ನೀನು‌ ಎಷ್ಟು ಟ್ಯಾಕ್ಸ್ ಕಟ್ಟುತ್ತಿದ್ದೀಯ ಹೇಳು; ಬರಪರಿಹಾರ ಕೇಳಿದ ರೈತನ ಮೇಲೆ ಸಂಸದ ಡಿ.ಕೆ.ಸುರೇಶ್ ಗರಂ!

Published : Dec 02, 2023, 07:30 AM ISTUpdated : Dec 02, 2023, 11:42 AM IST
ನೀನು‌ ಎಷ್ಟು ಟ್ಯಾಕ್ಸ್ ಕಟ್ಟುತ್ತಿದ್ದೀಯ ಹೇಳು; ಬರಪರಿಹಾರ ಕೇಳಿದ ರೈತನ ಮೇಲೆ ಸಂಸದ ಡಿ.ಕೆ.ಸುರೇಶ್ ಗರಂ!

ಸಾರಾಂಶ

ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡು ಬೇಡಿಕೆಯನ್ನು ಇಡಬೇಕು. ಎಲ್ಲರಿಗೂ ಆಸೆ ಇದೆ, ಏನು ಕೊಟ್ಟರೂ ಸಾಲೋದಿಲ್ಲ. ಸರ್ಕಾರಿ ನೌಕರರಿಗೂ ಸಮಾಧಾನ ಇಲ್ಲ. ಪಂಚಾಯತ್ ಸದಸ್ಯರು, ಶಾಸಕರು ಸಾಮಾಧಾನವಾಗಿಲ್ಲ. ಬೆಳಗ್ಗೆ ಎದ್ದು ಯಾರು ದುಡಿಮೆ ಮಾಡುತ್ತಾನೋ ಅವನೇ ಸಮಾಧಾನವಾಗಿರೋದು ಎಂದು ಬರ ಪರಿಹಾರ ಕೇಳಿದ ರೈತನಿಗೆ ಸಂಸದ ಡಿಕೆ ಸುರೇಶ್ ಕ್ಲಾಸ್.

ಮಾಗಡಿ (ಡಿ.2) ಬರ ಪರಿಹಾರ ಕೇಳಿದ ರೈತನಿಗೆ ಸಂಸದ ಡಿಕೆ ಸುರೇಶ್ 'ನೀನೆಷ್ಟು ಟ್ಯಾಕ್ಸ್ ಕಟ್ಟುತ್ತಿಯಾ ಹೇಳು?' ಎಂದು ಗರಂ ಆಗಿ ಪ್ರಶ್ನಿಸಿದ ಘಟನೆ ಮಾಗಡಿಯಲ್ಲಿ ನಡೆದಿದೆ.

ಮಾಗಡಿ ತಾಲೂಕಿನ ಜನಸಂಪರ್ಕ ಸಭೆಯಲ್ಲಿ ಸಂಸದ ಮಾತನಾಡುವ ವೇಳೆ ಬರಪರಿಹಾರ ನೀಡುವಂತೆ ಕೇಳಿದ ರೈತ. ಈ ವೇಳೆ ರೈತನ ಮೇಲೆ ಸಿಟ್ಟಾದ ಸಂಸದ ಡಿ ಕೆ ಸುರೇಶ್, ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಕೊಡ್ತಿದೆ, ಇನ್ನುಳಿದ 5ಕೆಜಿಗೆ ಹಣ ಕೊಡ್ತಿದೆ. ರೈತರ ಪಂಪ್ ಸೆಟ್ ಗೆ ವಿದ್ಯುತ್ ಖರೀದಿ ಮಾಡ್ತಿದೆ. ನಾವು ದಿನಾ ಬೆಳಗಾದ್ರೆ ಜೆಡಿಎಸ್ ನವ್ರು, ಬಿಜೆಪಿ ಅವ್ರ ಕೈಯಲ್ಲಿ ಬೈಸಿಕೊಳ್ಳುತ್ತಿದ್ದೇವೆ. ನೀನಿನ್ನೂ ಅದು ಕೊಡಿ, ಇದು ಕೊಡಿ ಅಂತಿದ್ದೀಯಾ? ನೀನು‌ ಎಷ್ಟು ಟ್ಯಾಕ್ಸ್ ಕಟ್ಟುತ್ತಿದ್ದೀಯ ಹೇಳು ಎಂದು ಪ್ರಶ್ನಿಸಿದ ಸಂಸದ ಮುಂದುವರಿದು,  ನೀನು ಟ್ಯಾಕ್ಸ್ ಕಟ್ಟೋದಿಲ್ಲ. ಟ್ಯಾಕ್ಸ್ ಕಟ್ಟದೇ ಇರೋರಿಗೆಲ್ಲ ಯಾಕೆ ಫ್ರೀ ಕೊಡುತ್ತೀಯಾ ಅಂತಾ ಮೋದಿ ಕೇಳ್ತಿದ್ದಾರೆ. ಮೋದಿ ಯಾರ ಹತ್ತಿರನೂ ಮಾತನಾಡಲ್ಲ‌, ಅವನು ಹೇಳಿದನ್ನ ನೀನು ಕೇಳಿಕೊಳ್ಳಬೇಕು. ನೀನು ಮೋದಿ‌ನೇ ಸರಿ ಅಂದರೆ ನಾನು‌ ಏನು‌ ಮಾಡೋಕಾಗುತ್ತೆ ಎಂದರು.

‘ಅತಂತ್ರ’ ಸ್ಥಿತಿ ನಿಭಾಯಿಸಲು ಇಂದು ಡಿಕೆ ಶಿವಕುಮಾರ ತೆಲಂಗಾಣಕ್ಕೆ!

ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡು ಬೇಡಿಕೆಯನ್ನು ಇಡಬೇಕು. ಎಲ್ಲರಿಗೂ ಆಸೆ ಇದೆ, ಏನು ಕೊಟ್ಟರೂ ಸಾಲೋದಿಲ್ಲ. ಸರ್ಕಾರಿ ನೌಕರರಿಗೂ ಸಮಾಧಾನ ಇಲ್ಲ. ಪಂಚಾಯತ್ ಸದಸ್ಯರು, ಶಾಸಕರು ಸಾಮಾಧಾನವಾಗಿಲ್ಲ. ಬೆಳಗ್ಗೆ ಎದ್ದು ಯಾರು ದುಡಿಮೆ ಮಾಡುತ್ತಾನೋ ಅವನೇ ಸಮಾಧಾನವಾಗಿರೋದು.ಇವತ್ತಿನ‌ ಪರಿಸ್ಥಿತಿ ಬೇರೆ ದಿಕ್ಕಿನಲ್ಲಿ ಸಾಗುತ್ತಿದೆ. ನೀನು ನೆಮ್ಮದಿಯಾಗಿಲ್ಲ, ನಿನಗೆ ದಿನವೂ ಆಸೆ ಜಾಸ್ತಿ ಆಗ್ತಿದೆ ಎಂದು ಜನಸಂಪರ್ಕ ಸಭೆಯಲ್ಲಿ ಬರಪರಿಹಾರ ಕೇಳಿದ ರೈತನಿಗೆ ಸಂಸದ ಡಿಕೆ ಸುರೇಶ್ ತೆಗೆದುಕೊಂಡರು. 

ಜನ ಬೆಲೆ ಏರಿಕೆ ಹೇಗೆ ಎದುರಿಸಬೇಕು? ಇನ್ಫೋಸಿಸ್ ನಾರಾಯಣಮೂರ್ತಿಗೆ ಡಿಕೆಶಿ ಪ್ರಶ್ನೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ