
ಚಿತ್ರದುರ್ಗ (ಜೂ.30): ಎಲ್ಲರಿಂದ ದೂರವಾಗಿ ಒಂಟಿಯಾಗಿ ಬದುಕುತ್ತಿದ್ದ ಸನ್ಯಾಸಿಯೋರ್ವ ಮೃತಪಟ್ಟಿದ್ದು, ಮೃತನ ಮನೆಯಲ್ಲಿ ಲಕ್ಷಾಂತರ ರೂಪಾಯಿ ಪತ್ತೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.
ವಾರದ ಹಿಂದೆ ಮೃತಪಟ್ಟಿರುವ ಗಂಗಾಧರ ಶಾಸ್ತ್ರಿ(70) ಒಂಟಿಯಾಗಿ ಬದುಕು ನಡೆಸುತ್ತಿದ್ದ ಶಾಸ್ತ್ರಿ. ಶಾಸ್ತ್ರ ಹೇಳುವುದು, ಶುಭ ಕಾರ್ಯದ ಪೂಜೆ ಮಾಡಿಸುತ್ತಿದ್ದ. ಗಂಗಾಧರ ಶಾಸ್ತ್ರಿಗೆ 16ಎಕರೆ ಜಮೀನಿದ್ದು 4ಎಕರೆ ತೆಂಗಿನ ತೋಟ, ಗದ್ದೆ ಹೊಂದಿದ್ದರು. ಕೃಷಿ ಮತ್ತಿತರೆ ಆದಾಯದಿಂದ ಬಂದ ಸುಮಾರು 30ಲಕ್ಷಕ್ಕೂ ಅಧಿಕ ಹಣ ಮನೆಯಲ್ಲಿ ಕೂಡಿಟ್ಟಿದ್ದರು. ಭಕ್ತರಿಂದ ಬಂದ ಕಾಣಿಕೆ ಹಣವೇ 46ಸಾವಿರ ರೂ.ಹೆಚ್ಚಿದೆ.
ಜಮೀನಿಗೆ ದಾರಿ ಬಿಡಿ ಅಂದ್ರೆ, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದೇಬಿಟ್ರು
ಚಿತ್ರದುರ್ಗದ ಹೊಳಲ್ಕೆರೆ ಪಟ್ಟಣದಲ್ಲಿರುವ ಗಂಗಾಧರ ಶಾಸ್ತ್ರಿ ಮೃತಪಟ್ಟ ಹಿನ್ನೆಲೆ ಎರಡು ದಿನದ ಹಿಂದೆ ಮನೆ ಪರಿಶೀಲಿಸಿದ್ದ ಭಕ್ತರು. ಈ ವೇಳೆ ಮನೆಯಲ್ಲಿ ಲಕ್ಷಾಂತರೂ ಕೂಡಿಟ್ಟಿರುವುದು ಪತ್ತೆಯಾಗಿದೆ. ಸದ್ಯ ಜುಲೈ 7ಕ್ಕೆ ಭಕ್ತರ ಸಭೆ ಕರೆದು ಸಮಿತಿ ರಚನೆಗೆ ಸ್ಥಳೀಯರ ನಿರ್ಧಾರ ಮಾಡಿದ್ದು. ಜಮೀನಿನಲ್ಲಿ ಗಂಗಾಧರ ಶಾಸ್ತ್ರಿ ಗದ್ದುಗೆ ನಿರ್ಮಿಸಲು ಸ್ಥಳೀಯರು ನಿರ್ಧರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ