ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಕಾಲ ನಿರ್ಣಯಿಸಲಿದೆ, ಗ್ಯಾರಂಟಿ ಯೋಜನೆ ಹಾಡಿ ಹೊಗಳಿದ ಶಾಸಕ ಶಿವರಾಮ್ ಹೆಬ್ಬಾರ್ 

Published : Mar 11, 2024, 10:43 PM IST
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಕಾಲ ನಿರ್ಣಯಿಸಲಿದೆ, ಗ್ಯಾರಂಟಿ ಯೋಜನೆ ಹಾಡಿ ಹೊಗಳಿದ ಶಾಸಕ ಶಿವರಾಮ್ ಹೆಬ್ಬಾರ್ 

ಸಾರಾಂಶ

ರಾಜ್ಯಸಭಾ ಚುನಾವಣೆಯ ಮತದಾನಕ್ಕೆ ಗೈರು ಆಗಿರುವ ಕುರಿತು ಸಮರ್ಪಕ ಉತ್ತರ ನೀಡಿದ್ದೇನೆ. ಅನರ್ಹ ಮಾಡುವುದು ಬಿಡುವುದು ಪಕ್ಷದ ನಿರ್ಣಯ ಎಂದು ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ತಿಳಿಸಿದರು.

ಕಾರವಾರ, ಉತ್ತರಕನ್ನಡ (ಮಾ.11): ರಾಜ್ಯಸಭಾ ಚುನಾವಣೆಯ ಮತದಾನಕ್ಕೆ ಗೈರು ಆಗಿರುವ ಕುರಿತು ಸಮರ್ಪಕ ಉತ್ತರ ನೀಡಿದ್ದೇನೆ. ಅನರ್ಹ ಮಾಡುವುದು ಬಿಡುವುದು ಪಕ್ಷದ ನಿರ್ಣಯ ಎಂದು ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ತಿಳಿಸಿದರು.

ಮುಂಡಗೋಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹೆಬ್ಬಾರ್, ರಾಜ್ಯಸಭೆ ಚುನಾವನೆಗೆ ಗೈರು ಆಗಿದ್ದಕ್ಕೆ ಬಿಜೆಪಿಯವರು ನೋಟಿಸ್ ನೀಡಿದ್ದಾರೆ, ನಾನು ನೋಟಿಸ್ ಗೆ ಉತ್ತರ ನೀಡಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವುದನ್ನು ಕಾಲ ನಿರ್ಣಯಿಸಲಿದೆ ಎನ್ನುವ ಮೂಲಕ ಬಿಜೆಪಿ ಪಕ್ಷದಿಂದ ಅನರ್ಹಗೊಂಡರೆ ಕಾಂಗ್ರೆಸ್ ಪಕ್ಷ ಸೇರುವ ಕುರಿತು ಪರೋಕ್ಷವಾಗಿ ಸುಳಿವು ನೀಡಿದರು.

ಶ್ರೀರಾಮನ ವನವಾಸದಂತೆ 14 ವರ್ಷಗಳ ಬಳಿಕ ನಾನು ಬಳ್ಳಾರಿಗೆ ಕಾಲಿಡುತ್ತೇನೆ ಅನ್ನೋ ಭಾವನೆ ಇದೆ: ಜನಾರ್ದನ ರೆಡ್ಡಿ

ಇನ್ನು ಸಂಸದ ಅನಂತಕುಮಾರ ಹೆಗ್ಡೆ ವಿವಾದಾತ್ಮಕ ಹೇಳಿಕೆ ಸಂಬಂಧ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅವರ ಹೇಳಿಕೆಗೆ ಜನರೇ ಉತ್ತರ ನೀಡುತ್ತಿದ್ದಾರೆ. ಅನಂತಕುಮಾರ ಹೆಗ್ಡೆ ಒಬ್ಬ  ದೊಡ್ಡ ಮನುಷ್ಯ, ಅವರ ಬಗ್ಗೆ ನಾನು ಬಗ್ಗೆ ನಾನು ಪ್ರತಿಕ್ರಿಯಿಸಲಾರೆ ಎಂದರು. ಇದೇ ವೇಳೆ ಸಚಿವ ರಾಮಲಿಂಗಾರೆಡ್ಡಿ ಬಗ್ಗೆ ಹಾಡಿಹೊಗಳಿದ ಹೆಬ್ಬಾರ್, ಮುಂಡಗೋಡದಲ್ಲಿ ರಾಮಲಿಂಗಾರೆಡ್ಡಿ ಅವಧಿಯಲ್ಲಿ ಸಾರಿಗೆ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು

ನಾವು ಬಿಜೆಪಿಗೆ ಬಂದಾಗ ಈಶ್ವರಪ್ಪ ಎಷ್ಟು ಕೋಟಿ ಕೊಟ್ಟಿದ್ದರು: ಮಾಜಿ ಸಚಿವ ಶಿವರಾಮ ಹೆಬ್ಬಾರ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಹುಲ್ ಗಾಂಧಿ ಮುಂದೆ ಡಿಕೆ-ಸಿದ್ದು ಹಾಕಿರೋ ಪಟ್ಟುಗಳೇನು? ಸಂಕ್ರಾಂತಿ ಬಳಿಕ ಯಾರ ಜೊತೆಗಿದೆ ಗ್ರಹಬಲದ ಶಕ್ತಿ?
ಸಂಕ್ರಾಂತಿ ದಿನವೇ ರಾಜಕಾರಣದ ಪಥ ಬದಲಿಸಿದ ಕುಮಾರಣ್ಣ; 2028ಕ್ಕೆ ರಾಜ್ಯ ರಾಜಕಾರಣಕ್ಕೆ ರೀ-ಎಂಟ್ರಿ ಖಚಿತ!