ನೇತ್ರಾವತಿ ಪೀಕ್ ಸ್ಪಾಟ್ ಚಾರಣ ಹೋಗಿದ್ದ ಮೈಸೂರು ಯುವಕ ಹೃದಯಘಾತದಿಂದ ಸಾವು

Published : Jun 30, 2023, 06:14 PM ISTUpdated : Jun 30, 2023, 06:22 PM IST
ನೇತ್ರಾವತಿ ಪೀಕ್ ಸ್ಪಾಟ್ ಚಾರಣ ಹೋಗಿದ್ದ ಮೈಸೂರು ಯುವಕ ಹೃದಯಘಾತದಿಂದ ಸಾವು

ಸಾರಾಂಶ

ಕುದುರೆಮುಖ -ನೇತ್ರಾವತಿ ಪೀಕ್ ಸ್ಪಾಟ್  ನಲ್ಲಿ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೈಸೂರು ಮೂಲದ ಏಳು ಯುವಕರ ತಂಡ ಚಾರಣ ಹೋಗಿತ್ತು.

ಚಿಕ್ಕಮಗಳೂರು (ಜೂ.30): ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗನೋರ್ವ ಹೃದಯಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕನಾಗಿದ್ದಾನೆ. ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್ ತೆರಳಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳುತ್ತಿದ್ದರು. ಪೀಕ್ ಗೆ ಹೋಗುವ ಮಾರ್ಗದಲ್ಲಿ ರಕ್ಷಿತ್ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ಇದ್ದು,  ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ಅರಣ್ಯ ಪ್ರದೇಶದಲ್ಲಿ  ಈ ಸ್ಥಳವಿದೆ. ಪೀಕ್ ನಿಂದ ಮೃತದೇಹವನ್ನ ಕಳಸಕ್ಕೆ ತಂದ ಕಳಸ ಪೊಲೀಸರು ತಂದಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಹೊಸಪೇಟೆ ಬಳಿ ಭೀಕರ ಅಪಘಾತ: ಬಳ್ಳಾರಿ ಕೌಲ್‌ಬಜಾರ್‌ನ ನಾಲ್ವರು ಸಾವು

ಪರಿಸರ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಮೆ!
ಕಾರವಾರ: ಇನ್ನು ಮುಂದೆ ಕರ್ನಾಟಕ ಅರಣ್ಯ ಇಲಾಖೆ ಅಧೀನದಲ್ಲಿರುವ ರಾಜ್ಯದ ಸಂರಕ್ಷಿತ ಪ್ರದೇಶಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಮೆ ಭದ್ರತೆ ಒದಗಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ.

ಈ ಕುರಿತು ಅವಶ್ಯಕ್ರಮ ಕೈಗೊಳ್ಳಲು ಪ್ರಧಾನ ಮುಖ್ಯ ಅರಣ್ಯಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರು ಹುಲಿ ಸಂರಕ್ಷಿತ ಪ್ರದೇಶಗಳ ನಿರ್ದೇಶಕರು, ವನ್ಯಜೀವಿ ಹಾಗೂ ಪ್ರಾದೇಶಿಕ ಅರಣ್ಯ ವಿಭಾಗಗಳ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಬುಧವಾರ ಪತ್ರ ಬರೆದಿದ್ದಾರೆ. ಬೆಳಗಾವಿಯ ವನ್ಯಜೀವಿ ಸಂರಕ್ಷಣಾವಾದಿ ಗಿರಿಧರ್‌ ಕುಲಕರ್ಣಿ ಮನವಿ ಮೇರೆಗೆ ಈ ಆದೇಶ ಹೊರಡಿಸಲಾಗಿದೆ.

HSRP Scam: ಹಳಿ ತಪ್ಪಿದ ಅತೀ ಸುರಕ್ಷಾ ನೋಂದಣಿ ಫಲಕ ಯೋಜನೆ, ಏನಿದು

ಪರಿಸರ ಪ್ರವಾಸೋದ್ಯಮ ಸ್ಥಳಗಳಲ್ಲಿ ಚಾರಣ, ಹಿನ್ನೀರು ಸಫಾರಿ, ಕಯಾಕಿಂಗ್‌, ಬೋಟಿಂಗ್‌, ರಾರ‍ಯಪ್ಟಿಂಗ್‌ ಸೇರಿ ಹಲವು ಚಟುವಟಿಕೆಯನ್ನು ಪ್ರವಾಸಿಗರಿಗೆ ಒದಗಿಸಲಾಗುತ್ತಿದೆ. ಕೆಲ ಚಟುವಟಿಕೆ ನೀರಿನಲ್ಲಿ ಮುಳುಗುವಿಕೆ, ವನ್ಯಜೀವಿಗಳಿಂದ ದಾಳಿ ಸೇರಿ ಅನೇಕ ಅಪಾಯ ಹೊಂದಿದ್ದು, ಆಕಸ್ಮಿಕವಾಗಿ ಸಾವು ಅಥವಾ ಶಾಶ್ವತ ಅಂಗವೈಕಲ್ಯ ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ಹಿನ್ನೆಲೆಯಲ್ಲಿ ವಿಮೆ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಕರ್ನಾಟಕ ಸರ್ಕಾರದ ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆ ಈಗಾಗಲೇ ತನ್ನ ಅಧೀನದಲ್ಲಿರುವ ಘಟಕಗಳಲ್ಲಿ ಈ ಸೌಲಭ್ಯ ಒದಗಿಸುತ್ತಿದೆ ಎಂದು ಹೇಳಿದರು.

ರಾಜ್ಯವು ಅಗಾಧವಾದ ವನ್ಯಜೀವಿ ಸಂಪತ್ತನ್ನು ಹೊಂದಿದ್ದು, ಹಲವು ಹುಲಿಸಂರಕ್ಷಿತ ಪ್ರದೇಶಗಳು, ರಾಷ್ಟ್ರೀಯ ಉದ್ಯಾನಗಳು ಹಾಗೂ ಅಭಯಾರಣ್ಯಗಳನ್ನು ಹೊಂದಿದೆ. ರಾಜ್ಯದ ಪ್ರಕೃತಿ ಸೌಂದರ್ಯ ಸಂರಕ್ಷಿತ ಪ್ರದೇಶಗಳ ಹೊರಗೂ ಹಬ್ಬಿದ್ದು ಹಲವು ಗಿರಿಧಾಮಗಳು, ಜಲಪಾತಗಳನ್ನು ಹೊಂದಿದ್ದು ತನ್ಮೂಲಕ ದೇಶದಲ್ಲೇ ಪರಿಸರ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾದ ರಾಜ್ಯಗಳಲ್ಲೊಂದು. ಅಲ್ಲದೆ, ರಾಜ್ಯದ ಕರಾವಳಿಯೂ ಹಲವು ಸುಪ್ರಸಿದ್ಧ ತಾಣಗಳನ್ನು ಹೊಂದಿದೆ. ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಗೆ ಇಲ್ಲಿ ವಿಪುಲ ಅವಕಾಶಗಳಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌