Mullugadduge Karnika Predicts: ಈ ಬಾರಿ ಉತ್ತಮ ಮಳೆ, ಭರ್ತಿಯಾಗಲಿವೆ ಕೆರೆ-ಕಟ್ಟೆಗಳು -ಮುಳ್ಳುಗದ್ದುಗೆ ಕಾರ್ಣಿಕ

Kannadaprabha News, Ravi Janekal |   | Kannada Prabha
Published : Feb 17, 2026, 06:54 AM IST
Mullugadduge Karnika Predicts Abundant Rainfall and Overflowing Lakes This Year

ಸಾರಾಂಶ

ದಾವಣಗೆರೆ ಜಿಲ್ಲೆಯ ಕೆಂಗಾಪುರದಲ್ಲಿ ರಾಮಲಿಂಗೇಶ್ವರರ 50ನೇ ಮುಳ್ಳುಗದ್ದುಗೆ ಉತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಮುಳ್ಳುಗದ್ದುಗೆ ಮೇಲೆ ಕುಳಿತು ನರ್ತಿಸಿದ ರಾಮಲಿಂಗೇಶ್ವರ ಸ್ವಾಮೀಜಿ, ಉತ್ತಮ ಮಳೆ-ಬೆಳೆಯ ಜೊತೆಗೆ ಪ್ರಯಾಣದಲ್ಲಿ ಎದುರಾಗುವ ದುರಂತಗಳ ಬಗ್ಗೆ ಎಚ್ಚರಿಸುವ ಕಾರ್ಣಿಕ ನುಡಿದರು.

ದಾವಣಗೆರೆ (ಫೆ.17): ಮಹಾಶಿವರಾತ್ರಿ ಮಾರನೇ ದಿನ ಸೋಮವಾರ ರಾಮಲಿಂಗೇಶ್ವರರ 50ನೇ ವರ್ಷದ ಮುಳ್ಳುಗದ್ದುಗೆ ಉತ್ಸವದ ಐತಿಹಾಸಿಕ ಜಾತ್ರೆ ಶ್ರದ್ಧಾಭಕ್ತಿಯಿಂದ ನೆರವೇರಿತು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಕೆಂಗಾಪುರ ಗ್ರಾಮದಲ್ಲಿ ಪ್ರತಿ ವರ್ಷ ರಾಮಲಿಂಗೇಶ್ವರ ಮಠದ ರಾಮಲಿಂಗೇಶ್ವರ ಸ್ವಾಮೀಜಿ ಅವರು ಮುಳ್ಳುಗದ್ದುಗೆ ಪಲ್ಲಕ್ಕಿ ಮೇಲೆ ಕುಳಿತು, ವಿಭಿನ್ನವಾಗಿ ನರ್ತಿಸುತ್ತಾರೆ. ಸ್ವಾಮೀಜಿ ಸಲ್ಲಿಸುವ ಇಂತಹ ಮೈನವಿರೇಳಿಸುವ ಭಕ್ತಿಯ ಪರಾಕಾಷ್ಠೆಯಿಂದಲೇ ಜನಮಾನಸದಲ್ಲಿ ಕೆಂಗಾಪುರ ಜಾತ್ರೆ ಗಮನ ಸೆಳೆಯುತ್ತದೆ.

ಮುಳ್ಳುಗದ್ದುಗೆ ಮೇಲೆ ಆಸೀನರಾಗಿ ಕಾರ್ಣೀಕ ನುಡಿದ ರಾಮಲಿಂಗೇಶ್ವ ಸ್ವಾಮೀಜಿ, ‘ಕಾರ್ಮೋಡ ಕವಿದೀತು, ಅಂತರಂಗದ ಪಕ್ಷಿ ಹಾರೀತು, ಕೆರೆ ಕಟ್ಟೆಗಳು ತುಂಬಿ ಹರಿದಾವು ಪರಾಕ್’ ಎಂಬುದಾಗಿ ರಾಮಲಿಂಗೇಶ್ವ ಸ್ವಾಮೀಜಿ 2026ನೇ ಸಾಲಿನ ಮುಳ್ಳುಗದ್ದುಗೆ ಉತ್ಸವದ ಶುಭ, ಸಮೃದ್ಧಿ ಜೊತೆಗೆ ಜನರನ್ನು ಎಚ್ಚರಿಸುವ ಕಾರ್ಣಿಕ ನುಡಿದರು.

ಈ ಸಲ ಉತ್ತಮ ಮಳೆಯಾಗಿ, ಕೆರೆ-ಕಟ್ಟೆ ತುಂಬಿ ತುಳುಕುತ್ತವೆ. ಉತ್ತಮ ಬೆಳೆಯೂ ಬರಲಿದೆ. ಜನರಿಗೆ ಪ್ರಯಾಣದಲ್ಲಿ ಸಾಕಷ್ಟು ದುರಂತ ಸಂಭವಿಸಿ, ಸಾವು-ನೋವು ಸಂಭವಿಸುವ ಸಾಧ್ಯತೆಯೂ ಇದೆ. ಪ್ರಯಾಣದಲ್ಲಿ ನಿಧಾನ ಸೂಕ್ತ, ಎಲ್ಲರಿಗೂ ಇದು ಅನ್ವಯ ಎಂದು ಕಾರ್ಣಿಕ ನುಡಿ ವಿಶ್ಲೇಷಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಹುಬ್ಬಳ್ಳಿ ನೇಹಾ ಹಿರೇಮಠ ಪ್ರಕರಣದ ಆರೋಪಿ ಫಯಾಜ್‌ನ ಬೇಲ್ 3ನೇ ಬಾರಿ ವಜಾ
ಬಾಲವು ನಾಯಿಯನ್ನು ಅಲ್ಲಾಡಿಸಲು ಸಾಧ್ಯವಿಲ್ಲ : ಸಚಿವ ಮಹದೇವಪ್ಪ