ಆ ಮಹಾನುಭಾವ ಏನಂತ ನನಗೆ ಗೊತ್ತು, ಜಗತ್ತು ನೋಡಲಿ: ಪ್ರದೀಪ್ ಈಶ್ವರ್‌ಗೆ ಸಂಸದ ಸುಧಾಕರ್ ಟಾಂಗ್

Published : Mar 16, 2025, 04:30 PM IST
 ಆ ಮಹಾನುಭಾವ ಏನಂತ ನನಗೆ ಗೊತ್ತು, ಜಗತ್ತು ನೋಡಲಿ: ಪ್ರದೀಪ್ ಈಶ್ವರ್‌ಗೆ ಸಂಸದ ಸುಧಾಕರ್ ಟಾಂಗ್

ಸಾರಾಂಶ

ನೆಲಮಂಗಲದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಪ್ರದೀಪ್ ಈಶ್ವರ್ ಅವರು ಎಲ್ಲಿ ಏನು ಮಾತನಾಡಬೇಕೆಂದು ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.

ನೆಲಮಂಗಲ (ಮಾ.16): ನೆಲಮಂಗಲ (ಮಾ.16): ಅವರ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ನಾನು. ಅವರು ಇಡೀ ರಾಜ್ಯದ ಜನರಿಗೆ ಜ್ಞಾನ ತುಂಬುವ ಮಹಾನ್ ಕೆಲಸ ಮಾಡುತ್ತಾರೆ ಎಂದು ಪರೋಕ್ಷವಾಗಿ ಶಾಸಕ ಪ್ರದೀಪ್ ಈಶ್ವರ್ ಗೆ ಸಂಸದ ಸುಧಾಕರ್ ಟಾಂಗ್ ನೀಡಿದರು.

ಇಂದು ನೆಲಮಂಗಲ ತಾಲೂಕಿನ ಶಿವಗಂಗೆಯ ಮೇಲಣಗವಿ ಮಠದಲ್ಲಿ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಶಿವಗಂಗಾ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾತನಾಡಿದ ಸಂಸದರು, ಅವರು ಏನು ಎಂಬುದು ನನಗೆ ಗೊತ್ತಿದೆ, ಪ್ರಪಂಚ ನೋಡಲಿ ಎಂದು ತಿವಿದರು.

ಇದನ್ನೂ ಓದಿ: ಇದು ಸಿದ್ದರಾಮಯ್ಯ ಸರ್ಕಾರ, Pradeep Eshwar ಅಬ್ಬರ

ಸಾಧು ಸಂತರ, ಪವಾಡ ಪುರುಷರ ಕಾರ್ಯಕ್ರಮ ಅದು, ಪಕ್ಷದ ಕಾರ್ಯಕ್ರಮ ಅಲ್ಲ. ಇಂಥ ಕಾರ್ಯಕ್ರಮದಲ್ಲಿ ರಾಜಕೀಯ ಮಾಡಬಾರದು. ಎಲ್ಲಿ ಏನು ಮಾತನಾಡಬೇಕು ಎಂಬ ತಿಳಿವಳಿಕೆ ಇಲ್ಲದಿದ್ರೆ ಏನಾಗುತ್ತೆ ಅನ್ನೋದಕ್ಕೆ ಇಂಥ ಘಟನೆಗಳು ಸಾಕ್ಷಿ. ಪವಾಡ ಪುರುಷರು, ಸಂತರನ್ನು ಯಾವುದೇ ಸಮುದಾಯ, ಪಕ್ಷಕ್ಕೆ ಸೀಮಿತಗೊಳಿಸಬಾರದು.ಇಡೀ ಮನುಕುಲ್ಲಕ್ಕೆ ಮಾನವೀಯತೆ ಪಾಠ ಹೇಳಿದ್ದಾರೆ. ಎಲ್ಲಾ ಸಮುದಾಯಕ್ಕೆ ಒಳ್ಳೆಯದು ಬಯಸಿದ್ದಾರೆ. ಮಾನವೀಯತೆ ಮೆರಿಬೇಕು ಅಂತ ಹೇಳಿದ್ದಾರೆ. ನಾವು ಅದನ್ನ ಬಿಟ್ಟು ಅವರ ಹೆಸರಲ್ಲಿ ರಾಜಕೀಯ ಮಾಡಬಾರದು. ಅವರು ವಿಶ್ವಮಾನವರಾಗಿ ಅಂತಾ ಹೇಳಿದ್ರೆ ಇವರು ಅಲ್ಪ ಮಾನವರಾಗಲು ಹೊರಟಿದ್ದಾರೆ. ಅವರಿಗೆ(ಪ್ರದೀಪ್ ಈಶ್ವರ್)ಗೆ ತಾತಯ್ಯ ಬುದ್ಧಿ ಕೊಡಲಿ ಎಂದು ಟಾಂಗ್ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್: ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!
ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!