
ಚನ್ನಪಟ್ಟಣ (ಮೇ.5): ಅವಧಿ ಮೀರಿದ ಐಸ್ಕ್ರೀಂ ಸೇವಿಸಿ 40ಕ್ಕೂ ಹೆಚ್ಚು ಮಂದಿ ತೀವ್ರ ಆಸ್ವಸ್ಥರಾದ ಘಟನೆ ಚನ್ನಪಟ್ಟಣದ ಟಿಪ್ಪುನಗರ ಮಿಲನ್ ಶಾದಿ ಮಹಲ್ನಲ್ಲಿ ನಡೆದಿದೆ.
ಚನ್ನಪಟ್ಟಣದ ಮಿಲನ್ ಶಾದಿ ಮಹಲ್ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭ. ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ಸುಮಾರು 80ಕ್ಕೂ ಹೆಚ್ಚು ಮಂದಿ ಐಸ್ಕ್ರೀಂ ಸೇವಿಸಿದ್ದರು. ಅವರ ಪೈಕಿ ಸುಮಾರು 40 ಜನರಿಗೆ ಐಸ್ಕ್ರೀಂ ತಿಂದ ಬಳಿಕ ಆರೋಗ್ಯದಲ್ಲಿ ಏರುಪೇರಾಗಿ ತೀವ್ರ ಅಸ್ವಸ್ಥರಾಗಿದ್ದಾರೆ. ಬಳಿಕ ಅಸ್ವಸ್ಥರನ್ನು ಕೂಡಲೇ ಚನ್ನಪಟ್ಟಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಚನ್ನಪಟ್ಟಣ ಟೌನ್ ಪೊಲೀಸರು. ಘಟನೆ ನಡೆದ ಸ್ಥಳ, ಐಸ್ಕ್ರೀಂ ಪರಿಶೀಲನೆ ನಡೆಸಿದ್ದಾರೆ.
ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ಇಬ್ಬರು ಯುವಕರ ದುರಂತ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ