ಅದು ಇಂಡಿಯಾ ಅಲೈಯನ್ಸ್ ಅಲ್ಲ, ಮೊಂಡ್ ಅಲೈಯನ್ಸ್: ಯತ್ನಾಳ್

Published : Oct 07, 2023, 08:04 PM ISTUpdated : Oct 07, 2023, 08:05 PM IST
ಅದು ಇಂಡಿಯಾ ಅಲೈಯನ್ಸ್ ಅಲ್ಲ,  ಮೊಂಡ್ ಅಲೈಯನ್ಸ್: ಯತ್ನಾಳ್

ಸಾರಾಂಶ

ಗಣಪತಿ ಹಬ್ಬ ಬಂದ್ರೆ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಟೆನ್ಷನ್ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಹಾವೇರಿ (ಅ.7): ಗಣಪತಿ ಹಬ್ಬ ಬಂದ್ರೆ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಟೆನ್ಷನ್ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಇಂದು ಬಂಕಾಪುರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಹಿಂದೂ ಹಬ್ಬಗಳು ಬಂದ್ರೆ ಸರ್ಕಾರಕ್ಕೆ ಟೆನ್ಷನ್ ಶುರುವಾಗುತ್ತದೆ. ಮೊದಲು ಕಾಂಗ್ರೆಸ್ ಸರ್ಕಾರವಿದ್ದಾಗ ಕಾಶ್ಮೀರದಲ್ಲಿ ಸೈನಿಕರ ಮೇಲೆ ಕಲ್ಲು ಒಗೆಯುತ್ತಿದ್ದರು. ಈ ಭಾರತದ ಧ್ವಜದ ಮೇಲೆ ಹೂ ಬೀಳುತ್ತಿದೆ. ಮುಂದಿನ ಲೋಕಸಭಾ ಚುನಾವಣೆ ಗೆದ್ದು ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು. 2024 ರಲ್ಲಿ ಪಾಕಿಸ್ತಾನದಲ್ಲಿ ಗಣಪತಿ ಕೂಡಿಸಬೇಕು ಎಂದರು. 

 ಇಂಡಿಯಾ ಒಕ್ಕೂಟ ಪ್ರಸ್ತಾಪಿಸಿದ ಯತ್ನಾಳ್, ಅದು ಇಂಡಿಯಾ ಅಲೈಯನ್ಸ್ ಅಲ್ಲ ಅದು ಮೊಂಡ ಅಲೈಯನ್ಸ್. ಇವರೆಲ್ಲ ಹೈಬ್ರೀಡ್ ತಳಿಗಳು ಒಂದು ಕಡೆ ಕೂಡಿದಾವೆ. ಹೈಬ್ರೀಡ್ ತಳಿಗಳು ಸೇರಿ ದೇಶ ಹಾಳು ಮಾಡಬೇಕು ಅಂತಾರೆ. ನೆಹರು ಫಾರುಕ್ ಅಬ್ದುಲ್ ಒಂದೇ ತರ ಕಾಣಿಸ್ತಾರೆ, ರಾಹುಲ್ ಉಮರ್ ಅಬ್ದುಲ್ಲಾ ಒಂದೇ ತರ ಕಾಣಿಸ್ತಾರೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರ ಹಿಂದೂಗಳಿಗೆ ರಕ್ಷಣೆ ಕೊಡೋ ಬದಲು ಮುಸ್ಲಿಮರಿಗೆ ರಕ್ಷಣೆ ಕೊಡುತ್ತಿದೆ: ಯತ್ನಾಳ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!