ಮುರುಘಾ ಶ್ರೀ ಫೋಕ್ಸೋ ಕೇಸ್: 2ನೇ ಆರೋಪಿ ಲೇಡಿ ವಾರ್ಡನ್‌ ಪೊಲೀಸ್ ಕಸ್ಟಡಿಗೆ

Published : Sep 06, 2022, 07:20 PM ISTUpdated : Sep 06, 2022, 07:21 PM IST
ಮುರುಘಾ ಶ್ರೀ ಫೋಕ್ಸೋ ಕೇಸ್: 2ನೇ ಆರೋಪಿ ಲೇಡಿ ವಾರ್ಡನ್‌ ಪೊಲೀಸ್ ಕಸ್ಟಡಿಗೆ

ಸಾರಾಂಶ

ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಫೋಕ್ಸೋ ಪ್ರರಕರಣ ಎರಡನೇ ಆರೋಪಿಗೆ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಚಿತ್ರದುರ್ಗ, (ಸೆಪ್ಟೆಂಬರ್. 06): ಲೈಂಗಿಕ ದೌರ್ಜನ್ಯ ಪ್ರಕರಣದಡಿ ಮುರುಘಾ ಮಠದ ಶರಣರು ಈಗಾಗಲೇ ಜೈಲು ಪಾಲಾಗಿದ್ದಾರೆ. ಇದೀಗ ಇದೇ ಪ್ರಕರಣದ ಎರಡನೇ ಆರೋಪಿ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ಅವರಿಗೆ ​ ಸೆ.8ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ  ಚಿತ್ರದುರ್ಗ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಶಿವಮೊಗ್ಗ ಜೈಲಿನಲ್ಲಿದ್ದ ಮಹಿಳಾ ವಾರ್ಡನ್​ ನನ್ನು ಚಿತ್ರದುರ್ಗ ಪೊಲೀಸರು ​ಏಳು ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಆದ್ರೆ, ಕೋರ್ಟ್ ಎರಡು ದಿನ ಮಾತ್ರ ಪೊಲಿಸ್ ಕಸ್ಟಡಿಗೆ ನೀಡಿದೆ. ಪೊಲೀಸರು ಮಹಿಳಾ ವಾರ್ಡನ್​ ಮಹಿಳಾ ಸಾಂತ್ವನ ಕೇಂದ್ರದಲ್ಲಿ ವಿಚಾರಣೆ ನಡೆಸಲಿದ್ದಾರೆ.

ನಮ್ಮಂಥವರಿಗೆ ಬುದ್ಧಿ ಹೇಳುವ ನೀವೇ ಹೀಗಾದ್ರೆ ಹೇಗೆ? ವಿಚಾರಾಣಾಧೀನ ಖೈದಿಗಳ ಪ್ರಶ್ನೆಗೆ ಶ್ರೀಗಳ ಉತ್ತರವಿದು

5ನೇ ಆರೋಪಿ ಗಂಗಾಧರಯ್ಯ ಪೊಲೀಸರಿಗೆ ಶರಣು
ಮುರಾಘಾ ಮಠದ ಶಿವಮೂರ್ತಿ ಮುರುಘಾ ಶರಣ ವಿರುದ್ಧ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣದ 5ನೇ ಆರೋಪಿಗೆ ಪೊಲೀಸರಿಗೆ ಶರಣಾಗಿದ್ದಾರೆ.

ಈ ಪ್ರಕರಣದ 5ನೇ (A5) ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ (ಸೆ, 6) ಪೊಲೀಸರಿಗೆ ಶರಣಾಗಿದ್ದಾರೆ. ಚಿತ್ರದುರ್ಗದ ಡಿವೈಎಸ್​ಪಿ ಕಚೇರಿಯಲ್ಲಿ ಗಂಗಾಧರಯ್ಯ ವಿಚಾರಣೆ ನಡೆಸಿ, ತನಿಖಾಧಿಕಾರಿ ಸೂಚಿಸಿದಾಗ ಬರಲು ಸೂಚನೆ ನೀಡಿ ವಾಪಸ್ ಕಳುಹಿಸಲಾಗಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ  ಕೆ.ಪರಶುರಾಮ್  ಮಾಹಿತಿ ನೀಡಿದ್ದಾರೆ..

ಏನಿದು ಪ್ರಕರಣ?: ಮುರುಘಾಮಠದ ಆವರಣದಲ್ಲಿದ್ದ ಅಕ್ಕಮಹಾದೇವಿ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ಬಾಲಕಿಯರು ತಮ್ಮ ಮೇಲೆ ಶರಣರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಒಡನಾಡಿ ಸಂಸ್ಥೆಯ ನೆರವಿನಿಂದ ಮೈಸೂರಿನ ನಜರ್‌ಬಾದ್‌ ಠಾಣೆಗೆ ದೂರು ನೀಡಿದ್ದರು. ಅದರಂತೆ ಶ್ರೀಗಳು, ಅಕ್ಕಮಹಾದೇವಿ ಹಾಸ್ಟೆಲ್‌ನ ವಾರ್ಡನ್‌, ಕಿರಿಯ ಶ್ರೀಗಳು ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೃತ್ಯ ನಡೆದ ಸ್ಥಳ, ಆರೋಪಿಗಳು ಮತ್ತು ಬಾಲಕಿಯರು ಚಿತ್ರದುರ್ಗ ಜಿಲ್ಲೆಗೆ ಸೇರಿದವರಾಗಿದ್ದರಿಂದ ಈ ಪ್ರಕರಣವನ್ನು ಚಿತ್ರದುರ್ಗ ಜಿಲ್ಲೆಗೆ ವರ್ಗಾಯಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬೀದಿ ನಾಯಿಗಳಿಗೆ ಪ್ರತಿನಿತ್ಯ 2 ಬಾರಿ ಚಿಕನ್‌ ರೈಸ್‌ !
ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!