
ಬೆಂಗಳೂರು (ನ.26): ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ಕೊರೋನಾ ಟೆಸ್ಟ್ ಮುಂದುವರಿದಿದ್ದು, ರಾಜ್ಯದಲ್ಲಿ ಕಾಲೇಜು ಆರಮಭವಾದ ವಾರದಲ್ಲಿ 500ಕ್ಕೂ ಅಧಿಕ ವಿದ್ಯಾರ್ಥಿಗಳಲ್ಲಿ ಸೋಂಕು ದೃಢವಾಗಿದೆ.
ಬೆಂಗಳೂರಿನಲ್ಲಿ ಬುಧವಾರ 7 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಒಟ್ಟು ವಿದ್ಯಾರ್ಥಿಗಳು, ಶಿಕ್ಷಕರ ಸೋಂಕಿತರ ಸಮಖ್ಯೆ 209ಕ್ಕೆ ಏರಿಕೆಯಾಗಿದೆ.
ಇದರಲ್ಲಿ 148 ಜನ ವಿದ್ಯಾರ್ಥಿಗಳು ಹಾಗೂ 61 ಮಂದಿ ಸಿಬ್ಬಂದಿಯಾಗಿದ್ದಾರೆ.
ಬೆಂಗಳೂರಲ್ಲಿ ಕೊರೋನಾಗೆ ಬಲಿ ಆದವರ ಸಂಖ್ಯೆ 4100ಕ್ಕೆ ಏರಿಕೆ ..
ಕಾಲೇಜು ಆರಂಭವಾಗಿ ಇದುವರೆಗೆ ವಿದ್ಯಾರ್ಥಿಗಳು ಸೇರಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 110. ಬಳ್ಳಾರಿ 69, ಉತ್ತರ ಕನ್ನಡ ಜಿಲ್ಲೆಯಲ್ಲಿ 29, ಧಾರವಾಡ ಜಿಲ್ಲೆಯಲ್ಲಿ 11, ಗದಗ 3, ಬೀದರ್ 1, ಕಲಬುರಗಿ 7 ಮೈಸೂರು 6, ವಿಜಯಪುರದಲ್ಲಿ 29 ಉಡುಪಿಯಲ್ಲಿ 23 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ