ಮಾತಿನ ಭರದಲ್ಲಿ ಹೆಚ್‌ಸಿ ಮಹದೇವಪ್ಪ ಎಡವಟ್ಟು; ಅರ್ಜುನ ಬದಲಿಗೆ ಅಂಬಾರಿ ಹೊರುವ ಅಭಿಮನ್ಯು ಸತ್ತು ಹೋಗಿದೆ ಎಂದ ಸಚಿವ!

Published : Aug 21, 2024, 11:03 PM ISTUpdated : Aug 21, 2024, 11:17 PM IST
ಮಾತಿನ ಭರದಲ್ಲಿ ಹೆಚ್‌ಸಿ ಮಹದೇವಪ್ಪ ಎಡವಟ್ಟು; ಅರ್ಜುನ ಬದಲಿಗೆ ಅಂಬಾರಿ ಹೊರುವ ಅಭಿಮನ್ಯು ಸತ್ತು ಹೋಗಿದೆ ಎಂದ ಸಚಿವ!

ಸಾರಾಂಶ

ವಿಶ್ವವಿಖ್ಯಾತ, ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜಪಡೆಗೆ ಚಾಲನೆ ನೀಡುವ ವೇಳೆ ಸಚಿವ ಮಹದೇಶ ಯಡವಟ್ಟು ಮಾಡಿದ ಘಟನೆ ನಡೆಯಿತು.

ಮೈಸೂರು (ಆ.21): ವಿಶ್ವವಿಖ್ಯಾತ, ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜಪಡೆಗೆ ಚಾಲನೆ ನೀಡುವ ವೇಳೆ ಸಚಿವ ಮಹದೇಶ ಯಡವಟ್ಟು ಮಾಡಿದ ಘಟನೆ ನಡೆಯಿತು.

ಮೈಸೂರು ಹುಣಸೂರು ತಾಲೂಕಿನ ನಾಗರಹೊಳೆ ಅಭಯಾರಣ್ಯದ ಅಂಚಿನಲ್ಲಿರುವ ವೀರನಹೊಸಹಳ್ಳಿಯಲ್ಲಿ ಇಂದು(ಆ.21) ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬದ ಗಜ ಪಯಣಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡುವ ಭರದಲ್ಲಿ ಅರ್ಜುನ ಆನೆ ಎನ್ನುವ ಬದಲಿಗೆ ಅಭಿಮನ್ಯು ಆನೆ ಸತ್ತು ಹೋಗಿದೆ ಎಂದರು.  

ಅರೆಸ್ಟ್ ಮಾಡೋಕೆ ಒಬ್ಬ ಪೊಲೀಸ್ ಸಾಕು; ನೂರು ಸಿದ್ದರಾಮಯ್ಯ ಬಂದ್ರೂ ಏನು ಮಾಡೋಕಾಗೊಲ್ಲ ಎಂದ ಹೆಚ್‌ಡಿಕೆಗೆ ಸಿಎಂ ಟಾಂಗ್!

'ಅಭಿಮನ್ಯು ಆನೆ ನಮ್ಮನ್ನ ಅಗಲಿ ಹೋಗಿರುವುದು ದುಃಖದ ಸಂಗತಿಯಾಗಿದೆ. ಅಭಿಮನ್ಯು ಸ್ಮಾರಕ ಮಾಡಬೇಕು. ಅಭಿಮನ್ಯು ಸವಿನೆನಪಿಗಾಗಿ ಕೆಲವು ಬಹುಮಾನ ಘೋಷಣೆ ಮಾಡಬೇಕು ಎಂದು ನಮ್ಮ ಶಾಸಕರು ಹೇಳುತ್ತಿದ್ದಾರೆ. ಸಚಿವರ ಗಮನಕ್ಕೆ ತಂದು ಈ ಬಾರಿ ಹಿಂದಿಗಿಂತಲೂ ವಿಜೃಂಭಣೆಯಿಂದ ದಸರಾ ಆಚರಣೆ ಮಾಡುತ್ತೇವೆ ಎಂದರು. ಸಚಿವರು ಬದುಕಿರುವ ಅಭಿಮನ್ಯು ಆನೆಯನ್ನ ಮಾತಿನಲ್ಲೇ ಕೊಂದುಬಿಟ್ಟರಲ್ಲ ಎಂದು ಹಿಂಬದಿಯಿದ್ದವರು ಮುಖ ಮುಖ ನೋಡಲಾರಂಭಿಸಿದರು.

ಗಜಪಯಣ ಆರಂಭ:  ಇಂದು, ನಾಳೆ ಪಯಣಿಸಿ ಅಶೋಕಪುರ ಅರಣ್ಯಭವನದಲ್ಲಿ ವಾಸ್ತವ್ಯ ಹೂಡಲಿವೆ ಬಳಿಕ ಶುಕ್ರವಾರ ಮೈಸೂರು ಆರಮನೆ ತಲುಪಲಿದ್ದು, ಈಗಾಗಲೇ ಆನೆ, ಮಾವುತರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ