
ಶಿವಮೊಗ್ಗ (ಡಿ.24) ಇಂದು ದೇಶದ ಸರ್ಕಾರಿ ವಲಯದಲ್ಲಿ ಶೇ.3.5ರಷ್ಟು ಮಂದಿ ಕೆಲಸ ಮಾಡುತ್ತಿದ್ದಾರೆ. ಉಳಿದ ಶೇ.70ರಷ್ಟು ಮಂದಿ ಕೃಷಿಯಲ್ಲಿ ತೊಡಗಿದ್ದಾರೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದರು.
ಕೇಂದ್ರ ಸರ್ಕಾರದ ಪಿಎಂ ಸ್ವನಿಧಿ, ಪಿಎಂ ಸೂರ್ಯಘರ್, ವಿಶ್ವಕರ್ಮ ಸೇರಿದಂತೆ ಸುಮಾರು 9 ಯೋಜನೆಗಳ 1040 ಫಲಾನುಭವಿಗಳಿಗೆ ಸಾಲದ ಆದೇಶ ಪತ್ರ ಚೆಕ್ ವಿತರಣೆ ಮಾಡಿದ ಬಳಿಕ ಮಾತನಾಡಿದ ಸಂಸದರು, ಇಂದು ಸರ್ಕಾರಿ ವಲಯಕ್ಕಿಂತ ಖಾಸಗಿ ವಲಯ ಇಲ್ಲವೇ ಸ್ವಯಂ ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ. ಅದರಲ್ಲೇ ಯಶಸ್ವಿಯಾಗಿದ್ದಾರೆ ಎಂದರು.
ಉತ್ತರ ಭಾರತದಲ್ಲಿ ಇರುವಂತೆ ಕರ್ನಾಟಕದಲ್ಲೂ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆ: ಸೋಮಣ್ಣ
ಇಂದು ದೇಶದಲ್ಲಿರುವ ದುಡಿಯುವ ಶಕ್ತಿ, ಯೋಜನೆಗೆ ತಕ್ಕಂತೆ ಬ್ಯಾಂಕ್ಗಳಿಂದ ಆರ್ಥಿಕ ನೆರವು ದೊರೆಯುತ್ತಿದೆ. ಅದರ ಸದ್ಬಳಕೆ ಮಾಡಿಕೊಂಡು ಫಲಾನುಭವಿಗಳು ಆರ್ಥಿಕವಾಗಿ ಸದೃಢವಾಗಬೇಕು. ಬ್ಯಾಂಕ್ ಸಿಬ್ಬಂದಿ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯ ಒದಗಿಸಬೇಕು ಎಂದು ಸೂಚಿಸಿದರು.
ಈ ವೇಳೆ ಜಿಪಂ ಸಿಇಒ ಎನ್.ಹೇಮಂತ್, ಕೆನರಾ ಬ್ಯಾಂಕ್ ಶಿವಮೊಗ್ಗ ಪ್ರಾದೇಶಿಕ ಕಚೇರಿ ಡಿಜಿಎಂ ಆರ್.ದೇವರಾಜ್, ಬೆಂಗಳೂರು ಆರ್ಬಿಐ ನ ವ್ಯವಸ್ಥಾಪಕ ವೆಂಕಟರಾಮಯ್ಯ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ