ಹಾಸ್ಟೆಲ್‌ ಊಟ ಸೇವಿಸಿ 30+ ಬಾಲಕಿಯರು ಅಸ್ವಸ್ಥ: ಸಾರ್ವಜನಿಕ ಆಸ್ಪತ್ರೆಗೆ ದಾಖಲು

Published : Apr 28, 2024, 07:23 AM IST
ಹಾಸ್ಟೆಲ್‌ ಊಟ ಸೇವಿಸಿ 30+ ಬಾಲಕಿಯರು ಅಸ್ವಸ್ಥ: ಸಾರ್ವಜನಿಕ ಆಸ್ಪತ್ರೆಗೆ ದಾಖಲು

ಸಾರಾಂಶ

ನಗರದ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ಪದವಿ ವಸತಿ ನಿಲಯದ 30ಕ್ಕೂ ಅಧಿಕ ವಿದ್ಯಾರ್ಥಿನಿಯರು ವಾಂತಿ-ಬೇಧಿಯಿಂದ ಅಸ್ವಸ್ಥರಾದ ಘಟನೆ ಶನಿವಾರ ನಡೆದಿದೆ.   

ಸಿಂಧನೂರು (ಏ.28): ನಗರದ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ಪದವಿ ವಸತಿ ನಿಲಯದ 30ಕ್ಕೂ ಅಧಿಕ ವಿದ್ಯಾರ್ಥಿನಿಯರು ವಾಂತಿ-ಬೇಧಿಯಿಂದ ಅಸ್ವಸ್ಥರಾದ ಘಟನೆ ಶನಿವಾರ ನಡೆದಿದೆ. ವಿದ್ಯಾರ್ಥಿನಿಯರನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಾಹ್ನ ಅನ್ನ, ಸಾಂಬಾರು, ರೊಟ್ಟಿ, ಹುರುಳಿ ಕಾಳು ಸೇವಿಸಿದ್ದ ವಿದ್ಯಾರ್ಥಿನಿಯರಿಗೆ ಫುಡ್ ಪಾಯಿಸನ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯರು ಸಂಜೆ ಏಕಾಏಕಿ ವಾಂತಿ, ಬೇಧಿಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವಿಷಯ ತಿಳಿದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಮಹೇಶ ಪೋತೆದಾರ್ ಆಸ್ಪತ್ರೆಗೆ ಆಗಮಿಸಿ ಮುಖ್ಯ ವೈದ್ಯಾಧಿಕಾರಿ ನಾಗರಾಜ ಕಾಟ್ವಾ ಅವರಿಗೆ ವಿಷಯ ತಿಳಿಸಿದರು. ಈ ವೇಳೆ ಡಾ.ಕಾಟ್ವಾ ಅವರು ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆ ನಡೆಸಿ, ತಮ್ಮ ಸಿಬ್ಬಂದಿಯೊಂದಿಗೆ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಿ,

ಸಿಎಂ ಸಿದ್ದರಾಮಯ್ಯ ಬದಲಿಸಲು ‘ಕಾಂಗ್ರೆಸ್‌’ ಚಿಂತನೆ: ಪ್ರಧಾನಿ ಮೋದಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರಬಾಬು ಶನಿವಾರ ಸಿಂಧನೂರಿನ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಬಾಲಕಿಯರ ಪದವಿ ವಸತಿ ನಿಲಯ ಹಾಗೂ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದುಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!