'ಒಕ್ಕಲಿಗರು ಸಂಸ್ಕೃತಿಹೀನರು' ಎಂಬ ಕೆಎಸ್ ಭಗವಾನ್ ಹೇಳಿಕೆಗೆ ಮುಖ್ಯಮಂತ್ರಿ ಚಂದ್ರು ಆಕ್ಷೇಪ

Published : Oct 15, 2023, 05:18 PM IST
'ಒಕ್ಕಲಿಗರು ಸಂಸ್ಕೃತಿಹೀನರು' ಎಂಬ ಕೆಎಸ್ ಭಗವಾನ್ ಹೇಳಿಕೆಗೆ ಮುಖ್ಯಮಂತ್ರಿ ಚಂದ್ರು ಆಕ್ಷೇಪ

ಸಾರಾಂಶ

ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ಪ್ರಕರಣ ಪ್ರಸ್ತಾಪಿಸಿದ ಅವರು, ಐಟಿ ರೇಡ್ ಮಾಡಿರುವುದು ಸಂತೋಷ, ಚೆನ್ನಾಗಿದೆ. ಆ ಕಳ್ಳರು ಮಾಡಿದನ್ನ 40% ಅಂತಾ ಈ ಕಳ್ಳರು ಎತ್ತಿ ಹಿಡಿದರು. ಈ ಕಳ್ಳರು ಮಾಡಿದ್ದನ್ನ ಅವರು ಎತ್ತಿ ಹಿಡಿಯುತ್ತಿದ್ದಾರೆ. ಒಟ್ಟಿನಲ್ಲಿ ಇಬ್ಬರೂ ಕಳ್ಳರು ಎಂದು ಕಾಂಗ್ರೆಸ್-ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ವಿಜಯಪುರ (ಅ.15): ಮತ್ತೊಬ್ಬರಿಗೆ ನೋವಾಗುವಂತೆ ಮಾತನಾಡುವುದು ತಪ್ಪು. ಅದು ಯಾರೇ ಮಾತನಾಡಿದ್ರು ತಪ್ಪು ಎಂದು ಹಿರಿಯ ನಟ, ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಮಹಿಷಾ ದಸರಾ ವೇಳೆ ಒಕ್ಕಲಿಗರ ಕುರಿತು ಕೆಎಸ್‌ ಭಗವಾನ್ ಅವಹೇಳನಕಾರಿ ಮಾತು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಎಲ್ಲರಿಗೂ ತಮ್ಮದೇ ಆದ ಗೌರವ ಇದೆ. ಬೇರೆಯವರ ನಂಬಿಕೆಗಳನ್ನು ಟೀಕೆ ಮಾಡಬಾರದು, ವ್ಯಾಖ್ಯಾನಿಸುವಾಗ ಯಾರಿಗೂ ನೋವಾಗಬಾರದು ಎಂದು ಕೆಎಸ್‌ ಭಗವಾನ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.

ನಮ್ಮದು ಒಕ್ಕೂಟ ವ್ಯವಸ್ಥೆ. ಇಲ್ಲಿ ವಿಭಿನ್ನ ಧರ್ಮ, ಜೀವನ ಪದ್ದತಿಗಳಿವೆ. ದೇವರಲ್ಲಿ ಮಾಂಸಾಹಾರಿ ದೇವರಿಗಳಿವೆ ಹಾಗೇ ಸಸ್ಯಾಹಾರಿ ದೇವರುಗಳಿವೆ. ನಾಜ್ ವೆಜ್ ದೇವರು ಅಂತಾ ಮಡಿಗಿಡಿ ಅನ್ನೋಕೆ ಆಗತ್ತಾ? ಪದ್ಧತಿಗಳನ್ನ ಟೀಕೆ ಮಾಡೋದಕ್ಕಿಂತ ಅವರವರ  ಧರ್ಮಗಳಿಗೆ ಬಿಟ್ಟು ಬಿಡಬೇಕು ಎಂದರು ಅಭಿಪ್ರಾಯಪಟ್ಟರು.

ಎನ್‌ಡಿಎ ಆಡಳಿತ ಕೊನೆಗಾಣಿಸಲು ಇಂಡಿಯಾ ಕೂಟದಲ್ಲಿ ಭಾಗಿ: ಮುಖ್ಯಮಂತ್ರಿ ಚಂದ್ರು

ಇನ್ನು ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ಪ್ರಕರಣ ಪ್ರಸ್ತಾಪಿಸಿದ ಅವರು, ಐಟಿ ರೇಡ್ ಮಾಡಿರುವುದು ಸಂತೋಷ, ಚೆನ್ನಾಗಿದೆ. ಆ ಕಳ್ಳರು ಮಾಡಿದನ್ನ 40% ಅಂತಾ ಈ ಕಳ್ಳರು ಎತ್ತಿ ಹಿಡಿದರು. ಈ ಕಳ್ಳರು ಮಾಡಿದ್ದನ್ನ ಅವರು ಎತ್ತಿ ಹಿಡಿಯುತ್ತಿದ್ದಾರೆ. ಒಟ್ಟಿನಲ್ಲಿ ಇಬ್ಬರೂ ಕಳ್ಳರು ಎಂದು ಕಾಂಗ್ರೆಸ್-ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಗೆ ರಾಜ್ಯವಾಳುವ ಅರ್ಹತೆ ಇಲ್ಲ. ಮೂರು ಪಾರ್ಟಿಗಳು ಅವೇ ಇವೆ. ಅಧಿಕಾರಕ್ಕೆ ಬಂದಾಗೆಲ್ಲ ಹಗರಣ, ಲೂಟಿ ಮಾಡೋದೇ ಕಾಯಕ. ಮೂರನೇಯದ್ದು ಯಾವಾಗ ಬರುತ್ತೋ ನೋಡೋಣ. ಜೆಡಿಎಸ್ ಬಿಜೆಪಿಯೊಂದಿಗೆ ಸೇರಿರುವುದರಿಂದ ಈಗ ರೇಡ್ ಆಗದೇ ಇರಬಹುದು ಮುಂದೆ ಆಗಬಹುದು ನೋಡೋಣ ಎಂದು ಜೆಡಿಎಸ್ ವಿರುದ್ಧವೂ ವಾಗ್ದಾಳಿ ಚಂದ್ರು. 

 

ಎಎಪಿ ರಾಜ್ಯದಲ್ಲಿ ಪರ್ಯಾಯ ಶಕ್ತಿಯಾಗಿ ಉದಯವಾಗಲಿದೆ: ಮುಖ್ಯಮಂತ್ರಿ ಚಂದ್ರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಿಳಾ ನೌಕರರಿಗೆ ಬ್ಯಾಡ್ ನ್ಯೂಸ್: ಮುಟ್ಟಿನ ರಜೆಗೆ ಹೈಕೋರ್ಟ್ ತಡೆ: ಸರ್ಕಾರದ ಆದೇಶಕ್ಕೆ ಹಿನ್ನಡೆ?
ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?