ಮಾತೃ ಸಂಕಲ್ಪ: ಅಪ್ಪ ಕೊಡಿಸಿದ ಸ್ಕೂಟರ್‌ನಲ್ಲೇ 98,800 ಕಿಮೀ ಸಂಚರಿಸಿ ತಾಯಿಗೆ ತೀರ್ಥಯಾತ್ರೆ ಮಾಡಿಸಿದ ಮಗ!

Published : May 13, 2025, 09:08 AM IST
ಮಾತೃ ಸಂಕಲ್ಪ:  ಅಪ್ಪ ಕೊಡಿಸಿದ ಸ್ಕೂಟರ್‌ನಲ್ಲೇ 98,800 ಕಿಮೀ ಸಂಚರಿಸಿ ತಾಯಿಗೆ ತೀರ್ಥಯಾತ್ರೆ ಮಾಡಿಸಿದ ಮಗ!

ಸಾರಾಂಶ

ತ್ರೇತಾ ಯುಗದಲ್ಲಿ ಶ್ರವಣಕುಮಾರ ತನ್ನ ಅಂಧ ತಂದೆ-ತಾಯಿಯರನ್ನು ತಕ್ಕಡಿಯಲ್ಲಿ ಕೂರಿಸಿಕೊಂಡು ಹೆಗಲ ಮೇಲೆ ಹೊತ್ತುಕೊಂಡು ತೀರ್ಥಯಾತ್ರೆಗೆ ಹೊರಟ ಕಥೆ ಎಲ್ಲರಿಗೂ ಗೊತ್ತೇ ಇದೆ. ಈ ಕಲಿಯುಗದಲ್ಲಿಯೂ ಕೈತುಂಬ ಸಂಬಳ ಬರುತ್ತಿದ್ದ ಕೆಲಸವನ್ನು ಬಿಟ್ಟು ಮಾತೃ ಸಂಕಲ್ಪ ಯಾತ್ರೆ ಕೈಗೊಂಡು ತಂದೆ ಕೊಡಿಸಿದ್ದ ಸ್ಕೂಟರ್ ಮೇಲೆಯೇ ತನ್ನ ತಾಯಿಯನ್ನು ಕೂರಿಸಿಕೊಂಡು ತೀರ್ಥಯಾತ್ರೆ ಮಾಡಿಸುತ್ತಿರುವ ಮೈಸೂರಿನ ಕೃಷ್ಣಕುಮಾರ್ ತಾಯಂದಿರ ದಿನವಾದ ಭಾನುವಾರ ಕೆಜಿಎಫ್ ನಗರಕ್ಕೆ ಆಗಮಿಸಿದರು. 

ಕೆಜಿಎಫ್ (ಮೇ.13) ತ್ರೇತಾ ಯುಗದಲ್ಲಿ ಶ್ರವಣಕುಮಾರ ತನ್ನ ಅಂಧ ತಂದೆ-ತಾಯಿಯರನ್ನು ತಕ್ಕಡಿಯಲ್ಲಿ ಕೂರಿಸಿಕೊಂಡು ಹೆಗಲ ಮೇಲೆ ಹೊತ್ತುಕೊಂಡು ತೀರ್ಥಯಾತ್ರೆಗೆ ಹೊರಟ ಕಥೆ ಎಲ್ಲರಿಗೂ ಗೊತ್ತೇ ಇದೆ. ಈ ಕಲಿಯುಗದಲ್ಲಿಯೂ ಕೈತುಂಬ ಸಂಬಳ ಬರುತ್ತಿದ್ದ ಕೆಲಸವನ್ನು ಬಿಟ್ಟು ಮಾತೃ ಸಂಕಲ್ಪ ಯಾತ್ರೆ ಕೈಗೊಂಡು ತಂದೆ ಕೊಡಿಸಿದ್ದ ಸ್ಕೂಟರ್ ಮೇಲೆಯೇ ತನ್ನ ತಾಯಿಯನ್ನು ಕೂರಿಸಿಕೊಂಡು ತೀರ್ಥಯಾತ್ರೆ ಮಾಡಿಸುತ್ತಿರುವ ಮೈಸೂರಿನ ಕೃಷ್ಣಕುಮಾರ್ ತಾಯಂದಿರ ದಿನವಾದ ಭಾನುವಾರ ಕೆಜಿಎಫ್ ನಗರಕ್ಕೆ ಆಗಮಿಸಿದರು. 

ದೇಶ ಪರ್ಯಟನೆ ಮಾಡಬೇಕೆಂಬ 75 ವರ್ಷದ ತಾಯಿ ಚೂಡಾರತ್ನ ರವರ ಬಯಕೆಯನ್ನು ತೀರಿಸಲು ಕೃಷ್ಣಕುಮಾರ್ 2018ರ ಜನವರಿ 16 ರಂದು ತಮ್ಮ ತೀರ್ಥಯಾತ್ರೆಯನ್ನು ಪ್ರಾರಂಭಿಸಿ, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಆಂಧ್ರ ಪ್ರದೇಶ, ಕೇರಳ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗೋವಾ, ಪಶ್ಚಿಮ ಬಂಗಾಳ, ಬಿಹಾರ, ಅಸ್ಸಾಂ, ಒಡಿಶಾ, ಮಿಜೋರಾಂ, ಮೇಘಾಲಯ, ತ್ರಿಪುರಾ, ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದರು.

ವಿದೇಶಿ ಯಾತ್ರಾಸ್ಥಳಗಳಿಗೆ ಭೇಟಿ
ಬಳಿಕ ದೇಶದ ಗಡಿ ದಾಟಿ ನೇಪಾಳ, ಭೂತಾನ್, ಮ್ಯಾನ್ಮಾರ್‌ ದೇಶಗಳಿಗೂ ಸ್ಕೂಟರ್‌ನಲ್ಲೇ ತೇರಳಿ ಇದುವರೆಗೆ 98,800 ಕಿಲೋಮೀಟರ್ ಪ್ರಯಾಣ ಮಾಡಿ ತಮ್ಮ ತಾಯಿಗೆ ಪುಣ್ಯಕ್ಷೇತ್ರಗಳ ದರ್ಶನ ಮಾಡಿಸಿದ್ದಾರೆ. . 2001 ರಲ್ಲಿ ಕೃಷ್ಣಕುಮಾರ್ ತಮ್ಮ ತಂದೆ ದಕ್ಷಿಣಮೂರ್ತಿ ಮೊದಲ ಉಡುಗೊರೆಯಾಗಿ ಸ್ಕೂಟರ್ ಕೊಡಿಸಿದ್ದರು. 2015 ರಲ್ಲಿ ದಕ್ಷಿಣಮೂರ್ತಿ ನಿಧನರಾದರು. ತಮ್ಮ ಇಡೀ ಯಾತ್ರೆಯಲ್ಲಿ ಸ್ಕೂಟರ್ ಅನ್ನು ತಮ್ಮ ತಂದೆಯ ಪ್ರತಿರೂಪ ಎಂದೇ ಭಾವಿಸಿ ಕೃಷ್ಣ ಕುಮಾರ್ ತಮ್ಮ ತಾಯಿಯನ್ನು ಸ್ಕೂಟರ್ ಮೇಲೆಯೇ ಕುಳ್ಳರಿಸಿಕೊಂಡು ದೇಶ ಪರ್ಯಟನೆ ಮಾಡುತ್ತಿರುವುದಾಗಿ ತಿಳಿಸಿದರು. 

ಮಾತೃ ಸಂಕಲ್ಪ ಯಾತ್ರೆ

2018ರಲ್ಲಿ ಮಾತೃ ಸಂಕಲ್ಪ ಯಾತ್ರೆಯನ್ನು ಪ್ರಾರಂಭಿಸಿದ 2-3 ವರ್ಷಗಳ ಬಳಿಕ ಕೊರೊನಾ ವೈರಸ್ ಬಂದ ಹಿನ್ನಲೆಯಲ್ಲಿ ಭೂತಾನ್‌ನಲ್ಲಿ ಒಂದೂವರೆ ತಿಂಗಳ ಕಾಲ ತಂಗಿದ್ದು, ಲಾಕ್ ಡೌನ್ ಮುಗಿದ ಬಳಿಕ ಪಾಸ್ ಪಡೆದು ಮತ್ತೆ ಪ್ರಯಾಣ ಆರಂಭಿಸಿ ಮೈಸೂರಿನ ತಮ್ಮ ಮನೆಗೆ ವಾಪಸ್ಸಾಗಿದ್ದರು.

2022ರಲ್ಲಿ ಮುಂದುವರಿದ ಯಾತ್ರೆ

ಬಳಿಕ 2022 ರಲ್ಲಿ ಮತ್ತೆ ಜಮ್ಮು, ಕಾಶ್ಮೀರ, ಉತ್ತರಾಖಂಡ ಸೇರಿದಂತೆ ಈಶಾನ್ಯ ಭಾರತದ ಎಲ್ಲ ತೀರ್ಥಕ್ಷೇತ್ರಗಳ ದರ್ಶನ ಪಡೆದು ಒಂದು ಲಕ್ಷ ಕಿಲೋ ಮೀಟರ್ ಸನಿಹ ಬಂದು ತಲುಪಿದ್ದಾರೆ. ಕೆಜಿಎಫ್‌ನ ವಿವಿಧೆಡೆ ಅ‍ವರಿಗೆ ಸನ್ಮಾನಗಳು ನಡೆಯುತ್ತಿದ್ದು, ಬಳಿಕ ಇಲ್ಲಿಂದ ಅ‍ವರು ಮೈಸೂರಿಗೆ ತೆರಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ
ಬಿಜೆಪಿಯವರೇನು ಸೂಟ್‌ಕೇಸ್‌ ಕೊಟ್ಟು ಕಳುಹಿಸುತ್ತಿದ್ರಾ?: ಸಚಿವ ಸಂತೋಷ್‌ ಲಾಡ್‌ ತಿರುಗೇಟು