ರೋಹಿಣಿ ಸಿಂಧೂರಿ ಆದೇಶ ಬದಲಾಯಿಸಿದ ಮೈಸೂರು ನೂತನ ಡಿಸಿ

Published : Jun 07, 2021, 07:56 PM ISTUpdated : Jun 07, 2021, 08:23 PM IST
ರೋಹಿಣಿ ಸಿಂಧೂರಿ ಆದೇಶ ಬದಲಾಯಿಸಿದ ಮೈಸೂರು ನೂತನ ಡಿಸಿ

ಸಾರಾಂಶ

* ರೋಹಿಣಿ ಸಿಂಧೂರಿ ಆದೇಶವನ್ನು ಬದಲಾಯಿಸಿದ ಮೈಸೂರು ನೂತನ ಜಿಲ್ಲಾಧಿಕಾರಿ * ಹೊಸ  ಪ್ರಕಟಣೆ ಹೊರಡಿಸಿದ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ * ಈ ಹಿಂದೆ ರೋಹಿಣಿ ಸಿಂಧೂರಿ ಹೊರಡಿಸಿದ್ದ ಆದೇಶ ಹಿಂಪಡೆದ ಡಿಸಿ

ಮೈಸೂರು, (ಜೂನ್.07): ಜಿಲ್ಲೆಯಲ್ಲಿ ವಾರದಲ್ಲಿ ಮೂರು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೊರಡಿಸಿದ್ದ ಆದೇಶವನ್ನು ಬದಲಾಯಿಸಲಾಗಿದೆ.

ಹೌದು..ವಾರದಲ್ಲಿ ಮೂರು ದಿನ ಬೆಳಿಗ್ಗೆ 6ರಿಂದ ಬೆಳಿಗ್ಗೆ 10 ಗಂಟೆವರೆಗೆ ಮಾತ್ರ ಖರೀದಿಗೆ ಇದ್ದು ಅವಕಾಶವನ್ನು ಇದೀಗ ವಾರದ ಏಳು ದಿನಗಳ ವರೆಗೂ ನೀಡಲಾಗಿದೆ.

ಅಧಿಕಾರ ಹಸ್ತಾಂತರಕ್ಕೆ ಬಾರದೇ ಅಸಮಾಧಾನ ಹೊರಹಾಕಿದ ರೋಹಿಣಿ ಸಿಂಧೂರಿ

ನೂತನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌, ರೋಹಿಣಿ ಸಿಂಧೂರಿ ಜೂನ್ 5ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದ್ದು, ವಾರದ ಏಳೂ ದಿನ ಬೆಳಿಗ್ಗೆ 6ರಿಂದ ಬೆಳಿಗ್ಗೆ 10 ಗಂಟೆವರೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಸರ್ಕಾರದ ಹಿಂದಿನ ಮಾರ್ಗಸೂಚಿ ಪ್ರಕಾರ ಪ್ರತಿ ದಿನ ಬೆಳಿಗ್ಗೆ 6ರಿಂದ ಬೆಳಿಗ್ಗೆ 10 ಗಂಟೆ ವರೆಗೆ ಚಟುವಟಿಕೆಗಳಿಗೆ ಅವಕಾಶವಿರಲಿದೆ ಎಂದು ಡಾ.ಬಗಾದಿ ಗೌತಮ್‌ ಸೋಮವಾರ ಪ್ರಕಟಣೆ ಹೊರಡಿಸಿದ್ದಾರೆ.

ಜೂನ್ 7ರಿಂದ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಬೆಳಿಗ್ಗೆ 6ರಿಂದ ಬೆಳಿಗ್ಗೆ 10 ಗಂಟೆವರೆಗೆ ಮಾತ್ರ ಖರೀದಿಗೆ ರೋಹಿಣಿ ಸಿಂಧೂರಿ ಅವಕಾಶ ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ