
ಕೊಪ್ಪಳ (ಜ.25): ತಮ್ಮ 'ಅತ್ಯಾ೧ಚಾರ ಸಣ್ಣ ಕೊಲೆ' ಎಂಬ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಕೊಪ್ಪಳದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸಂಸದ ರಾಜಶೇಖರ್ ಹಿಟ್ನಾಳ್, ತಮ್ಮ ಮಾತನ್ನು ಅಂಜನಾದ್ರಿ ಬೆಟ್ಟಕ್ಕೆ ಲಿಂಕ್ ಮಾಡಿ ಸಮರ್ಥಿಸಿಕೊಂಡಿದ್ದಾರೆ. ಒಂದು ಅಹಿತಕರ ಘಟನೆಯನ್ನು ಅತೀಯಾಗಿ ವೈಭವೀಕರಿಸುವುದರಿಂದ ಹನುಮನ ಜನ್ಮಸ್ಥಳವಾದ ಅಂಜನಾದ್ರಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅಂಜನಾದ್ರಿ ಜೊತೆ ತಮಗೆ ಭಾವನಾತ್ಮಕ ಸಂಬಂಧವಿದೆ ಎಂದ ಹಿಟ್ನಾಳ್, ಈ ಪುಣ್ಯಕ್ಷೇತ್ರವನ್ನು ಜಗತ್ತಿಗೆ ಪರಿಚಯಿಸುವುದು ನನ್ನ ಉದ್ದೇಶವೇ ಹೊರತು ಘಟನೆಯನ್ನು ಹಗುರಗೊಳಿಸುವುದಲ್ಲ. ಇಲ್ಲಿ ನಡೆದ ಒಂದು ಘಟನೆಯನ್ನು ದೊಡ್ಡದಾಗಿ ಬಿಂಬಿಸಿದರೆ ಆಂಜನೇಯನ ಭಕ್ತರಿಗೆ ನೋವಾಗುತ್ತದೆ. ಮಾಧ್ಯಮಗಳು ನನ್ನ ಹೇಳಿಕೆಯನ್ನು ಕತ್ತರಿಸಿ ತೋರಿಸದೆ ಸಂಪೂರ್ಣವಾಗಿ ಬಿತ್ತರಿಸಬೇಕು ಎಂದು ಅವರು ಮನವಿ ಮಾಡಿದರು.
ತಮ್ಮ ಹೇಳಿಕೆಯನ್ನು ಖಂಡಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಸಂಸದರು, 'ಬಿಜೆಪಿಯವರು ಯಾಕೆ ಇದನ್ನು ಇಷ್ಟೊಂದು ಖಂಡಿಸುತ್ತಿದ್ದಾರೆ ಎಂಬುದು ಜನರಿಗೆ ಸ್ಪಷ್ಟಪಡಿಸಲಿ' ಎಂದು ಸವಾಲು ಹಾಕಿದರು. ಅಂಜನಾದ್ರಿಯ ಬಗ್ಗೆ ಒಳ್ಳೆಯ ಪ್ರಚಾರ ಮಾಡುವುದನ್ನು ಬಿಟ್ಟು ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ