ತಲೆತಲಾಂತರದಿಂದ ಮಠದ ಭಕ್ತರಾದ ನಾವು ಮುರುಘಾ ಶರಣರ ಜೊತೆ ಇರುತ್ತೇವೆ; ಶಾಸಕ ವಿರೇಂದ್ರ ಪಪ್ಪಿ

Published : Nov 18, 2023, 08:44 PM IST
ತಲೆತಲಾಂತರದಿಂದ ಮಠದ ಭಕ್ತರಾದ ನಾವು ಮುರುಘಾ ಶರಣರ ಜೊತೆ ಇರುತ್ತೇವೆ; ಶಾಸಕ ವಿರೇಂದ್ರ ಪಪ್ಪಿ

ಸಾರಾಂಶ

ಶ್ರೀಗಳ ಭೇಟಿ ಕೇವಲ ಔಪಚಾರಿಕವಾಗಿದೆ. ಸದ್ಯ ಸ್ವಾಮೀಜಿಗಳು ಯಾವುದೇ ವಿಚಾರ ಕುರಿತು ಹೆಚ್ಚು ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ. ಅವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿದ್ದಾರೆ. ಆರೋಗ್ಯದಲ್ಲಿ ಯಾವುದೇ ಏರು ಪೇರು ಆಗಿಲ್ಲ ಎಂದು ಶಾಸಕ ವಿರೇಂದ್ರ ಪಪ್ಪಿ ಹೇಳಿದರು.

ದಾವಣಗೆರೆ (ನ.18): ನಾವು ತಲೆತಲಾಂತರದಿಂದ ಮಠದ ಭಕ್ತರಾದ ಹಿನ್ನೆಲೆ ಇಂದು ಸ್ವಾಮೀಜಿ ಭೇಟಿಗೆ ಬಂದಿದ್ದೇವೆ ಎಂದು ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಹೇಳಿದರು.

ಇಂದು ದಾವಣಗೆರೆಯ ವಿರಕ್ತಮಠಕ್ಕೆ ಭೇಟಿ ನೀಡಿ ಮುರುಘಾ ಶರಣರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಭೇಟಿ ಕೇವಲ ಔಪಚಾರಿಕವಾಗಿದೆ. ಸದ್ಯ ಸ್ವಾಮೀಜಿಗಳು ಯಾವುದೇ ವಿಚಾರ ಕುರಿತು ಹೆಚ್ಚು ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ. ಅವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿದ್ದಾರೆ. ಆರೋಗ್ಯದಲ್ಲಿ ಯಾವುದೇ ಏರು ಪೇರು ಆಗಿಲ್ಲ. ಅವರೇ ಬಂದು ಭಕ್ತರ ಆರೋಗ್ಯ  ಮತ್ತು ಮಠದ ಸೇವೆ ಕುರಿತು ವಿಚಾರಣೆ ಮಾಡುತ್ತಿದ್ದಾರೆ ಎಂದರು.

ಪೋಕ್ಸೋ ಪ್ರಕರಣದಲ್ಲಿ 14 ತಿಂಗಳಿಂದ ಜೈಲಿನಲ್ಲಿದ್ದ ಮುರುಘಾ ಸ್ವಾಮೀಜಿ ಬಿಡುಗಡೆ

ಕೇಸ್‌ ಕೋರ್ಟ್‌ನಲ್ಲಿ ಇರೋದು, ಕಾನೂನು ವಿಚಾರ ಸಂಬಂಧ ಭೇಟಿ ವೇಳೆ ಯಾವುದೇ ಚರ್ಚೆ ಮಾಡಿಲ್ಲ. ಭಕ್ತರಿಗೆಲ್ಲಾ ಪೀಠ ಉಳಿಸಿಕೊಳ್ಳುವ ಮಹತ್ತರ ಜವಾಬ್ದಾರಿ ಇದೆ. ಎಲ್ಲರೂ ಶ್ರೀಗಳ ಜೊತೆ ಇರುತ್ತೇವೆ ಎಂದರು. 

ಮಠದ ವಸತಿ ನಿಲಯದ ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರದ ಪೋಕ್ಸೋ ಪ್ರಕರಣ ದಲ್ಲಿ 14 ತಿಂಗಳಿಂದ ಜೈಲಿನಲ್ಲಿದ್ದ ಮುರುಘಾ ಸ್ವಾಮೀಜಿ ಬಿಡುಗಡೆಯಾಗಿದ್ದಾರೆ. ಬಿಡುಗಡೆ ಬಳಿಕ ಚಿತ್ರದುರ್ಗ ಮುರುಘಾ ಮಠಕ್ಕೆ ತೆರಳದೇ ದಾವಣಗೆರೆ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿರುವ ಶ್ರೀಗಳು. ಕಳೆದ ನಾಲ್ಕು ದಿನಗಳ ಹಿಂದೆ ಜಾಮೀನು ಮಂಜೂರು ಮಾಡಲಾಗಿತ್ತು. ಆದರೆ, ಇನ್ನೊಂದು ಅಟ್ರಾಸಿಟಿ ಪ್ರಕರಣದಲ್ಲಿ ಅವರಿಗೆ ಬಾಡಿ ವಾರೆಂಟ್‌ ನೀಡಲಾಗಿದೆ ಹೊರತು ಜೈಲು ಶಿಕ್ಷೆ ಆಗಿರಲಿಲ್ಲ. ಆದ್ದರಿಂದ,  ಪೋಕ್ಸೋ ಪ್ರಕರಣದ ಕುರಿತ ಜಾಮೀನು ಸಿಕ್ಕಿದ ಆಧಾರದಲ್ಲಿ ಗುರುವಾರ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ