
ಕೊಡಗು (ಜು.6): ರಾಜ್ಯದಲ್ಲಿ ವಾಲ್ಮೀಕಿ ನಿಗಮ ಹಗರಣ, ಪೆಟ್ರೋಲ್ ಡೀಸೆಲ್ ದರ ಏರಿಕೆ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ವಿರೋಧಪಕ್ಷಗಳು ಮುಗಿಬಿದ್ದ ಬೆನ್ನಲ್ಲೇ ಇದೀಗ ಮತ್ತೊಂದು ಮುಡಾ ಹಗರಣ ರಾಜ್ಯ ಸರ್ಕಾರವನ್ನು ಹೈರಾಣು ಮಾಡಿದೆ. ಮುಡಾ ಹಗರಣ ವಿಚಾರದಲ್ಲಿ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿವೆ. ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಗರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಮೈಸೂರು ಮುಡಾ ಹಗರಣ(MUDA scam) ವಿಚಾರವಾಗಿ ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೊಡಗು ಸಂಸದ ಯದುವೀರ್ ಒಡೆಯರ್(MP Yaduveer wadeyar) ಪ್ರತಿಕ್ರಿಯಿಸಿದ್ದು, ಇದೊಂದು(MUDA scam) ಗಂಭೀರ ಪ್ರಕರಣವಾಗಿದೆ. ಇದನ್ನ ಸಿಬಿಐ ತನಿಖೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ವಾಲ್ಮೀಕಿ ನಿಗಮ ಹಗರಣ: ಪ್ರಕರಣದಲ್ಲಿ ನಾಗೇಂದ್ರನ ಬಲಿಪಶು ಮಾಡಲಾಗಿದೆ: ಜನಾರ್ದನ ರೆಡ್ಡಿ ವಾಗ್ದಾಳಿ
ಈ ಪ್ರಕರಣದಲ್ಲಿ ಯಾವುದೇ ಪ್ರಭಾವಿಲ್ಲದಂತಹ ಸಂಸ್ಥೆಯಿಂದ ತನಿಖೆ ನಡೆಸುವ ಅಗತ್ಯವಿದೆ ಎಂದಿರುವ ಸಂಸದರು. ಈ ಪ್ರಕರಣವನ್ನು ನಮ್ಮ ಪಕ್ಷವು ಗಂಭೀರವಾಗಿ ಪರಿಗಣಿಸಿದೆ. ಹಗರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರಿಗೆ ನಮ್ಮ ಪಕ್ಷ ಹೋರಾಟ ಮುಂದುವರಿಸುತ್ತೆ. ಈ ಹಗರಣವನ್ನು ಸಿಬಿಐ(CBI)ಗೆ ವಹಿಸಬೇಕು ಎಂದು ನಾನೂ ಕೂಡ ಒತ್ತಾಯ ಮಾಡುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ