
ಮೈಸೂರು, (ಜೂನ್.22): ಆಷಾಢ ಮಾಸದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಬರುವ ಭಕ್ತರಿಗೆ ಎರಡು ಡೋಸ್ ಕಡ್ಡಾಯ ಮಾಡಲಾಗಿದೆ. ಈಗಂತ ಮೈಸೂರು ಉಸ್ತುವಾರಿ ಸಚಿವ ಎಸ್ .ಟಿ.ಸೋಮಶೇಖರ್ ಹೇಳಿದ್ದಾರೆ.
ಇಂದು(ಬುಧವಾರ) ಮೈಸೂರಿನಲ್ಲಿ ಯೋಗ ಕಾರ್ಯಕ್ರಮದ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಆಯೋಜನೆ ಮೂಲಕ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ನಾದದೇವತೆ ಚಾಮುಂಡೇಶ್ವರಿ ತಾಯಿಗೆ ಆಷಾಧ ಮಾಸದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಈ ಪೂಜೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೊರೋನಾ ಎರಡನೇ ಡೋಸ್ ಪಡೆದಿರುವ ಜೊತೆಗೆ ಕೋವಿಡ್ ನೆಗೆಟಿವ್ ಸರ್ಟೀಫಿಕ್ ತರುವುದು ಕಡ್ಡಾಯ ಎಂದು ಹೇಳಿದರು.
ಪ್ರತಿ ವರ್ಷ ಆಷಾಢದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತೆ. ಆದ್ರೆ, ಕೊರೋನಾ ಕಾರಣದಿಂದ ಕಳೆದ ಎರಡು ವರ್ಷಗಲೀಮದ ಅಷಾಢ ಮಾಸದ ವಿಶೇಷ ಪೂಜೆ ಇದ್ದಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿ ಆಷಾಢದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪೂಜೆಗೆ ಆಗಮಿಸುವ ಸಾಧ್ಯತೆಗಳು ಹೆಚ್ಚಿವೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಗೂ ಕೋವಿಡ್ ನೆಗೆಟಿವ್ ವರದಿ ಪ್ರತಿ ಕಡ್ಡಾಯ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ