ಹುಂಡಿ ಎಣಿಕೆ ಕಾರ್ಯ, 33 ದಿನಗಳಲ್ಲಿ ಮತ್ತೆ ಕೋಟ್ಯಧೀಶನಾದ ಮಲೆ ಮಹದೇಶ್ವರ!

Published : Jan 04, 2024, 08:03 AM IST
ಹುಂಡಿ ಎಣಿಕೆ ಕಾರ್ಯ,  33 ದಿನಗಳಲ್ಲಿ ಮತ್ತೆ ಕೋಟ್ಯಧೀಶನಾದ ಮಲೆ ಮಹದೇಶ್ವರ!

ಸಾರಾಂಶ

ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿ​ಧಿಯಲ್ಲಿ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.90 ಕೋಟಿ ರೂಪಾಯಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. ಕಳೆದ 33 ದಿನಗಳ ಅವಧಿಯಲ್ಲಿ ಭಕ್ತರಿಂದ ಸಂಗ್ರಹವಾಗಿರುವ ಕಾಣಿಕೆ.  ಮಹದೇಶ್ವರ ಬೆಟ್ಟದಲ್ಲಿ ತಡರಾತ್ರಿವರೆಗೆ ಹುಂಡಿ ಎಣಿಕೆ ಕಾರ್ಯ ನಡೆಯಿತು.

ಚಾಮರಾಜನಗರ (ಜ.4): ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿ​ಧಿಯಲ್ಲಿ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.90 ಕೋಟಿ ರೂಪಾಯಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿದೆ. ಕಳೆದ 33 ದಿನಗಳ ಅವಧಿಯಲ್ಲಿ ಭಕ್ತರಿಂದ ಸಂಗ್ರಹವಾಗಿರುವ ಕಾಣಿಕೆ.  ಮಹದೇಶ್ವರ ಬೆಟ್ಟದಲ್ಲಿ ತಡರಾತ್ರಿವರೆಗೆ ಹುಂಡಿ ಎಣಿಕೆ ಕಾರ್ಯ ನಡೆಯಿತು.

ನಗದು ರೂಪದಲ್ಲಿ ಒಟ್ಟು  2,99,00,732  ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. 13ಲಕ್ಷ ರೂಪಾಯಿ ಗು ಹೆಚ್ಚು ಹಣ ನಾಣ್ಯಗಳ ರೂಪದಲ್ಲೇ ಕಾಣಿಕೆ ಬಂದಿದೆ. ಇನ್ನು 102 ಗ್ರಾಂ ಚಿನ್ನ,  3 ಕೆಜಿ 155 ಗ್ರಾಂ ಬೆಳ್ಳಿ ಕಾಣಿಕೆ ಬಂದಿದೆ. 23 ಯುಎಸ್ಎ ಡಾಲರ್ ಕೆನಡಾದ 100 ಡಾಲರ್ ಓಮನ್ ದೇಶದ 4 ರಿಯಾಲ್  ನೋಟುಗಳು ಸಹ ಕಾಣಿಕೆ ಹುಂಡಿಯಲ್ಲಿ ಪತ್ತೆಯಾಗಿವೆ. ಹುಂಡಿಯಲ್ಲಿ ಚಲಾವಣೆಯಲ್ಲಿ‌ ಇಲ್ಲದ 2000 ಮುಖಬೆಲೆಯ  12 ನೋಟುಗಳು ಬಂದಿವೆ.

ಸಿದ್ದು ಸರ್ಕಾರದ ಯೋಜನೆಯಿಂದ ಈ ವರ್ಷ 50 ಲಕ್ಷ ಮಂದಿ ಭಕ್ತರಿಂದ ಮಹದೇಶ್ವರನ ದರ್ಶನ!

ಕಳೆದ ತಿಂಗಳ 23ದಿನಗಳ ಅವಧಿಯಲ್ಲಿ 2,00,41,724 ರು. ಹುಂಡಿ ಹಣ ಸಂಗ್ರಹವಾಗಿತ್ತು. ಈ ಬಾರಿ ಹೆಚ್ಚಳವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
Karnataka News Live: ಪುರುಷರಿಗಿಲ್ಲದ ಕಟ್ಟುಪಾಡು ನಮಗೇಕೆ? - ಮಲೈಕಾ