
ಬೆಂಗಳೂರು, (ಏ.20): ರಾಜ್ಯದಲ್ಲಿ ಕೊರೋನಾ 2ನೇ ಅಲೆ ನಿಯಂತ್ರಣ ಹಿನ್ನೆಲೆ ರಾಜ್ಯಪಾಲ ವಜೂಭಾಯ್ ವಾಲಾ ನೇತೃತ್ವದಲ್ಲಿ ವರ್ಚುವಲ್ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಹಲವು ನಾಯಕರು ಭಾಗಿಯಾಗಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಸಭೆಯ ನಡೆಯುತ್ತಿದ್ದು, ಸಭೆಯಲ್ಲಿ ಹಲವರು ತಮ್ಮ-ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಕೆಲ ಕಾಂಗ್ರೆಸ್ ನಾಯಕರು ಲಾಕ್ಡೌನ್ ಬೇಡ ಅದರ ಬದಲಿಗೆ ಬೇರೆ ಮಾರ್ಗ ನೋಡಿ ಎಂದು ಸಲಹೆ ಕೊಟ್ಟಿದ್ದಾರೆ. ಆದ್ರೆ, ಎಚ್ಡಿ ಕುಮಾರಸ್ವಾಮಿ ಮಾತ್ರ ಅಚ್ಚರಿ ಸಲಹೆ ಕೊಟ್ಟಿದ್ದಾರೆ.
ಬೆಂಗ್ಳೂರಲ್ಲಿ ಕೈಮೀರಿದ ಕೊರೋನಾ, ರಸ್ತೆಯಲ್ಲೇ ವ್ಯಕ್ತಿಯ ನರಳಾಟ
ಹೌದು....ಕೊರೋನಾ ಸೋಂಕಿನಿಂದ ಅಪೋಲೋ ಆಸ್ಪತ್ರೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಿರುವ ಎಚ್ಡಿ ಕುಮಾರಸ್ವಾಮಿ, ಲಾಕ್ಡೌನ್ ಮಾಡುವುದು ಸದ್ಯದ ಪರಿಸ್ಥಿತಿಯಲ್ಲಿ ಅಗತ್ಯವಾಗಿದ್ದು, ನೈಟ್ ನೈಟ್ ಕರ್ಫ್ಯೂ ಜಾರಿ ಮಾಡಿರುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಜೀವ ಉಳಿಸೋದು ರಾಜ್ಯ ಸರ್ಕಾರದ ಕರ್ತವ್ಯ. ನಾನು ಯಾರ ಬಗ್ಗೆಯೂ ಸಹ ಆಕ್ಷೇಪ ಮಾಡಲ್ಲ. ಈ ಹಿಂದೆ ಲಾಕ್ ಡೌನ್ ಮಾಡಿದ್ದರಿಂದ ಸ್ವಲ್ಪ ಪ್ರಕರಣ ಕಡಿಮೆ ಆಯ್ತು. ಆರ್ಥಿಕ ಸಂಕಷ್ಟದ ಪರಿಸ್ಥಿತಿ ಕಷ್ಟ ಆಯ್ತು. ಈಗ ಲಾಕ್ ಡೌನ್ ಮಾಡುವ ಅಗತ್ಯ ಇದೆ. ಬೆಂಗಳೂರು, ಮೈಸೂರು, ದಾವಣಗೆರೆ, ಬೀದರ್, ಕಲಬುರಗಿ ಸೇರಿದಂತೆ ದೊಡ್ಡ ನಗರಗಳಲ್ಲಿ ಲಾಕ್ ಡೌನ್ ತಕ್ಷಣ ಮಾಡಿ ಎಂದು ಕುಮಾರಸ್ವಾಮಿ ಅವರು ತಮ್ಮ ವೈಯಕ್ತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಏನೆಲ್ಲ ಟಫ್ ರೂಲ್ಸ್ ಜಾರಿಯಾಗುತ್ತೆ?
ಎಲ್ಲರೂ ಲಾಕ್ಡೌನ್ ಬೇಡ ಅಂದ್ರೆ ಕುಮಾರಸ್ವಾಮಿ ಅವರು ಮಾತ್ರ ಲಾಕ್ಡೌನ್ ಬಗ್ಗೆ ಒಲವು ತೋರಿರುವುದು ಅಚ್ಚರಿಗೆ ಕಾರಣವಾಗಿದೆ.
ಒಟ್ಟಿನಲ್ಲಿ ಕಳೆದ ಎರಡು ಗಂಟೆಗಳಿಂದ ಸಭೆ ನಡೆಯುತ್ತಿದ್ದು, ಕೊನೆಯಲ್ಲಿ ಸರ್ಕಾರ ಏನು ಅಂತಿಮ ನಿರ್ಧಾರ ಕೈಗೊಳ್ಳುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ