ವರಮಹಾಲಕ್ಷ್ಮಿ ಹಬ್ಬಕ್ಕೆ ಶಾಸಕ ಪ್ರದೀಪ್ ಈಶ್ವರ್ ಮಹಿಳೆಯರಿಗೆ ಬಂಪರ್ ಕೊಡುಗೆ!

Published : Jul 15, 2024, 04:38 AM ISTUpdated : Jul 15, 2024, 11:23 AM IST
ವರಮಹಾಲಕ್ಷ್ಮಿ ಹಬ್ಬಕ್ಕೆ ಶಾಸಕ ಪ್ರದೀಪ್ ಈಶ್ವರ್ ಮಹಿಳೆಯರಿಗೆ ಬಂಪರ್ ಕೊಡುಗೆ!

ಸಾರಾಂಶ

ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಎರಡನೆ ವರ್ಷದ ಬಂಪರ್ ಕೊಡುಗೆಯಾಗಿ ಅರಿಶಿಣ, ಕುಂಕುಮ ಸೀರೆ, ಬಳೆಗಳ ವಿತರಣೆಗೆ ಭಾನುವಾರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಚಾಲನೆ ನೀಡಿದರು.

ಚಿಕ್ಕಬಳ್ಳಾಪುರ (ಜು.15): ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಎರಡನೆ ವರ್ಷದ ಬಂಪರ್ ಕೊಡುಗೆಯಾಗಿ ಅರಿಶಿಣ, ಕುಂಕುಮ ಸೀರೆ, ಬಳೆಗಳ ವಿತರಣೆಗೆ ಭಾನುವಾರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಚಾಲನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೀಪ್‌ ಈಶ್ವರ್‌(Pradeep Eshwar chikkaballapur MLA), ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಎಲ್ಲ ಮಹಿಳೆಯರಿಗೆ ವರಮಹಾಲಕ್ಷ್ಮೀ ಹಬ್ಬ((Varalakshmi festival 2024 ))ಕ್ಕೆ ಸೀರೆ ಅರಿಷಿಣ ಕುಂಕುಮ ಬಳೆಗಳನ್ನು ಕಳೆದ ಒಂದು ವರ್ಷದಿಂದ ಕ್ಷೇತ್ರದ ಜನತೆಯ ಸೋದರ ಹಾಗೂ ಮಗನಾಗಿ ನೀಡಿದ್ದೇನೆ. ಇಂದು ಸಹಾ ಎರಡನೇ ವರ್ಷದ ಪ್ರಯುಕ್ತ ನೀಡುತ್ತಿದ್ದೇನೆ. ನಮ್ಮ ಕಡೆಯವರು ಸಹಾ ಕ್ಷೇತ್ರದ ಎಲ್ಲಡೆ ವಿತರಿಸುತ್ತಿದ್ದಾರೆ ಎಂದರು.

 

ಸಂಸದ ಡಾ ಸುಧಾಕರ್‌ಗೆ ನೀಟ್ ಪರೀಕ್ಷೆ ಬಗ್ಗೆ ಕನಿಷ್ಠ ಜ್ಞಾನ ಇಲ್ಲ: ಶಾಸಕ ಪ್ರದೀಪ್ ಈಶ್ವರ್

ತಾಯಿ ಅನುಭವಿಸಿದ ನೋವು

ನಾವು ಬಡತನದಲ್ಲಿದ್ದಾಗ ನಮ್ಮ ತಾಯಿ ಮಂಜುಳರವರು ಸಾಕಷ್ಟು ಹಬ್ಬಗಳಿಗೆ ಹೊಸ ಸೀರೆ ಹಾಕಿಕೊಂಡಿರಲಿಲ್ಲ. ಬಡವರ ಆ ನೋವು ಏನೆಂದು ಬಡತನ ಅನುಭವಿಸಿರುವ ನನಗೆ ಗೊತ್ತಿದೆ. ಬಡವರು ಅದರಲ್ಲೂ ಮುಖ್ಯವಾಗಿ ತಾಯಂದಿರು ಯಾರು ಹಬ್ಬದ ದಿನ ಹೊಸ ಬಟ್ಟೆ ಇಲ್ಲ ಎಂದು ನೋವುಪಡಬಾರದೆಂದು ನನ್ನ ತಾಯಂದಿರಿಗೆ ಸೀರೆ ವಿತರಣೆ ಮಾಡುತ್ತಿದ್ದೇನೆ. ಅನಾಥನಾಗಿರುವ ನಾನು ಅವರಲ್ಲಿ ನನ್ನ ತಾಯಿಯನ್ನು ಕಾಣುತ್ತಿದ್ದೇನೆ ಎಂದು ತಿಳಿಸಿದರು. 

 

ಮತ್ತೆ ಸುದ್ದಿಯಲ್ಲಿದ್ದಾರೆ ಪ್ರದೀಪ್ ಈಶ್ವರ್; ಸಚಿವ ಸ್ಥಾನ ನೀಡುವಂತೆ ಡಿಮ್ಯಾಂಡ್!

ನನ್ನ ಸ್ವಂತ ಹಣದಿಂದ ಕ್ಷೇತ್ರದ ಸರ್ಕಾರಿ ಮತ್ತು ಅನುದಾನಿತ ಶಾಲೆ ಕಾಲೇಜುಗಳ 6500 ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನ ನೀಡಿದ್ದು, ಅಂಗನವಾಡಿಯಿಂದ ಹಿಡಿದು 1ರಿಂದ 10 ನೇ ತರಗತಿಯವರೆಗೆ ಸರ್ಕಾರಿ ಶಾಲೆಯ 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಒಂದು ಜೊತೆ ಬಟ್ಟೆಗಳನ್ನು ನೀಡಿದ್ದೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪದೇಪದೆ 'ನಮ್ಮಪ್ಪನೇ ಸಿಎಂ..' ಯತೀಂದ್ರ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರ? ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಕರ್ನಾಟಕ ವಿಧಾನಸಭೆಯಲ್ಲಿ ಎರಡು ಮಹತ್ವದ ವಿಧೇಯಕ ಮಂಡನೆ, ಉದ್ದೇಶಗಳು ಮತ್ತು ಕಾರಣಗಳು ಯಾವುವು?