ಮುತ್ತಪ್ಪ ರೈ ಮೃತಪಟ್ಟ ಬೆನ್ನಲ್ಲೇ ಶುರುವಾಯ್ತು ಆಸ್ತಿ ವಿವಾದ: ನನಗೂ ಪಾಲು ಕೊಡಿ ಎಂದ ಮಾಜಿ ಡಾನ್‌ ಪತ್ನಿ

Suvarna News   | Asianet News
Published : Jul 09, 2020, 01:09 PM ISTUpdated : Jul 09, 2020, 01:31 PM IST
ಮುತ್ತಪ್ಪ ರೈ ಮೃತಪಟ್ಟ ಬೆನ್ನಲ್ಲೇ ಶುರುವಾಯ್ತು ಆಸ್ತಿ ವಿವಾದ: ನನಗೂ ಪಾಲು ಕೊಡಿ ಎಂದ ಮಾಜಿ ಡಾನ್‌ ಪತ್ನಿ

ಸಾರಾಂಶ

ಆಸ್ತಿಯಲ್ಲಿ ವಿಭಾಗ ಕೋರಿ ಮುತ್ತಪ್ಪ ರೈ ಅವರ ದ್ವಿತೀಯ ಪತ್ನಿ ಅನುರಾಧಾ ಸಿವಿಲ್ ಕೋರ್ಟ್‌ಗೆ ಅರ್ಜಿ| ಮುತ್ತಪ್ಪ ರೈ ಪುತ್ರ ರಾಕಿ, ರಿಕ್ಕಿ ಸೇರಿ 17 ಪ್ರತಿವಾದಿಗಳಿಗೆ ನೋಟಿಸ್| ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ನಿಂದ ನೋಟಿಸ್|

ಬೆಂಗಳೂರು(ಜು.09): ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಮೃತಪಟ್ಟ ಬೆನ್ನಲ್ಲೇ ಆಸ್ತಿ ವಿವಾದ ಶುರುವಾಗಿದೆ. ಹೌದು, ಆಸ್ತಿಯಲ್ಲಿ ಪಾಲು ಕೋರಿ ಮುತ್ತಪ್ಪ ರೈ ಅವರ ದ್ವಿತೀಯ ಪತ್ನಿ ಅನುರಾಧಾ ಅವರು ನಗರದ ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 

ಈ ಸಂಬಂಧ ಸಿವಿಲ್ ನ್ಯಾಯಾಲಯ ಮುತ್ತಪ್ಪ ರೈ ಪುತ್ರ ರಾಕಿ, ರಿಕ್ಕಿ ಸೇರಿ 17 ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯನ್ನ ಆಗಸ್ಟ್ 4 ಕ್ಕೆ ನ್ಯಾಯಾಲಯ ನಿಗದಿ ಪಡಿಸಿದೆ. 
ಮುತ್ತಪ್ಪ ರೈ ಸಾವನ್ನಪ್ಪುವ ಮುನ್ನವೇ ಎಲ್ಲರ ಲೈಫ್ ಸೆಟಲ್ ಮಾಡಿದ್ದರು ಎಂದು ಹೇಳಲಾಗಿದೆ. ಮುತ್ತಪ್ಪ ರೈ ಬರೆದಿರುವ 41 ಪುಟಗಳ ವಿಲ್‌ನಲ್ಲಿ ಯಾರಿಗೆ ಎಷ್ಟು ಆಸ್ತಿ ಕೊಡಬೇಕು? ಸೈಟ್ ಹಾಗೂ ಮನೆಗಳನ್ನು ಯಾರು ಇಟ್ಟುಕೊಳ್ಳಬೇಕು.

ಸಾವಿಗೂ ಮುನ್ನ ವಿಲ್ ಮಾಡಿಟ್ಟ ಮುತ್ತಪ್ಪ ರೈ; ಯಾರಿಗೆ ಎಷ್ಟು ಆಸ್ತಿ..?

ಜಯಕರ್ನಾಟಕ ಸಂಘಟನೆ ಜವಾಬ್ದಾರಿ ಯಾರಿಗೆ ಎನ್ನುವುದನ್ನು ವಿಲ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ವಿಲ್ ಪ್ರಕಾರ ರೈ ಆಸ್ತಿ ಸುಮಾರು 2 ಸಾವಿರ ಕೋಟಿ ರುಪಾಯಿಗಳಷ್ಟಿದೆ ಎಂದು ತಿಳಿದು ಬಂದಿದೆ.  ಮಾಜಿ ಡಾನ್‌, ಜಯ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಮೇ. 15ರಂದು ಇಹಲೋಕ ತ್ಯಜಿಸಿದ್ದರು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ