Mysore: ನಾಡಹಬ್ಬ ಮೈಸೂರು ದಸರಾ ವೇಳಾಪಟ್ಟಿ ಬಿಡುಗಡೆ

Published : Sep 15, 2023, 05:47 PM ISTUpdated : Sep 15, 2023, 05:48 PM IST
Mysore: ನಾಡಹಬ್ಬ ಮೈಸೂರು ದಸರಾ ವೇಳಾಪಟ್ಟಿ ಬಿಡುಗಡೆ

ಸಾರಾಂಶ

ನಾಡಹಬ್ಬ ಮೈಸೂರು ದಸರಾ ವೇಳಾಪಟ್ಟಿ ಬಿಡುಗಡೆಯಾಗಿದೆ. ಅಕ್ಟೋಬರ್‌ 15 ರಿಂದ 26ರವರೆಗೆ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ವೇಳಾಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಅದರ ವಿವರ ಇಲ್ಲಿದೆ.  

ಮೈಸೂರು (ಸೆ.15): ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಆವರಣದಲ್ಲೀಗ ದಸರಾ ಸಿದ್ಧತೆಯ ಸಂಭ್ರಮ. ಇದೇ ವೇಳೆ ದಸರಾ ಸಮಿತಿ ನಾಡಹಬ್ಬದ ವೇಳಾಟ್ಟಿಯನ್ನು ಬಿಡುಗಡೆ ಮಾಡಿದೆ. ನವರಾತ್ರಿ ಆಚರಣೆಯ ವೇಳಾಪಟ್ಟಿ ಬಿಡುಗಡೆ ಮಾಡಿರುವ ಸಮಿತಿ, ಯಾವ ದಿನ ಯಾವ ಸಮಯಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿದೆ ಎನ್ನುವ ಮಾಹಿತಿಯನ್ನು ನೀಡಿದೆ. ಅಕ್ಟೋಬರ್‌ 23 ರ ಸೋಮವಾರದಂದು ಆಯುಧಪೂಜೆ ನಡೆಯಲಿದ್ದರೆ, ಅದರ ಮರುದಿನ ವಿಜಯದಶಮಿ ಸಂಭ್ರಮ ಆರಂಭವಾಗಲಿದೆ. ಅಂದು ಮಧ್ಯಾಹ್ನ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನಂದಿಧ್ವಜ ಪೂಜೆ ಮಾಡಲಿದ್ದಾರೆ, ಸಂಜೆ ಮೀನ ಲಗ್ನದಲ್ಲಿ ಜಂಬೂ ಸವಾರಿ ಪ್ರಾರಂಭವಾಗಲಿದೆ.

ಅಕ್ಟೋಬರ್‌ 15- ಭಾನುವಾರ 
- ಶರನ್ನವರಾತ್ರಿ ಪ್ರಾರಂಭ
- ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ಪೂಜೆ. (ಬೆಳಿಗ್ಗೆ 10.15 ರಿಂದ 10.36 ಶುಭ ವೃಶ್ಚಿಕ ಲಗ್ನದಲ್ಲಿ ಚಾಲನೆ)
ಅರಮನೆ ಪೂಜೆಗಳು: ಸಾಯಂಕಾಲ 6.30 ರಿಂದ 7.15 ಶುಭಮೇಷ ಲಗ್ನದಲ್ಲಿ ಆರಂಭ.

ಅಕ್ಟೋಬರ್‌ 20-ಶುಕ್ರವಾರ
ಕಾತ್ಯಾಯಿನೀ - ಸರಸ್ವತಿ ಪೂಜೆ.
(ಮೂಲ ನಕ್ಷತ್ರದಲ್ಲಿ ಸರಸ್ವತಿ ಪೂಜೆ ಪ್ರಾರಂಭ ಮಾಡಿ ಶ್ರವಣ ನಕ್ಷತ್ರದ ದಿನ ಅಂದರೆ 24-10-2023 ರ ಮಂಗಳವಾರ ವಿಸರ್ಜನೆ)

ಅಕ್ಟೋಬರ್‌ 21-ಶನಿವಾರ
ಕಾಳರಾತ್ರಿ, ಮಹಿಷಾಸುರ ಸಂಹಾರ.

ಅಕ್ಟೋಬರ್‌ 23-ಸೋಮವಾರ 
- ಆಯುಧ ಪೂಜೆ.

ಅಕ್ಟೋಬರ್‌ 24: ಮಂಗಳವಾರ
- ವಿಜಯದಶಮಿ.
ಮಧ್ಯಾಹ್ನ 1.46 ರಿಂದ 2:08 ಮಕರ ಲಗ್ನದಲ್ಲಿ ಮುಖ್ಯಮಂತ್ರಿಯವರಿಂದ ನಂದೀ ಧ್ವಜ ಪೂಜೆ.
ಮಧ್ಯಾಹ್ನ 4.40 ರಿಂದ 5.00ರ ಶುಭ ಮೀನ ಲಗ್ನದಲ್ಲಿ ಮಾನ್ಯ ಮುಖ್ಯಮಂತ್ರಿಯವರಿಂದ ಮತ್ತು ಗಣ್ಯಾತಿಗಣ್ಯರಿಂದ ಪುಷ್ಪಾರ್ಚನೆ,  ನಂತರ "ಜಂಬೂ ಸವಾರಿ" ಪ್ರಾರಂಭ.

ಅಕ್ಟೋಬರ್‌ 26-ಭಾನುವಾರ
ಬೆಟ್ಟದ ಶ್ರೀಚಾಮುಂಡೇಶ್ವರಿ ರಥೋತ್ಸವ.

ಬೆಂಗಳೂರು ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಅ.6ರಂದು ದಸರಾ ಕ್ರೀಡಾಕೂಟ ಆಯೋಜನೆ

ಸತ್ಯ-ಮಿಥ್ಯಗಳ ಮಧ್ಯೆ ಏನಿದು ಮಹಿಷ ದಸರಾ..? ಏನಿದರ ಮರ್ಮ..?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆಗೆ ಕರವೇ ಕೆಂಡ; ನಾರಾಯಣ ಗೌಡರ ಹೋರಾಟಕ್ಕೆ ಮಣಿದು ಹೊಸ ಅಧಿಸೂಚನೆ ಹೊರಡಿಸಿದ ಇಲಾಖೆ!
ಬೆಂಗಳೂರು ವಿವಿ ಫಲಿತಾಂಶ: ಫೇಲಾಗಿದ್ದ 400 ವಿದ್ಯಾರ್ಥಿಗಳೂ ಪಾಸ್!