
ತುಮಕೂರು (ಆ.15) ಇಂದು ದೇಶಾದ್ಯಂತ ಜಾತಿ ಮತ ಧರ್ಮವೆನ್ನದೆ ಎಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಅಂತೆಯೇ ತುಮಕೂರಿನ ಗೂಡ್ಶೆಡ್ ಕಾಲೋನಿ ಮುಸಲ್ಮಾನ ಬಾಂಧವರು ಮಸೀದಿ ಮೇಲೆ ತ್ರಿವರ್ಣಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ದಿನಾಚಣೆಯನ್ನ ಸಂಭ್ರಮದಿಂದ ಆಚರಿಸಿದರು.
ಗೂಡ್ಶೆಡ್ ಕಾಲೋನಿಯಲ್ಲಿರುವ ಮೀನಾ ಮಸೀದಿ. ಸ್ವಾತಂತ್ರ್ಯೋತ್ಸವ ದಿನಕ್ಕೆ ನಿನ್ನೆಯಿಂದಲೇ ಭರ್ಜರಿ ಸಿದ್ಧತೆ ನಡೆಸಿದ್ದ ಮಸೀದಿ ಆಡಳಿತ ಮಂಡಳಿ. ಅಂತೆಯೇ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧೀಜಿ,ಅಂಬೇಡ್ಕರ್ ಭಾವಚಿತ್ರಕ್ಕೆ ದೀಪ ಬೆಳಗುವ ಮೂಲಕ ಮುಸ್ಲಿಂ ಬಾಂಧವರು ಧ್ವಜಾರೋಹಣ ಮಾಡಿದರು. ಈ ವೇಳೆ ಮಕ್ಕಳು ಕೈಯಲ್ಲಿ ಧ್ವಜ ಹಿಡಿದು ಧ್ವಜಾರೋಹಣ ವೇಳೆ ರಾಷ್ಟ್ರಗೀತೆ ಹಾಡಿ ಸಂಭ್ರಮಿಸಿದರು.
ದೇಶದ ಅಭಿವೃದ್ಧಿ ದೃಷ್ಟಿಯಿಂದ ಗ್ಯಾರಂಟಿ ಯೋಜನೆ ಜಾರಿ: ಸಿಎಂ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ