ನಾಳೆ ಬೆಳಗ್ಗೆ 11 ಗಂಟೆಗೆಲ್ಲ ಸ್ಟೇಡಿಯಂ ಒಳಗೆ ಇರಬೇಕು: ಬಿಜೆಪಿ ಜೆಡಿಎಸ್ ನಾಯಕರಿಗೂ ಆಹ್ವಾನಿಸಿದ ಡಿಕೆಶಿ

Published : May 19, 2023, 11:28 AM ISTUpdated : May 19, 2023, 11:30 AM IST
ನಾಳೆ ಬೆಳಗ್ಗೆ 11 ಗಂಟೆಗೆಲ್ಲ ಸ್ಟೇಡಿಯಂ ಒಳಗೆ ಇರಬೇಕು: ಬಿಜೆಪಿ ಜೆಡಿಎಸ್ ನಾಯಕರಿಗೂ ಆಹ್ವಾನಿಸಿದ ಡಿಕೆಶಿ

ಸಾರಾಂಶ

ನಾಳೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದೆ ಈ ಹಿನ್ನೆಲೆ ಐತಿಹಾಸಿಕ ಕಾರ್ಯಕ್ರಮ ನಡೆಯಲಿದ್ದು ನೀವೆಲ್ಲರೂ ಬೆಳಗ್ಗೆ 11 ಗಂಟೆಯೊಳಗೆ ಕಂಠೀರವ ಸ್ಟೇಡಿಯಂನಲ್ಲಿರಬೇಕು ಎಂದು ಮಾಧ್ಯಮಗಳ ಮೂಲಕ ರಾಜ್ಯದ ಜನತೆಗೆ ಆಹ್ವಾನ ಕೊಟ್ಟ. ನಿಯೋಜಿತ ಡಿಸಿಎಂ ಡಿಕೆ ಶಿವಕುಮಾರ.

ಬೆಂಗಳೂರು (ಮೇ.19) ನಾಳೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದೆ ಈ ಹಿನ್ನೆಲೆ ಐತಿಹಾಸಿಕ ಕಾರ್ಯಕ್ರಮ ನಡೆಯಲಿದ್ದು ನೀವೆಲ್ಲರೂ ಬೆಳಗ್ಗೆ 11 ಗಂಟೆಯೊಳಗೆ ಕಂಠೀರವ ಸ್ಟೇಡಿಯಂನಲ್ಲಿರಬೇಕು ಎಂದು ಮಾಧ್ಯಮಗಳ ಮೂಲಕ ರಾಜ್ಯದ ಜನತೆಗೆ ಆಹ್ವಾನ ಕೊಟ್ಟ. ನಿಯೋಜಿತ ಡಿಸಿಎಂ ಡಿಕೆ ಶಿವಕುಮಾರ.

ನಾಳೆಯ ಕಾರ್ಯಕ್ರಮಕ್ಕೆ ರಾಷ್ಟ್ರದ ನಾಯಕರು ಬರ್ತಾರೆ. ನೀವೂ ಬರಬೇಕು. ರಾಜ್ಯದ ಮುಖಂಡರಿಗೆ ಮನವಿ ಮಾಡ್ತೀವಿ. ಜೆಡಿಎಸ್, ಬಿಜೆಪಿ ನಾಯಕರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನಿಸಿ ಬರುವಂತೆ ಮನವಿ ಮಾಡ್ತೇವೆ ಎಂದರು.

ಇದು ಸರ್ಕಾರದ ಕಾರ್ಯಕ್ರಮ ಹಾಗಾಗಿ ಎಲ್ಲರೂ ಬರಬೇಕು ಎಂದರು. ಇದೇ ವೇಳೆ ನಾನು, ಸಿದ್ದರಾಮಯ್ಯ ದೆಹಲಿಗೆ ಹೋಗುತ್ತಿದ್ದೇವೆ. ಕ್ಯಾಬಿನೆಟ್ ಬಗ್ಗೆ ಪಕ್ಷದ ನಾಯಕರೊಂದಿಗೆ ಚರ್ಚಿಸಲಿದ್ದೇವೆ. ಚುನಾವಣೆಯಲ್ಲಿ ನಾವು ಜನತೆಗೆ ಗ್ಯಾರೆಂಟಿ ಕೊಟ್ಟಿದ್ದೇವೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ(Siddaramaiah) ನಾವು ರಾಜ್ಯದ ಜನರಿಗೆ ಗ್ಯಾರೆಂಟಿ ಕೊಟ್ಟಿದ್ದೇವೆ. ಕೊಟ್ಟ ಮಾತನ್ನು ಈಡೇರಿಸುತ್ತೇವೆ.  ಕಾಂಗ್ರೆಸ್ ಪಕ್ಷದ ಗ್ಯಾರಂಟಿ(Congress Guarentee) ಕಾರ್ಯಕ್ರಮಗಳನ್ನು ಜಾರಿ ಮಾಡುತ್ತೇವೆ ಎಂದು ಭರವಸೆ ನೀಡಿದ ಡಿಕೆ ಶಿವಕುಮಾರ.(DK Shivakumar)

Karnataka CM: ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನಗರ ಪೊಲೀಸ್ ಇಲಾಖೆ ಭರ್ಜರಿ ಮ್ಯಾಪಿಂಗ್!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜೈಲಿನಲ್ಲಿಯೂ 'ಡಿ ಬಾಸ್' ದರ್ಬಾರ್: ಮಲಗಿದ್ದ ಸಹ ಕೈದಿಗಳನ್ನು ಕಾಲಿನಿಂದ ಒದ್ದು ನಟ ದರ್ಶನ್ ದರ್ಪ
CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ