ದಸರಾ ಕವಿಗೋಷ್ಠಿ ಪಟ್ಟಿಯಿಂದ ಪ್ರೊ. ಭಗವಾನ್‌ಗೆ ಕೊಕ್‌: ರಾಜೇಂದ್ರರಿಂದ ಚಾಲನೆ

Published : Oct 16, 2023, 04:52 AM IST
ದಸರಾ ಕವಿಗೋಷ್ಠಿ ಪಟ್ಟಿಯಿಂದ ಪ್ರೊ. ಭಗವಾನ್‌ಗೆ ಕೊಕ್‌: ರಾಜೇಂದ್ರರಿಂದ ಚಾಲನೆ

ಸಾರಾಂಶ

 ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ಒಕ್ಕಲಿಗ ಸಮುದಾಯದ ಪ್ರತಿಭಟನೆ ತೀವ್ರವಾದ ಹಿನ್ನೆಲೆಯಲ್ಲಿ ಜಿಲ್ಲಾ‌ ಕನ್ನಡ ಸಾಹಿತ್ಯ ಪರಿಷತ್‌ ದಸರಾ ಕವಿಗೋಷ್ಠಿಯಿಂದ ಭಗವಾನ್ ಅವರ ಹೆಸರು ಕೈಬಿಟ್ಟಿದೆ.

ಮೈಸೂರು (ಅ.16) :  ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ಒಕ್ಕಲಿಗ ಸಮುದಾಯದ ಪ್ರತಿಭಟನೆ ತೀವ್ರವಾದ ಹಿನ್ನೆಲೆಯಲ್ಲಿ ಜಿಲ್ಲಾ‌ ಕನ್ನಡ ಸಾಹಿತ್ಯ ಪರಿಷತ್‌ ದಸರಾ ಕವಿಗೋಷ್ಠಿಯಿಂದ ಭಗವಾನ್ ಅವರ ಹೆಸರು ಕೈಬಿಟ್ಟಿದೆ.

ಜಿಲ್ಲಾ‌ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದಸರಾ ಕವಿಗೋಷ್ಠಿಯನ್ನು ನಗರದ ವಿಜಯನಗರ ಮೊದಲ ಹಂತದಲ್ಲಿರುವ ಕಸಪಾ ಭವನದಲ್ಲಿ ಅ.16ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿತ್ತು. ಕವಿಗೋಷ್ಠಿಗೆ ಪ್ರೊ.ಭಗವಾನರು ಚಾಲನೆ ನೀಡಬೇಕಿತ್ತು.

ಅ.13ರಂದು ನಗರದಲ್ಲಿ ನಡೆದ ಮಹಿಷ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಭಾಷಣದ ವೇಳೆ ಒಕ್ಕಲಿಗರ ಭಾವನೆಗಳಿಗೆ ಧಕ್ಕೆ ತರುವ ರೀತಿ ಹೇಳಿಕೆ ನೀಡಿದ್ದಾರೆ ಎಂದು ಭಗವಾನ್‌ರ ವಿರುದ್ಧ ತಿರುಗಿ ಬಿದ್ದಿರುವ ಸಮುದಾಯದ ಮುಖಂಡರು ಯುವ ದಸರಾ ಕವಿಗೋಷ್ಠಿ ಸಮಿತಿಗೆ ಪತ್ರ ಬರೆದು ಭಗವಾನರ ಹೆಸರು ಕೈಬಿಡುವಂತೆ ಕೋರ ಲಾಗಿತ್ತು ಎನ್ನಲಾಗಿದೆ. ಈ ಪತ್ರಕ್ಕೆ ಮನ್ನಣೆ ನೀಡಿದ ಸಮಿತಿಯು ಉದ್ಘಾಟಕರಾಗಿ ಪಾಲ್ಗೊಳ್ಳಬೇಕಿದ್ದ ಭಗವಾನ್‌ ಹೆಸರನ್ನು ಕೈಬಿಟ್ಟು ಅವರ ಬದಲಿಗೆ ಜನಪದ ತಜ್ಞರಾದ ಡಾ.ಡಿ.ಕೆ.ರಾಜೇಂದ್ರ ಅವರ ಹೆಸರನ್ನು ಸೇರಿಸಲಾಗಿದ್ದು, ಅವರು ಸೋಮವಾರ ನಡೆಯುವ ದಸರಾ ಕವಿಗೋಷ್ಠಿಗೆ ಚಾಲನೆ ನೀಡಲಿದ್ದಾರೆ.

 

'ಒಕ್ಕಲಿಗರು ಸಂಸ್ಕೃತಿ ಹೀನರು' ಅವಹೇಳನಕಾರಿ ಹೇಳಿಕೆ: ನಮಗೆ ಸಂಸ್ಕೃತಿ ಪಾಠ ಮಾಡುವಂತೆ ಭಗವಾನ್ ಮನೆಮುಂದೆ ಒಕ್ಕಲಿಗರು ಪಟ್ಟು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌