
ಬೆಂಗಳೂರು (ಜೂ.7) : ರಾಜ್ಯದಲ್ಲಿ ಕ್ಷೀಣಿಸಿರುವ ಮುಂಗಾರು ಜೂ.11 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿಗದಿತ ಅವಧಿಗಿಂತ ಮೊದಲೇ ಕಾಲಿಟ್ಟು ಮುಂಗಾರು ಆರಂಭದಲ್ಲಿ ಭಾರೀ ಮಳೆ ಸುರಿಸುವ ಮುನ್ಸೂಚನೆ ನೀಡಿತ್ತು. ಆದರೆ ಒಂದೇ ವಾರದಲ್ಲಿ ಕ್ಷೀಣಿಸಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ಇದೀಗ ಸೋಮವಾರದಿಂದ ಮತ್ತೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಜೂ.11 ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂ.11ಕ್ಕೆ ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಜೂ.12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ನ ಮುನ್ಸೂಚನೆ ನೀಡಲಾಗಿದೆ.
ಮೊದಲ ವಾರ ಶೇ.39 ಮುಂಗಾರು ಕೊರತೆ: ಮೇ ತಿಂಗಳಲ್ಲಿ ದಾಖಲೆ ಮಳೆಯಾದರೆ ಮುಂಗಾರು ಆರಂಭದ ಜೂನ್ ಮೊದಲ ವಾರವೇ ಮಳೆ ಕೊರತೆ ಕಾಣಿಸಿಕೊಂಡಿದೆ. ಜೂ.1 ರಿಂದ 4 ವರೆಗಿನ ಅವಧಿಯಲ್ಲಿ ರಾಜ್ಯದಲ್ಲಿ 18.9 ಮಿ.ಮೀ. ನಷ್ಟು ವಾಡಿಕೆ ಮಳೆಯಾಗಬೇಕು. ಆದರೆ 11.6 ಮಿ.ಮೀ. ಅಷ್ಟೇ ಮಳೆಯಾಗಿದೆ. ಈ ಮೂಲಕ ಶೇ.39ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ