ಮೈಸೂರು ಪಾಲಿಕೆ ಆಯುಕ್ತೆ ರಾಜೀನಾಮೆ, ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ

Published : Jun 03, 2021, 05:57 PM ISTUpdated : Jun 03, 2021, 07:31 PM IST
ಮೈಸೂರು ಪಾಲಿಕೆ ಆಯುಕ್ತೆ ರಾಜೀನಾಮೆ, ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ

ಸಾರಾಂಶ

* ಮೈಸೂರು ಪಾಲಿಕೆ ಆಯುಕ್ತೆ ರಾಜೀನಾಮೆ * ರೋಹಿಣಿ ಸಿಂಧೂರಿಗೆ ನಡೆಗೆ ಬೇಸತ್ತು ಮೈಸೂರು ಪಾಲಿಕೆ ಆಯುಕ್ತೆ ರಾಜೀನಾಮೆ *ರಾಜ್ಯದ ಮುಖ್ಯ ಕಾರ್ಯದರ್ಶಿಗೆ ರಾಜಿನಾಮೆ ಪತ್ರ ಬರೆದ ಶಿಲ್ಪಾನಾಗ್

ಮೈಸೂರು, (ಜೂನ್.03): ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಮುಖ್ಯ ಕಾರ್ಯದರ್ಶಿಗೆ ರಾಜಿನಾಮೆ ಪತ್ರ ಬರೆದಿದ್ದು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಟಾರ್ಚರ್‌ನಿಂದ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

"

ಈ ಬಗ್ಗೆ ಇಂದು (ಗುರುವಾರ) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಪಾಲಿಕೆ‌ ಆಯುಕ್ತೆ ಶಿಲ್ಪಾ ನಾಗ್,  ತುಂಬಾ ನೋವಿನಲ್ಲಿಯೇ ನಾನು ಸುದ್ದಿಗೋಷ್ಠಿ ಮಾಡುತ್ತಿದ್ದೇನೆ. ಸೂಕ್ತವಾಗಿ ಕೊರೋನಾ ನಿರ್ವಹಣೆ ಮಾಡಿದ್ರೂ, ಪಾಲಿಕೆ ಕೆಲಸ ಮಾಡ್ತಿಲ್ಲ ಎಂದು ಬಿಂಬಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪ ಮಾಡಿದರು.

ತಾಕತ್ತಿದ್ರೆ ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಿಸು: ಪ್ರತಾಪ್ ಸಿಂಹಗೆ ಸವಾಲು

ಈ ರೀತಿಯ ಜಿಲ್ಲಾಧಿಕಾರಿ ಯಾವುದೇ ಜಿಲ್ಲೆಗೂ ಸಿಗಬಾರದು. ಟಾರ್ಗೆಟ್ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ನಗರ ಪರಿಸ್ಥಿತಿಯನ್ನು ಗಲೀಜು ಎಬ್ಬಿಸುತ್ತಿದ್ದಾರೆ. ಯಾಕೆ ಈ ರೀತಿ ಹಠ ಮಾಡುತ್ತಿದ್ದಾಳೋ ಗೊತ್ತಿಲ್ಲ. ನಾನು 2014 ನೇ ಬ್ಯಾಚ್ ಅಧಿಕಾರಿ. ಅವರು 2009 ನೇ ಬ್ಯಾಚ್ ಅಧಿಕಾರಿ. ನನ್ನ ಮೇಲೆ ದ್ವೇಷ ಇದ್ರೆ ನನ್ನ ಮೇಲೆ ಸಾಧಿಸಲಿ. ಮೈಸೂರು ಜನರ ಮೇಲೆ ಅದು ಪರಿಣಾಮ ಬೀರುವುದು ಬೇಡ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ರಾಜೀನಾಮೆ ಕೊಟ್ಟು ಬೇರೆ ಜೀವನ ನಡೆಸುತ್ತೇನೆ‌. ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ತೊಂದರೆ ಆಗೋದು ಬೇಡ ಅಂತ ಮಕ್ಕಳ ತಜ್ಞರನ್ನರನ್ನೂ ಒಳಗೊಂಡು ಕಾರ್ಯ ನಿರ್ವಹಣೆ ಮಾಡುತ್ತಿದ್ದೆವು‌. ನಿಮ್ಮ ದುರಂಹಕಾರ ಬಿಡದಿದ್ರೆ ಮೈಸೂರು ಬಿಡಿ. ಇಲ್ಲ ಅಂದ್ರೆ ನಾನು ಬಿಟ್ಟರೆ ಮೈಸೂರು ನಗರಕ್ಕೆ ಒಳ್ಳೆಯದು ಆಗುತ್ತದೆ ಅಂದ್ರೆ ನಾನು ಹೋಗುತ್ತೇನೆ. ಅವಾಗ್ಲಾದ್ರೂ ಮೈಸೂರು ನಗರ ಚೆನ್ನಾಗಿರಲಿ. ನಾನೇ ಸುಪ್ರೀಂ ಅಂತ ಅಧಿಕಾರಿಗಳ ಸಭೆಯಲ್ಲಿ ವರ್ತನೆ ಮಾಡುತ್ತಿದ್ದಾರೆ ಎಂದು ರೋಹಿಣಿ ಸಿಂಧೂರಿ ನಡೆಗೆ ಬೇಸರ ವ್ಯಕ್ತಪಡಿಸಿರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪ್ರಧಾನಿ ಮೋದಿಗೆ ಸಿಎಂ ನೀಡಿದ 18 ಬೇಡಿಕೆಗಳ ಪಟ್ಟಿಯಲ್ಲೇನಿದೆ? ಸೈಲೆಂಟಾಗಿ ಸಿದ್ದು ಕಿವಿಯಲ್ಲಿ ನಮೋ ಹೇಳಿದ್ದೇನು?
'ಕರ್ನಾಟಕ ನನಗೆ ಪ್ರೇರಣೆ': ಭೈರವೈಕ್ಯ ಮಂದಿರ ಉದ್ಘಾಟಿಸಿ ‘ವಿಕಸಿತ ಭಾರತ' ನಿರ್ಮಾಣಕ್ಕೆ ನಮೋ ಪಣ, ಮೋದಿ ಹೇಳಿದ 9 ಸಂಕಲ್ಪಗಳಾವುವು?