾತ್ರಿವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಯಿತು. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!