
ಮೈಸೂರು (ಅ.15): ಡಾ ಬಿಆರ್ ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕಾರ ಮಾಡಿ 70 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಎರಡು ದಿನಗಳ ಬೌದ್ಧ ಮಹಾ ಸಮ್ಮೇಳನ ಗರ್ಜಿಸಿದೆ. ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ, ಬೌದ್ಧ ಚಿಂತನೆಗಳ ಪ್ರಸಾರಕ್ಕೆ ಒತ್ತು ನೀಡಿದರು.
ಸಮ್ಮೇಳನದಲ್ಲಿ ಗೃಹ ಸಚಿವ ಜಿ ಪರಮೇಶ್ವರ್, ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್ಸಿ ಮಹದೇವಪ್ಪ ಸೇರಿದಂತೆ ಶಾಸಕರಾದ ಎಆರ್ ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ನರೇಂದ್ರಸ್ವಾಮಿ, ಡಿ. ರವಿಶಂಕರ್, ದರ್ಶನ್ ಧ್ರುವನಾರಾಯಣ್ ಎಂಎಲ್ಸಿ ಡಾ ಡಿ ತಿಮ್ಮಯ್ಯ, ಡಾ ಯತೀಂದ್ರ ಇತರ ಪ್ರಮುಖರು ಭಾಗಿಯಾಗಿದ್ದರು.
ಇದನ್ನೂ ಓದಿ: 'ಸಂವಿಧಾನ ತಿಳಿಯದ ಅಜ್ಞಾನಿಗಳು..' ಖರ್ಗೆ, ದಿನೇಶ್ ಗುಂಡೂರಾವ್ ವಿರುದ್ಧ ಸಿಟಿ ರವಿ ವಾಗ್ದಾಳಿ
ಬೌದ್ದ ಧರ್ಮ ಬೆಳೆಯಲು ಮನುವಾದಿಗಳು ಬಿಡಲಿಲ್ಲ: ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ ಸಮ್ಮೇಳನದಲ್ಲಿ ಮಾತನಾಡಿ, ಬೌದ್ಧ ಧರ್ಮ 6ನೇ ಶತಮಾನದಲ್ಲಿ ಅಸ್ತಿತ್ವಕ್ಕೆ ಬಂದು ವಿಶ್ವದ ಇತರ ರಾಷ್ಟ್ರಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಿತು. ಆದರೆ ಭಾರತದಲ್ ಬೌದ್ಧ ಧರ್ಮ ಬೆಳೆಯಲು ಮನುವಾದಿಗಳು ಬಿಡಲಿಲ್ಲ, ಬೌದ್ಧ ಧರ್ಮ ಬೆಳೆಯುವುದನ್ನು ತಡೆದರು ಎಂದು ಆರೋಪಿಸಿದರು.
ಬುದ್ಧ ಅಂಬೇಡ್ಕರ್ ಚಿಂತನೆ ಹೆಚ್ಚು ಪ್ರಚುರಪಡಿಸಬೇಕು:
ಬುದ್ಧ ಹಾಗೂ ಅಂಬೇಡ್ಕರ್ ಚಿಂತನೆಗಳನ್ನು ಹೆಚ್ಚು ಪ್ರಚುರಪಡಿಸಬೇಕು. ಈ ಬೌದ್ಧ ಮಹಾ ಸಮ್ಮೇಳನ ಕೇವಲ ದಲಿತರು, ಬೌದ್ಧರಿಗೆ ಸೀಮಿತವಾಗಬಾರದು; ಎಲ್ಲ ವರ್ಗದ ಜನರು ಭಾಗಿಯಾಗಿ ಸಾಮಾಜಿಕ ನ್ಯಾಯದ ಸಂದೇಶವನ್ನು ಎಲ್ಲೆಡೆಗೆ ತಲುಪಿಸಬೇಕು ಎಂದು ಕರೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ