
ಬೆಂಗಳೂರು(ನ.29): ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಗುಪ್ತ ಚರ್ಚೆಗಳ ನಡುವೆಯೇ, ಮುಸ್ಲಿಂ ಸಮುದಾಯದ ಮುಖಂಡರೊಬ್ಬರು ನೇರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರವಾಗಿ ಬ್ಯಾಟ್ ಬೀಸಿದ್ದಾರೆ. ಮುಸ್ಲಿಂ ಮುಖಂಡ ಸಾದಿಕ್ ಅವರು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಡಿಕೆಶಿಗೆ ಅಧಿಕಾರ ಹಸ್ತಾಂತರ ಮಾಡದಿದ್ದರೆ ಮುಸ್ಲಿಂ ಸಮುದಾಯ ಮುಂದಿನ ಚುನಾವಣೆಯಲ್ಲಿ ಯೋಚನೆ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಸಾದಿಕ್ ಅವರು ತಮ್ಮ ವಿಡಿಯೋ ಹೇಳಿಕೆಯಲ್ಲಿ ಮುಸ್ಲಿಂ ಸಮುದಾಯದ ವೋಟ್ ಬ್ಯಾಂಕ್ ಕುರಿತು ಸ್ಪಷ್ಟ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ಅವರ ಮುಖ ನೋಡಿ ಮುಸ್ಲಿಮರು 2023ರ ವಿಧಾನಸಭಾ ಚುನಾವಣೆಯಲ್ಲಿ ವೋಟ್ ಮಾಡಿಲ್ಲ. ಬದಲಾಗಿ, ನಾವು ಡಿಕೆ ಶಿವಕುಮಾರ್ ಅವರ ಮುಖ ನೋಡಿ ವೋಟ್ ಮಾಡಿದ್ದೇವೆ. ಮುಸ್ಲಿಮರ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಡಿಕೆಶಿ ಅವರು ನಮಗೆ ಮಾತು ಕೊಟ್ಟಿದ್ದರು ಎಂದು ಸಾದಿಕ್ ಹೇಳಿದ್ದಾರೆ.
ಮುಸ್ಲಿಮರು ವೋಟು ಹಾಕಿದ್ದು ಡಿಕೆ ಶಿವಕುಮಾರ್ ಅವರ ಮುಖ ನೋಡಿ ಆದರೆ, ರೆಡಿಮೇಡ್ ಆಗಿ ಸಿಕ್ಕ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲಾಗಿದೆ ಎಂದು ಅವರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ ಸಾದಿಕ್ ಅವರು, ಡಿಕೆ ಶಿವಕುಮಾರ್ ಅವರನ್ನ ಉಳಿದ ಅವಧಿಗೆ ಮುಖ್ಯಮಂತ್ರಿ ಮಾಡದಿದ್ರೆ ನಾವು ಯೋಚಿಸಬೇಕಾಗುತ್ತೆ ಎಂದು ನೇರವಾಗಿ ಕಾಂಗ್ರೆಸ್ ಹೈಕಮಾಂಡ್ಗೆ ಗಡುವು ನೀಡಿದಂತಿದೆ. ಇದರ ಜೊತೆಗೆ, ಮುಸ್ಲಿಂ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿರುವ ಅವರು, 'ಮುಸ್ಲಿಂ ಎಂಎಲ್ಎಗಳಲ್ಲಿ ಒಬ್ಬರನ್ನು ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಕ್ಕೆ ನೇಮಕ ಮಾಡಬೇಕು' ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ