
ಮೈಸೂರು (ಜು.21) : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿದೆ ಎನ್ನಲಾಗಿರುವ ಹಗರಣ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಕುಟುಂಬಕ್ಕೆ ಜಮೀನು ಮಾರಾಟ ಮಾಡಿದ್ದ ಜಮೀನಿನ ಮೂಲ ಮಾಲೀಕರ ಕುಟುಂಬಸ್ಥರನ್ನು ಬಿಜೆಪಿ ನಿಯೋಗವು ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದೆ.
ಮಾಜಿ ಸಚಿವ ಎನ್.ಮಹೇಶ್(N Mahesh) ನೇತೃತ್ವದಲ್ಲಿ ಮೈಸೂರಿನ ಗಾಂಧಿನಗರದಲ್ಲಿರುವ ಮಲ್ಲಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡರು, ಜಮೀನು ಮಾರಾಟ ವಿಚಾರದ ಕುರಿತಂತೆ ಜಮೀನಿನ ಮೂಲ ಮಾಲೀಕ ದಿ. ಜವರ ಅವರ ಮೊಮ್ಮಗ ಜವರಯ್ಯ, ಅವರ ಪತ್ನಿ ಪುಷ್ಪಾ ಹಾಗೂ ಮಗ ದರ್ಶನ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಬಹುಕೋಟಿ ಹಗರಣ ಮಾಡಿ ರಾಜ್ಯದ ಜನತೆಗೆ ದ್ರೋಹ ಬಗೆದ ಸಿದ್ದು ಸರ್ಕಾರ: ವಿಜಯೇಂದ್ರ ಕಿಡಿ
ಈ ವೇಳೆ ಬಿಜೆಪಿ ನಿಯೋಗದ ಸದಸ್ಯರ ಎದುರು ತಮ್ಮ ಅಳಲು ತೋಡಿಕೊಂಡ ಕುಟುಂಬಸ್ಥರು, ತಮ್ಮ ಕುಟುಂಬಕ್ಕೆ ದೇವರಾಜು ಮೋಸ ಮಾಡಿ ಆಸ್ತಿ ಮಾರಾಟ ಮಾಡಿದ್ದು, ಈ ವಿಚಾರ ತಮ್ಮ ಗಮನಕ್ಕೆ ಬಂದಿಲ್ಲ. ಇದರಿಂದಾಗಿ ನಮಗೆ ಅನ್ಯಾಯವಾಗಿದ್ದು, ನ್ಯಾಯ ಕೊಡಿಸಿಕೊಡುವಂತೆ ಮನವಿ ಮಾಡಿದರು. ಕುಟುಂಬಸ್ಥರ ಸಮಸ್ಯೆ ಆಲಿಸಿದ ಬಿಜೆಪಿ ನಾಯಕರು, ಮನವಿ ಪತ್ರಕ್ಕೆ ಸಹಿ ಹಾಕಿಸಿಕೊಂಡು ನ್ಯಾಯ ಕೊಡಿಸುವ ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ