ಇಸ್ರೋ ಸಾಧನೆ ಪ್ರಕಾಶ್ ರಾಜ್ ಮುಖಕ್ಕೆ ಕ್ಯಾಕರಿಸಿ ಉಗಿದಂತಾಗಿದೆ: ಪ್ರಮೋದ್ ಮುತಾಲಿಕ್

Published : Aug 24, 2023, 06:18 PM IST
ಇಸ್ರೋ ಸಾಧನೆ ಪ್ರಕಾಶ್ ರಾಜ್ ಮುಖಕ್ಕೆ ಕ್ಯಾಕರಿಸಿ ಉಗಿದಂತಾಗಿದೆ: ಪ್ರಮೋದ್ ಮುತಾಲಿಕ್

ಸಾರಾಂಶ

 ಇಸ್ರೋ ವಿಜ್ಞಾನಿಗಳ ಸಾಧನೆ ಪ್ರಕಾಶ್ ರಾಜ್ ಮುಖಕ್ಕೆ ಕ್ಯಾಕರಿಸಿ ಉಗುಳಿದಂತಾಗಿದೆ ಎಂದು ಶ್ರೀರಾಮ್ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.

ಬೆಳಗಾವಿ (ಆ.24) :  ಇಸ್ರೋ ವಿಜ್ಞಾನಿಗಳ ಸಾಧನೆ ಪ್ರಕಾಶ್ ರಾಜ್ ಮುಖಕ್ಕೆ ಕ್ಯಾಕರಿಸಿ ಉಗುಳಿದಂತಾಗಿದೆ ಎಂದು ಶ್ರೀರಾಮ್ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಇಸ್ರೋ ವಿಜ್ಞಾನಿಗಳ ತಂಡ ತಿರುಪತಿಗೆ ಹೋಗಿ ಪೂಜೆ ಸಲ್ಲಿಸಿದ್ದಕ್ಕೆ ಈ ಬುದ್ಧಿಜೀವಿಗಳು ಅಪಹಾಸ್ಯ ಮಾಡಿದ್ದಾರೆ. ಕೆಟ್ಟದಾಗಿ ಚಿತ್ರಿಸಿ ಟ್ವಿಟರ್‌ನಲ್ಲಿ ಹಾಕಿಕೊಂಡಿದ್ದಾರೆ. ಪ್ರಕಾಶ್ ರಾಜ್ ಮತ್ತವರ ಬುದ್ಧಿಜೀವಿಗಳ ತಂಡ ಈ ದೇಶದಲ್ಲಿ ಹುಟ್ಟಿರೋದೆ ದೊಡ್ಡ ಕಳಂಕ. ನಮ್ಮ ಭಾರತ ಆಸ್ತಿಕರ ನಂಬಿಕೆ ಇರುವ ಧಾರ್ಮಿಕ ಸಂಪ್ರದಾಯದ ದೇಶ. ನಾಸ್ತಿಕರಾದ ಇವರೆಲ್ಲ ಚೀನಾದಲ್ಲಿ ಹುಟ್ಟುಬೇಕಿತ್ತು. ತಪ್ಪಿ ಇಲ್ಲಿ ಹುಟ್ಟಿ ದೇಶಕ್ಕೆ ದೊಡ್ಡ ಕಳಂಕರಾಗಿದ್ದಾರೆ. ನಮ್ಮ ಇಸ್ರೋ ವಿಜ್ಞಾನಿಗಳು ತಿರುಪತಿಗೆ ಹೋಗಿ ಪೂಜೆ ಸಲ್ಲಿಸಿ ಬಂದಿದ್ದರಿಂದಲೇ ಇಡೀ ಜಗತ್ತೇ ತಿರುಗಿನೋಡುವಂತೆ  ಸಾಧನೆ ಮಾಡಲು ಸಾಧ್ಯವಾಗಿದೆ. ವಿಜ್ಞಾನಿಗಳ ಪ್ರಯತ್ನಕ್ಕೆ ದೇವರು ಫಲ ನೀಡಿದ್ದಾನೆ. ಈ ಸಾಧನೆ ಪ್ರಕಾಶ್ ರಾಜ್‌ ಮುಖಕ್ಕೆ ಉಗುಳಿದಂತಾಗಿದೆ ಗುಡುಗಿದರು. 

Chandrayaan- 3: ಇಸ್ರೋ ಮಾಜಿ ಮುಖ್ಯಸ್ಥರಿಗೆ ಪ್ರಕಾಶ್‌ ರೈ ಲೇವಡಿ: ತುಂಬಾ ಕೆಳಮಟ್ಟಕ್ಕೆ ಇಳಿದಿದ್ದೀರಾ ಎಂದು ನೆಟ್ಟಿಗರ ಟೀಕೆ

ಇಸ್ರೋ ವಿಜ್ಞಾನಿಗಳು ಉಡಾವಣೆ ಮುನ್ನ ತಿರುಪತಿಗೆ ಹೋಗಿ ದರ್ಶನ ಪಡೆದು ಬಂದಿದ್ದರು. ಈ ಬಗ್ಗೆ ಬುದ್ಧಿಜೀವಿಗಳು ಸಾಮಾಜಿಕ ಜಾಲತಾಣದಲ್ಲಿ ಅಪಹಾಸ್ಯ ಮಾಡಿದ್ದರು. ಇನ್ನು ಪ್ರಕಾಶ ರಾಜ್ ಇಸ್ರೋ ಮಾಜಿ ಅಧ್ಯಕ್ ಕೆ ಶಿವನ್ ಅವರ ಫೋಟೊ ಕೆಟ್ಟದಾಗಿ ಚಿತ್ರಿಸಿ ಚಂದ್ರಯಾನ 3 ಕಳಿಸಿರುವ ಫೋಟೊ ಎಂದು ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದರು. ದೇಶಾದ್ಯಂತ ಜನರು ಪ್ರಕಾಶ್ ರಾಜ್ ವಿರುದ್ಧ ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದರು. 

ಗ್ಯಾರಂಟಿಗಳು ಬಡವರ ಪಾಲಿಗೆ ವರದಾನ: ನಟ ಪ್ರಕಾಶ್‌ ರಾಜ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!
New Hate-Speech Law: ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!