
ದಾವಣಗೆರೆ (ಜ.21): ಆಂಜನೇಯ ವಿಗ್ರಹ ಪ್ರತಿಷ್ಠಾಪನೆ ವೇಳೆ ಯಾವತ್ತೂ ಕಾಣದ ಮುಸಿಯಾ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಣಿಗೆರೆ ಗ್ರಾಮದಲ್ಲಿ ನಡೆದಿದೆ.
ಜ.22 ರಂದು ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆ ತಣಿಗೆರೆ ಗ್ರಾಮಸ್ಥರು ಆಂಜನೇಯ ವಿಗ್ರಹ ಪ್ರತಿಷ್ಠಾಪನೆ ಮಾಡಲು ಸಿದ್ಧತೆ ನಡೆಸಿದ್ದರು. ಸರಿಯಾಗಿ
ಅಂಜನೇಯನ ವಿಗ್ರಹ ಪ್ರತಿಷ್ಠಾಪನೆ ಸಮಯಕ್ಕೆ ಕಾಣಿಸಿಕೊಂಡ ಕೋತಿ. ಗ್ರಾಮದಲ್ಲಿ ಇತ್ತೀಚೆಗೆ ಎಲ್ಲೂ ಕೋತಿಗಳೇ ಕಾಣಿಸಿಕೊಂಡಿರಲಿಲ್ಲ. ಆದರೆ ಆಂಜನೇಯ ವಿಗ್ರಹ ಪ್ರತಿಷ್ಠಾಪನೆ ಸಮಯಕ್ಕೆ ಕಾಣಿಸಿಕೊಂಡಿರುವುದು ಸ್ವತಃ ಆಂಜನೇಯ ಗ್ರಾಮಕ್ಕೆ ಆಗಮಿಸಿದ್ದಾನೆಂದು ಸಂತಸಗೊಂಡಿರುವ ಗ್ರಾಮಸ್ಥರು.
ನಾಳೆ (ಜ.22) ರಂದು ಪ್ರತಿಷ್ಠಾಪನೆಯಾಗಲಿರುವ ಹನುಮಾನ ಮೂರ್ತಿ. ಗ್ರಾಮಸ್ಥರು ಉತ್ಸಾಹಗೊಂಡಿದ್ದಾರೆ. ಘಟನೆ ವಿಡಿಯೋ ಸೋಷಿಯಲ್ ಮೀಡಿಯಲ್ಲಿ ವೈರಲ್ ಆಗಿದ್ದು, ಆಂಜನೇಯನೇ ಗ್ರಾಮಕ್ಕೆ ಆಗಮಿಸಿದ್ದಾನೆಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ