
ಮೈಸೂರು (ಮಾ.12): ಶನಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ ಅವರು ಸಾವನ್ನಪ್ಪಿದ ಬೆನ್ನಲ್ಲೇ ಶಾಸಕ ಎನ್. ಮಹೇಶ್ ಅವರು ಮೈಸೂರಿನ ನಿವಾಸಕ್ಕೆ ಹೋಗಿ ಅಂತಿಮ ದರ್ಶನ ಪಡೆದಿದ್ದರು. ಧೃವನಾರಾಯಣ ಅವರ ಮೃತದೇಹದ ಅಂತಿಮ ದರ್ಶನ ಪಡೆದಿದ್ದ ವೇಳೆ ಶಾಸಕ ಎನ್. ಮಹೇಶ್ ಕಂಬನಿ ಮಿಡಿದಿದ್ದರು. ಭಾರವಾದ ಮನಸ್ಸಿನಿಂದಲೇ ಮನೆಗೆ ತೆರಳಿದ್ದರು. ಆದರೆ, ಮನೆಗೆ ತೆರಳಿದ ಶಾಸಕ ಎನ್. ಮಹೇಶ್ ಅವರಿಗೆ ಎದೆಯ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿದೆ
ನಿನ್ನೆ ರಾತ್ರಿ ಮನೆಯಲ್ಲಿ ಊಟವನ್ನು ಮುಗಿಸಿ ಮಲಗಲು ಹೋದ ವೇಳೆ ತೀವ್ರವಾಗಿ ಎದೆ ನೋವು ಉಲ್ಬಣಿಸಿದೆ. ಇನ್ನು ನೋವು ತಾಳಲಾರದೇ ರಾತ್ರಿ 12.30ರಲ್ಲಿ ಶಾಸಕ ಎನ್. ಮಹೇಶ್ ಮೈಸೂರಿನ ಅಪೋಲೋ ಅಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಆರೋಗ್ಯದಲ್ಲಿ ಯಾವುದೇ ಗಂಭೀರ ಪ್ರಮಾಣದ ತೊಂದರೆ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ