
ದಾವಣಗೆರೆ, (ನ. 3): ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಬಳಲುತ್ತಿರುವ ಎಂಪಿ ರೇಣುಕಾಚಾರ್ಯ ಅವರು ನಿನ್ನೆ ರಾತ್ರಿ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅನಾರೋಗ್ಯದ ನಡುವೆ ಮಹಿಳಾ ಕ್ರಿಕೆಟ್ ಪಂದ್ಯ ವೀಕ್ಷಿಸಿ ರೇಣುಕಾಚಾರ್ಯ:
ಅನಾರೋಗ್ಯದ ನಡುವೆಯೂ ರೇಣುಕಾಚಾರ್ಯ ಅವರ ಉತ್ಸಾಹ ಕ್ಷೀಣಿಸಿಲ್ಲ. ನಿನ್ನೆ ನಡೆದ ಭಾರತ-ಸೌತ್ ಆಫ್ರಿಕಾ ಮಹಿಳಾ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯವನ್ನು ಅವರು ಬೆಂಬಲಿಗರ ಮೊಬೈಲ್ ಮೂಲಕ ವೀಕ್ಷಿಸಿದರು. ಆಸ್ಪತ್ರೆಯ ವಾರ್ಡ್ನಲ್ಲಿ, ಚಿಕಿತ್ಸೆಯ ಒತ್ತಡದಲ್ಲೂ ಕ್ರಿಕೆಟ್ ಬಗ್ಗೆ ತಮ್ಮ ಅಭಿಮಾನ ತೋರಿಸಿದರು. ಸದ್ಯ ಎಂಪಿ ರೇಣುಕಾಚಾರ್ಯರ ಆರೋಗ್ಯ ಸುಧಾರಿಸುತ್ತಿದೆ ಎಂದು ಮಾಹಿತಿ ಲಭಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ