ಮುಡಾ ಹಗರಣ: ಸೆ.2ಕ್ಕೆ ಸಿದ್ದರಾಮಯ್ಯ ವಿರುದ್ಧದ ದೂರುಗಳ ವಿಚಾರಣೆ

Published : Aug 21, 2024, 11:47 AM IST
ಮುಡಾ ಹಗರಣ: ಸೆ.2ಕ್ಕೆ ಸಿದ್ದರಾಮಯ್ಯ ವಿರುದ್ಧದ ದೂರುಗಳ ವಿಚಾರಣೆ

ಸಾರಾಂಶ

ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಸೈಟ್‌ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಕೆಯಾಗಿರುವ ದೂರುಗಳ ವಿಚಾರಣೆಯನ್ನು ಹೈಕೋರ್ಟ್‌ ಸೂಚನೆ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬರುವ ಸೆ.2ಕ್ಕೆ ಮುಂದೂಡಿದೆ.   

ಬೆಂಗಳೂರು (ಆ.21): ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಸೈಟ್‌ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಕೆಯಾಗಿರುವ ದೂರುಗಳ ವಿಚಾರಣೆಯನ್ನು ಹೈಕೋರ್ಟ್‌ ಸೂಚನೆ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬರುವ ಸೆ.2ಕ್ಕೆ ಮುಂದೂಡಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಮೇರೆಗೆ ವಿಚಾರಣೆಗೆ ಅಂಗೀಕರಿಸುವ ಕುರಿತು ಮಂಗಳವಾರ ಆದೇಶ ಕಾಯ್ದಿರಿಸಲಾಗಿತ್ತು. ಆದರೆ, ಹೈಕೋರ್ಟ್‌ ಇದೇ ತಿಂಗಳು 29ರವರೆಗೆ ಪ್ರಕರಣಕ್ಕೆ ತಡೆ ನೀಡಿರುವ ಕಾರಣ, ಸೆ.2ಕ್ಕೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.

ಸಿದ್ದರಾಮಯ್ಯ ವಿರುದ್ಧ ಆಭಿಯೋಜನೆಗೆ ಅನುಮತಿ ನೀಡಿರುವ ಆದೇಶ ಮತ್ತು ಹೈಕೋರ್ಟ್‌ನ ಸೂಚನೆಯ ಆದೇಶವನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಯಿತು. ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅಂಗೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ವಾದ ಆಲಿಸಿದ ನ್ಯಾಯಾಲಯ ಮಂಗಳವಾರ ಆದೇಶ ನೀಡಲು ಕಾಯ್ದಿರಿಸಿತ್ತು. ಇದೀಗ ಹೈಕೋರ್ಟ್‌ ಸೂಚನೆ ಮೇರೆಗೆ ಮುಂದೂಡಿಕೆ ಮಾಡಲಾಗಿದೆ. ಈ ನಡುವೆ, ಮತ್ತೋರ್ವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ದೂರಿನ ವಿಚಾರಣೆಯು ಬುಧವಾರ ಇದ್ದು, ಅದು ಸಹ ಮುಂದೂಡಿಕೆಯಾಗುವ ಸಾಧ್ಯತೆ ಇದೆ.

ಸಿಎಂ ರಾಜೀನಾಮೆಗೆ ನಳಿನ್‌ ಕುಮಾರ್ ಆಗ್ರಹ: ಕಾಂಗ್ರೆಸ್‌ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಒತ್ತಾಯಿಸಿದ್ದಾರೆ. ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮೂಡಾ ಹಗರಣದಲ್ಲಿ ಸಾವಿರಾರು ಕೋಟಿ ರು. ಲೂಟಿ ಆಗಿದೆ. ವಾಲ್ಮೀಕಿ ನಿಗಮದಲ್ಲೂ 187 ಕೋಟಿ ರು. ಹಗರಣ ಆಗಿದೆ. ಆದರೂ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕಾರದ ಆಸೆಗೆ ಅಂಟಿ ಕುಳಿತುಕೊಂಡಿದ್ದಾರೆ ಎಂದರು.

ನನ್ನ ವಿರುದ್ಧ ಬಿಜೆಪಿಗರ ಸುಳ್ಳು ಆರೋಪ: ಸಿಎಂ ಸಿದ್ದರಾಮಯ್ಯ

ಹೋರಾಟದ ನೆಪದಲ್ಲಿ ಕಾಂಗ್ರೆಸ್‌ ಆರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣವಾಗುತ್ತಿದೆ. ರಾಜ್ಯಪಾಲರ ನಡೆ ಸಮರ್ಥನೀಯವಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ನಿಂದಿಸುತ್ತಿರುವುದು ಕಾಂಗ್ರೆಸ್‌ನ ಹೇಯ ರಾಜಕಾರಣ ಎಂದು ನಳಿನ್‌ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್